AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವರ ಜೊತೆ ರೈತರ 5ನೇ ಸುತ್ತಿನ ಮಾತುಕತೆ ಆರಂಭ: ಬಸ್​ನಲ್ಲೇ ಸಭೆಗೆ ಆಗಮಿಸಿದ ಕೃಷಿಕರು

ನಗರದ ವಿಜ್ಞಾನ ಭವನದಲ್ಲಿ ರೈತ ನಾಯಕರ ಜೊತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಮತ್ತು ಪಂಜಾಬ್​ ಸಂಸದ ಸೋಮ್ ಶೇಖರ್ 5 ನೇ ಸುತ್ತಿನ ಮಾತುಕತೆ ನಡೆಸುತ್ತಿದ್ದಾರೆ.

ಕೇಂದ್ರ ಸಚಿವರ ಜೊತೆ ರೈತರ 5ನೇ ಸುತ್ತಿನ ಮಾತುಕತೆ ಆರಂಭ: ಬಸ್​ನಲ್ಲೇ ಸಭೆಗೆ ಆಗಮಿಸಿದ ಕೃಷಿಕರು
ಬಸ್​ನಲ್ಲಿ ಸಭೆ ನಡೆಯುವ ವಿಜ್ಞಾನ ಭವನಕ್ಕೆ ಆಗಮಿಸಿದ ರೈತರು
guruganesh bhat
| Edited By: |

Updated on:Dec 05, 2020 | 4:41 PM

Share

ದೆಹಲಿ : ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ಮತ್ತು ಪಂಜಾಬ್​ ಸಂಸದ ಸೋಮ್ ಶೇಖರ್ ಅವರುಗಳು ರೈತ ನಾಯಕರ ಜೊತೆ ವಿಜ್ಞಾನ ಭವನದಲ್ಲಿ 5 ನೇ ಸುತ್ತಿನ ಮಾತುಕತೆ ನಡೆಸುತ್ತಿದ್ದಾರೆ. ಈ ವೇಳೆ, ಹಿಂದಿನ ಮಾತುಕತೆಯಲ್ಲಿ ಸರ್ಕಾರ ತನ್ನ ಒಪ್ಪಿಗೆ ಸೂಚಿಸಿದ್ದ ವಿಷಯಗಳನ್ನು ಲಿಖಿತ ರೂಪದಲ್ಲಿ ನೀಡುವಂತೆ ರೈತರು ಬೇಡಿಕೆಯಿಟ್ಟಿದ್ದಾರೆ.

ಸಭೆಗೆ ಆಗಮಿಸುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ದೋಭಾ ಕಿಸಾನ್ ಸಂಘರ್ಷ ಸಮಿತಿ ಸರ್ಕಾರ ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದರಷ್ಟೇ ಪ್ರತಿಭಟನೆ ನಿಲ್ಲಿಸುತ್ತೇವೆ ಎಂದು ಸ್ಪಷ್ಟವಾಗಿ ತಿಳಿಸಿದೆ. ಜೊತೆಗೆ, ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸದ್ದಿದ್ದರೆ ಸಭೆಯಿಂದ ಹೊರನಡೆಯುವುದಾಗಿ ಹೇಳಿದೆ.

ಬಸ್​ನಲ್ಲಿ ಸಭೆಗೆ ಆಗಮಿಸಿದ ರೈತರು ಅಂದ ಹಾಗೆ, ರೈತರು ಸಭೆ ನಡೆಯಲಿದ್ದ ವಿಜ್ಞಾನ ಭವನಕ್ಕೆ ಇಂಡಿಯನ್ ಟೂರಿಸ್ಟ್ ಟ್ರಾನ್ಸ್​ಪೋರ್ಟ್ ಅಸೋಸಿಯೇಶನ್ (ITTA) ಆಯೋಜಿಸಿದ್ದ​ ಬಸ್​ಗಳಲ್ಲಿ ಆಗಮಿಸಿದರು. ಬಸ್​ಗಳ ಮೇಲೆ ನಾವು ರೈತರನ್ನು ಬೆಂಬಲಿಸುತ್ತೇವೆ ಎಂಬ ಬ್ಯಾನರ್​ಗಳನ್ನು ಅಳವಡಿಸಲಾಗಿತ್ತು. ನಾನು ರೈತ ಕುಟುಂಬದಿಂದ ಬಂದವನು. ರೈತರ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ. ಹಾಗಾಗಿ, ಕೇಂದ್ರ ಸರ್ಕಾರದ ಜೊತೆ ರೈತರು ನಡೆಸುತ್ತಿರುವ ಎಲ್ಲಾ ಸುತ್ತಿನ ಮಾತುಕತೆಗೂ ಸ್ವತಃ ನಾವೇ ವಾಹನ ವ್ಯವಸ್ಥೆ ಮಾಡಿದ್ದೇವೆ ಎಂದು ITTA ಅಧ್ಯಕ್ಷ ಸತೀಶ್ ಸೆಹ್ರಾವತ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಸರ್ಕಾರ ತನ್ನ ಮೂರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ರೈತರು ಆಗ್ರಹಿಸಿದ್ದಾರೆ. ಹೀಗಾಗಿ, ಡಿಸೆಂಬರ್ 8ಕ್ಕೆ ಭಾರತ್ ಬಂದ್​ಗೆ ಕರೆ ಕೊಟ್ಟಿದ್ದಾರೆ. ಈ ಬಂದ್​ಗೆ ದೇಶದ ಹಲವು ಸಂಘಟನೆಗಳು ತಮ್ಮ ಬೆಂಬಲ ವ್ಯಕ್ತಪಡಿಸುತ್ತಿವೆ.

Delhi Chaloಗೆ ಸಿಗುತ್ತಿದೆ ರಾಷ್ಟ್ರವ್ಯಾಪಿ ಬೆಂಬಲ: ಪಂಜಾಬ್​ ಕೃಷಿಕರಿಗೆ ದೊರೆಯಲಿದೆ ಕರುನಾಡ ರೈತರ ಬಲ

Published On - 4:29 pm, Sat, 5 December 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ