AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಳಿ ತಲಾಖ್‌ಗೆ ಸಂಬಂಧಿಸಿದ ಕಾನೂನನ್ನು ಸುಪ್ರೀಂಕೋರ್ಟ್​​ನಲ್ಲಿ ಸಮರ್ಥಿಸಿಕೊಂಡ ಕೇಂದ್ರ

"ವಿವಾಹಿತ ಮುಸ್ಲಿಂ ಮಹಿಳೆಯರ ಲಿಂಗ ನ್ಯಾಯ ಮತ್ತು ಲಿಂಗ ಸಮಾನತೆಯ ದೊಡ್ಡ ಸಾಂವಿಧಾನಿಕ ಗುರಿಗಳನ್ನು ಖಚಿತಪಡಿಸಿಕೊಳ್ಳಲು ಈ ಕಾಯ್ದೆ ಸಹಾಯ ಮಾಡುತ್ತದೆ. ಇದು ಅವರ ಮೂಲಭೂತ ಹಕ್ಕುಗಳಾದ ತಾರತಮ್ಯ ಹೋಗಲಾಡಿಸಿ ಸಬಲೀಕರಣಕ್ಕೆ ಸಹಾಯ ಮಾಡುತ್ತದೆ" ಎಂದು ಕೇಂದ್ರವು ತನ್ನ ಅಫಿಡವಿಟ್​​​ನಲ್ಲಿ ತಿಳಿಸಿದೆ.

ತ್ರಿವಳಿ ತಲಾಖ್‌ಗೆ ಸಂಬಂಧಿಸಿದ ಕಾನೂನನ್ನು ಸುಪ್ರೀಂಕೋರ್ಟ್​​ನಲ್ಲಿ ಸಮರ್ಥಿಸಿಕೊಂಡ ಕೇಂದ್ರ
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on: Aug 19, 2024 | 5:34 PM

Share

ದೆಹಲಿ ಆಗಸ್ಟ್ 19: ತ್ರಿವಳಿ ತಲಾಖ್ (triple talaq) ವಿರುದ್ಧದ ತನ್ನ 2019 ಕಾನೂನನ್ನು ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ, ಈ ಪದ್ಧತಿಯು ವಿವಾಹ ವ್ಯವಸ್ಥೆಗೆ “ಮಾರಕ” ಎಂದು ಸುಪ್ರೀಂಕೋರ್ಟ್‌ನಲ್ಲಿ (Supreme Court) ಹೇಳಿದೆ. ಕಾನೂನನ್ನು ಪ್ರಶ್ನಿಸುವ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಸಲ್ಲಿಸಿದ ಅಫಿಡವಿಟ್‌ನಲ್ಲಿ, 2017 ರಲ್ಲಿ ಸುಪ್ರೀಂಕೋರ್ಟ್ ಈ ಪದ್ಧತಿಯನವ್ನು ರದ್ದುಗೊಳಿಸಿದ್ದರೂ, ಸಮುದಾಯದಲ್ಲಿ ” ವಿಚ್ಛೇದನಗಳ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ಸಾಕಷ್ಟು ನಿರೋಧಕವಾಗಿ ಕೆಲಸ ಮಾಡಿಲ್ಲ” ಎಂದು ಕೇಂದ್ರ ಹೇಳಿದೆ. ವಿವಾಹಿತ ಮುಸ್ಲಿಂ ಮಹಿಳೆಯರನ್ನು ತ್ರಿವಳಿ ತಲಾಖ್ ಮೂಲಕ ವಿಚ್ಛೇದನದಿಂದ ರಕ್ಷಿಸಲು ಸಂಸತ್ತು ಕಾನೂನನ್ನು ಅಂಗೀಕರಿಸಿದೆ ಎಂದು ಸರ್ಕಾರ ಹೇಳಿದೆ.

“ವಿವಾಹಿತ ಮುಸ್ಲಿಂ ಮಹಿಳೆಯರ ಲಿಂಗ ನ್ಯಾಯ ಮತ್ತು ಲಿಂಗ ಸಮಾನತೆಯ ದೊಡ್ಡ ಸಾಂವಿಧಾನಿಕ ಗುರಿಗಳನ್ನು ಖಚಿತಪಡಿಸಿಕೊಳ್ಳಲು ಈ ಕಾಯ್ದೆ ಸಹಾಯ ಮಾಡುತ್ತದೆ. ಇದು ಅವರ ಮೂಲಭೂತ ಹಕ್ಕುಗಳಾದ ತಾರತಮ್ಯ ಹೋಗಲಾಡಿಸಿ ಸಬಲೀಕರಣಕ್ಕೆ ಸಹಾಯ ಮಾಡುತ್ತದೆ” ಎಂದು ಕೇಂದ್ರವು ತನ್ನ ಅಫಿಡವಿಟ್​​​ನಲ್ಲಿ ತಿಳಿಸಿದೆ.

ಜಮಿಯತ್ ಉಲಮಾ-ಐ-ಹಿಂದ್ ಮತ್ತು ಸಮಸ್ತ ಕೇರಳ ಜಮಿಯತುಲ್ ಉಲೇಮಾ ಎಂಬ ಎರಡು ಮುಸ್ಲಿಂ ಸಂಘಟನೆಗಳು ಕಾನೂನನ್ನು “ಅಸಂವಿಧಾನಿಕ” ಎಂದು ಘೋಷಿಸುವಂತೆ ನ್ಯಾಯಾಲಯವನ್ನು ಕೋರಿವೆ. ಸಿವಿಲ್ ಕಾನೂನಿನಡಿಯಲ್ಲಿ ಇತರ ಧರ್ಮಗಳಲ್ಲಿ ಮದುವೆ ಮತ್ತು ವಿಚ್ಛೇದನವನ್ನು ಬಿಟ್ಟು ಒಂದು ಧರ್ಮಕ್ಕೆ ವಿಚ್ಛೇದನದ ನಿರ್ದಿಷ್ಟ ವಿಧಾನವನ್ನು ಅಪರಾಧೀಕರಿಸುವುದು ತಾರತಮ್ಯವನ್ನು ಸೃಷ್ಟಿಸುತ್ತದೆ, ಇದು ಆರ್ಟಿಕಲ್ 15 ಅನ್ನು ಉಲ್ಲಂಘಿಸುತ್ತದೆ ಎಂದು ಜಮಿಯತ್ ತನ್ನ ಅರ್ಜಿಯಲ್ಲಿ ವಾದಿಸಿದೆ.

ಆಗಸ್ಟ್ 22, 2017 ರಂದು, ಸುಪ್ರೀಂಕೋರ್ಟ್ ತ್ವರಿತ ತ್ರಿವಳಿ ತಲಾಖ್ (ತಲಾಖ್-ಎ-ಬಿದ್ದಾ) ಅಸಂವಿಧಾನಿಕ ಎಂದು ಘೋಷಿಸಿತು. ಆಗಸ್ಟ್ 23, 2019 ರಂದು, ಮುಸ್ಲಿಂ ಮಹಿಳೆಯರ (ವಿವಾಹದ ಮೇಲಿನ ಹಕ್ಕುಗಳ ರಕ್ಷಣೆ) ಕಾಯಿದೆ, 2019 ರ ಸಿಂಧುತ್ವವನ್ನು ಪರಿಶೀಲಿಸಲು ನ್ಯಾಯಾಲಯವು ಸಮ್ಮತಿಸಿದೆ. ಕಾನೂನಿನ ಉಲ್ಲಂಘನೆ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಇರುತ್ತದೆ.  ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಮೇಲ್ಮನೆಯಲ್ಲಿ ತ್ರಿವಳಿ ತಲಾಖ್ ಮಸೂದೆಯನ್ನು ಜುಲೈ 30, 2019 ರಂದು ಪರವಾಗಿ 99 ಮತ್ತು ವಿರುದ್ಧವಾಗಿ 84 ಮತಗಳೊಂದಿಗೆ ಅಂಗೀಕರಿಸಿದೆ. ಈ ಪದ್ಧತಿಯನ್ನು ರದ್ದುಗೊಳಿಸುವುದು ಬಿಜೆಪಿಯ ಪ್ರಮುಖ ಭರವಸೆಯಾಗಿತ್ತು.

ಇದನ್ನೂ ಓದಿ: ರಷ್ಯಾ ಮತ್ತು ಉಕ್ರೇನ್ ನಡುವೆ ಭಾರತ ಮಧ್ಯಸ್ಥಿಕೆ ವಹಿಸುವುದಿಲ್ಲ

ಸಾಕಷ್ಟು ಸಂಖ್ಯೆಯ ಕಾರಣದಿಂದ ರಾಜ್ಯಸಭೆಯಲ್ಲಿ ಶಾಸನವನ್ನು ಅಂಗೀಕರಿಸಲು ಹೆಣಗಾಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಹಲವಾರು ಸುಗ್ರೀವಾಜ್ಞೆಗಳನ್ನು ಹೊರಡಿಸಿತ್ತು.

ಕಾನೂನಿನ ಪ್ರಕಾರ, ತ್ರಿವಳಿ ತಲಾಖ್‌ಗೆ ಒಳಗಾದ ಮುಸ್ಲಿಂ ಮಹಿಳೆ ತನಗೆ ಮತ್ತು ತನ್ನ ಅವಲಂಬಿತ ಮಕ್ಕಳಿಗೆ ತನ್ನ ಪತಿಯಿಂದ ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹಳಾಗಿದ್ದಾಳೆ. ಹೆಚ್ಚುವರಿಯಾಗಿ, ಅವಳು ತನ್ನ ಅಪ್ರಾಪ್ತ ಮಕ್ಕಳ ಪಾಲನೆಯನ್ನು ಪಡೆಯಬಹುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು