Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟಾರ್ನಿ ಜನರಲ್​ ಕೆ.ಕೆ.ವೇಣುಗೋಪಾಲ್ ಅಧಿಕಾರ ಅವಧಿಯನ್ನು ಮತ್ತೊಂದು ವರ್ಷಕ್ಕೆ ವಿಸ್ತರಿಸಿದ ಕೇಂದ್ರ ಸರ್ಕಾರ..

2ಜಿ ಸ್ಪೆಕ್ಟ್ರಮ್​ ಹೈಪ್ರೊಫೈಲ್ ಪ್ರಕರಣದ ವಿಚಾರಣೆ ವೇಳೆ, ಸುಪ್ರೀಂಕೋರ್ಟ್​ಗೆ ನೆರವಾಗಲು ಇವರನ್ನು ಅಮಿಕಸ್ ಕ್ಯೂರಿಯನ್ನಾಗಿ ನೇಮಿಸಲಾಗಿತ್ತು. ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ವೇಳೆ ಇವರು ಎಲ್​.ಕೆ.ಆಡ್ವಾಣಿ ಪರ ವಾದಿಸಿದ್ದರು.

ಅಟಾರ್ನಿ ಜನರಲ್​ ಕೆ.ಕೆ.ವೇಣುಗೋಪಾಲ್ ಅಧಿಕಾರ ಅವಧಿಯನ್ನು ಮತ್ತೊಂದು ವರ್ಷಕ್ಕೆ ವಿಸ್ತರಿಸಿದ ಕೇಂದ್ರ ಸರ್ಕಾರ..
ಕೆ.ಕೆ.ವೇಣುಗೋಪಾಲ್​
Follow us
TV9 Web
| Updated By: Lakshmi Hegde

Updated on: Jun 28, 2021 | 2:58 PM

ದೆಹಲಿ: ದೇಶದ ಅಟಾರ್ನಿ ಜನರಲ್​ ಕೆ.ಕೆ.ವೇಣುಗೋಪಾಲ್​ ಅವರ ಅಧಿಕಾರ ಅವಧಿಯನ್ನು ಇನ್ನೊಂದು ವರ್ಷಕ್ಕೆ ವಿಸ್ತರಿಸಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ. ಕೆ.ಕೆ.ವೇಣುಗೋಪಾಲ್​ ಅಧಿಕಾರ ಅವಧಿ ಇದು ಎರಡನೇ ಬಾರಿಗೆ ವಿಸ್ತರಣೆಯಾಗುತ್ತಿದ್ದು, ಅವರು 2022ರ ಜೂನ್​ 30ರವರೆಗೆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಕೆ.ಕೆ.ವೇಣುಗೋಪಾಲ್​ ಅವರು 2017ರಲ್ಲಿ, ಮೂರು ವರ್ಷಗಳ ಅವಧಿಗೆ ಅಟಾರ್ನಿ ಜನರಲ್ ಆಗಿ ನೇಮಕಗೊಂಡಿದ್ದರು. 2020ರಲ್ಲೇ ಅವರ ಅಧಿಕಾರ ಅವಧಿ ಮುಗಿಯಬೇಕಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು 2021ರ ಜೂ.30ರವರೆಗೆ ವಿಸ್ತರಿಸಿತ್ತು. ಇದೀಗ ಅವರ ನಿವೃತ್ತಿಗೆ ಇನ್ನೆರಡು ದಿನ ಇರಬೇಕಾದರೆ ಮತ್ತೊಂದು ವರ್ಷಗಳ ಕಾಲ ವಿಸ್ತರಣೆಯಾಗಿದೆ.

ಮುಕುಲ್​ ರೋಹಟಗಿ ನಂತರ ಅಟಾರ್ನಿ ಜನರಲ್​ ಹುದ್ದೆಗೆ ಏರಿದ್ದ ಕೆ.ಕೆ.ವೇಣುಗೋಪಾಲ್​ ಆಧಾರ್​, ರಫೇಲ್​ ಜೆಟ್​​ನಂತಹ ಮಹತ್ವದ ಪ್ರಕರಣಗಳಲ್ಲಿ ಕೇಂದ್ರ ಸರ್ಕಾರದ ಪರ ವಾದಿಸಿ ಗೆದ್ದಿದ್ದಾರೆ. ಭಾರತದ ಅಟಾರ್ನಿ ಜನರಲ್​​ರನ್ನು ಸಂವಿಧಾನದ ಆರ್ಟಿಕಲ್​ 76ರ ಅಡಿಯಲ್ಲಿ, ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ. ಸುಪ್ರೀಂಕೋರ್ಟ್​ ನ್ಯಾಯಾಧೀಶರಾಗಿ ನೇಮಕವಾಗಲು ಇರಬೇಕಾದ ಅರ್ಹತೆಗಳೇ ಈ ಹುದ್ದೆಗೂ ಅನ್ವಯ ಆಗುತ್ತವೆ.  ಕೆ.ಕೆ.ವೇಣುಗೋಪಾಲ್​ಗೆ ಸದ್ಯ 89 ವರ್ಷ. ಮೂಲತಃ ಕಾಸರಗೋಡಿನವರಾಗಿರುವ ಇವರು, ಖ್ಯಾತ ಸಾಂವಿಧಾನಿಕ ತಜ್ಞರಾಗಿದ್ದು, ಪದ್ಮ ವಿಭೂಷಣ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು. ಎಪ್ಪತ್ತರ ದಶಕದಲ್ಲಿ ಮೊರಾರ್ಜಿ ದೇಸಾಯಿ ಸರ್ಕಾರದ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಕೆಲಸ ಮಾಡಿದ್ದಾರೆ.

2ಜಿ ಸ್ಪೆಕ್ಟ್ರಮ್​ ಹೈಪ್ರೊಫೈಲ್ ಪ್ರಕರಣದ ವಿಚಾರಣೆ ವೇಳೆ, ಸುಪ್ರೀಂಕೋರ್ಟ್​ಗೆ ನೆರವಾಗಲು ಇವರನ್ನು ಅಮಿಕಸ್ ಕ್ಯೂರಿಯನ್ನಾಗಿ ನೇಮಿಸಲಾಗಿತ್ತು. ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ವೇಳೆ ಇವರು ಎಲ್​.ಕೆ.ಆಡ್ವಾಣಿ ಪರ ವಾದಿಸಿದ್ದರು. ಭಾರತೀಯ ನ್ಯಾಯಾಲಯಗಳಲ್ಲಿ ಮಹಿಳೆಯರ ಪ್ರಮಾಣ ಹೆಚ್ಚಬೇಕು ಎಂಬುದು ಇವರ ಬಲವಾದ ಅಭಿಪ್ರಾಯ. ಭಾರತೀಯ ಕೋರ್ಟ್​​ಗಳಲ್ಲಿ ಮಹಿಳಾ ಜಡ್ಜ್​ಗಳ ಸಂಖ್ಯೆ ಹೆಚ್ಚಬೇಕು. ಇದರಿಂದಾಗಿ ಲೈಂಗಿಕ ದೌರ್ಜನ್ಯದ ಪ್ರಕರಣಗಳ ವಿಚಾರಣೆ ಹೆಚ್ಚು ಸಂವೇದನಾ ಶೀಲವಾಗಿ ಮತ್ತು ಸಹಾನುಭೂತಿಯಿಂದ ನಡೆಯುತ್ತದೆ ಎಂದು ವೇಣುಗೋಪಾಲ್​ ಕಳೆದ ವರ್ಷ ಹೇಳಿದ್ದರು.

ಇದನ್ನೂ ಓದಿ: ಜೂನ್ 30, ಜುಲೈ 1ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ನೀರು ಸರಬರಾಜು ಸ್ಥಗಿತ (Centre extends tenure of Attorney General KK Venugopal)

ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್