AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ಸುಪ್ರೀಂ ಕೋರ್ಟ್ ಅಂಗಳಕ್ಕೆ ಚೆಂಡೆಸೆದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಹೊಸ ಕೃಷಿ ಕಾಯ್ದೆಗಳನ್ನು ಹೇಗೂ ಹಿಂಪಡೆಯುವುದಿಲ್ಲ. ಹಾಗಾಗಿ, ರೈತರು ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ಕಾಯಬೇಕು ಎಂದು 8ನೇ ಸುತ್ತಿನ ಸಭೆಯಲ್ಲಿ ತಿಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

Delhi Chalo | ಸುಪ್ರೀಂ ಕೋರ್ಟ್ ಅಂಗಳಕ್ಕೆ ಚೆಂಡೆಸೆದ ಕೇಂದ್ರ ಸರ್ಕಾರ
ದೆಹಲಿಯ ಗಢಿಭಾಗದಲ್ಲಿ ಪ್ರತಿಭಟನಾನಿರತ ರೈತರು
TV9 Web
| Edited By: |

Updated on:Apr 06, 2022 | 9:23 PM

Share

ದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ರೈತರು ನಡೆಸುತ್ತಿರುವ ಹೋರಾಟ ಇತ್ಯರ್ಥವಾಗುವ ಲಕ್ಷಣಗಳು ಕಂಡುಬರುತ್ತಿಲ್ಲ. ಕೇಂದ್ರ ಮತ್ತು ರೈತ ಮುಖಂಡರ ನಡುವೆ ನಿನ್ನೆ ನಡೆದ 8ನೇ ಸುತ್ತಿನ ಸಭೆಯೂ ಸಫಲವಾಗಿಲ್ಲ. ಈ ನಡುವೆ, ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಗಳ ವಿಚಾರವಾಗಿ ಒರಟಾಗಿ ಪ್ರತಿಕ್ರಿಯಿಸಿರುವ ಬಗ್ಗೆ ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರ ಹೊಸ ಕೃಷಿ ಕಾಯ್ದೆಗಳನ್ನು ಹೇಗೂ ಹಿಂಪಡೆಯುವುದಿಲ್ಲ. ಹಾಗಾಗಿ, ರೈತರು ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ಕಾಯಬೇಕು ಎಂದು ತಿಳಿಸಿದೆ. ಈ ಮೂಲಕ, ಸರ್ಕಾರ ರೈತ ಹೋರಾಟದ ಚೆಂಡನ್ನು ತನ್ನ ಅಂಗಳದಿಂದ ಸುಪ್ರೀಂ ಕೋರ್ಟ್ ಕಡೆಗೆ ಎಸೆದಿದೆ.

ಸರ್ವೋಚ್ಛ ನ್ಯಾಯಾಲಯವು ನೂತನ ಕೃಷಿ ಕಾನೂನುಗಳ ಕುರಿತ ಪ್ರಕರಣವನ್ನು ಸೋಮವಾರ (ಜ.11) ಆಲಿಸಲಿದೆ. ಇನ್ನು, ಕೇಂದ್ರ ಮತ್ತು ರೈತರ ನಡುವಿನ 9ನೇ ಸುತ್ತಿನ ಮಾತುಕತೆ ಜನವರಿ 15ಕ್ಕೆ ನಿಗದಿಯಾಗಿದೆ.

ರೈತರು ಹಾಗೂ ಕೇಂದ್ರದ ನಡುವೆ ಸುಸೂತ್ರವಾಗಿ ಮಾತುಕತೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ಔಪಚಾರಿಕ ಪ್ರತಿಕ್ರಿಯೆಯನ್ನು ನೀಡುವಂತೆ ಸುಪ್ರೀಂ ಕೋರ್ಟ್ ಒತ್ತಾಯಮಾಡಬಾರದು ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಮನವಿ ಮಾಡಿದೆ.

ದೇಶದ ವಿವಿಧ ಭಾಗದ ರೈತ ಮುಖಂಡರನ್ನು ಹೊಂದಿರುವ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ರೈತ ಮುಖಂಡರು, ಸಮಸ್ಯೆ ಪರಿಹರಿಸುವಲ್ಲಿ ನ್ಯಾಯಾಲಯದ ನಿರ್ಧಾರವನ್ನು ಅನುಸರಿಸಲು ಆಸಕ್ತಿ ವಹಿಸಿದಂತೆ ಕಾಣಲಿಲ್ಲ. ರೈತ ಸಮಸ್ಯೆಯು ಕೇವಲ ತಾಂತ್ರಿಕ ಅಥವಾ ಕಾನೂನಾತ್ಮಕ ವಿಚಾರವಲ್ಲ ಎಂದು ತಿಳಿಸಿ ಪ್ರತಿಭಟನೆ ಮುಂದುವರೆಸಿದ್ದರು.

Published On - 2:28 pm, Sat, 9 January 21

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ