AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್​ ಹತ್ಯೆ ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 11 ಲಕ್ಷ ರೂ.ಪರಿಹಾರ ನೀಡಲಿರುವ ಕೇಂದ್ರ ಸರ್ಕಾರ

ನಾಗಾಲ್ಯಾಂಡ್​ನ ಮೋನ್​​ನಲ್ಲಿ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಲ್ಲಿ ತಪ್ಪಾಗಿ ಭಾವಿಸಿ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ  ಪ್ರಕರಣವನ್ನು ಮೇಜರ್​ ಜನರಲ್​ ಶ್ರೇಣಿ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಲು ಭಾರತೀಯ ಸೇನೆ ನಿರ್ಧರಿಸಿದೆ ಎನ್ನಲಾಗಿದೆ.

ನಾಗಾಲ್ಯಾಂಡ್​ ಹತ್ಯೆ ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 11 ಲಕ್ಷ ರೂ.ಪರಿಹಾರ ನೀಡಲಿರುವ ಕೇಂದ್ರ ಸರ್ಕಾರ
ನಾಗಾಲ್ಯಾಂಡ್​​ನಲ್ಲಿ ಮೃತರ ಅಂತಿಮ ಕ್ರಿಯೆ
TV9 Web
| Edited By: |

Updated on: Dec 06, 2021 | 2:31 PM

Share

ನಾಗಾಲ್ಯಾಂಡ್​​ನಲ್ಲಿ ನಿನ್ನೆ ಭದ್ರತಾ ಪಡೆಗಳ ಗುಂಡಿನ ದಾಳಿಗೆ 14 ಮಂದಿ ನಾಗರಿಕರು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇಂದು ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಮಾತನಾಡಲಿದ್ದಾರೆ. ಮೃತರ ಕುಟುಂಬಕ್ಕೆ ತಲಾ 11 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದ್ದಾಘಿ ಸಿಎಂ ನಿಫಿಯೋ ಮಾಹಿತಿ ನೀಡಿದ್ದಾರೆ. ತಲಾ 5 ಲಕ್ಷ ರೂಪಾಯಿ ಕೊಡುವುದಾಗಿ ನಾಗಾಲ್ಯಾಂಡ್ ರಾಜ್ಯ ಸರ್ಕಾರ ಪ್ರಕಟಿಸಿದೆ. ಹಾಗೇ, ಇಂದು ಓಟಿಂಗ್​ ಗ್ರಾಮದಲ್ಲಿ ನಡೆದ ಮೃತರ ಅಂತಿಮ ಸಂಸ್ಕಾರದಲ್ಲಿ ಮುಖ್ಯಮಂತ್ರಿ ನಿಫಿಯೂ ರಿಯೋ ಪಾಲ್ಗೊಂಡಿದ್ದರು. 

ನಿನ್ನೆ ಮೋನ್​ ಜಿಲ್ಲೆಯ ಓಟಿಂಗ್ ಗ್ರಾಮದ ಸಮೀಪ ನಡೆದ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆ ವೇಳೆ ಸೇನೆ ತಪ್ಪಾಗಿ ಕೂಲಿ ಕಾರ್ಮಿಕರ ಟ್ರಕ್​ ಮೇಲೆ ಗುಂಡಿನ ದಾಳಿ ನಡೆಸಿತ್ತು. ಅದರಲ್ಲಿ 14 ನಾಗರಿಕರು ಸಾವನ್ನಪ್ಪಿದ್ದಾರೆ. ಅದನ್ನು ನೋಡಿದ ಸ್ಥಳೀಯರು ಆಕ್ರೋಶಗೊಂಡು ಭದ್ರತಾ ಪಡೆಗಳ ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಅದರಲ್ಲಿ ಯೋಧನೊಬ್ಬ ಮೃತಪಟ್ಟಿದ್ದಾರೆ. ಒಟ್ಟಾರೆ 11 ಮಂದಿ ಗಾಯಗೊಂಡಿದ್ದಾರೆ. ಈ ಅವಘಡವೀಗ ರಾಷ್ಟ್ರಾದ್ಯಂತ ಸಂಚಲನ ಮೂಡಿಸಿದ್ದು, ವಿರೋಧ ಪಕ್ಷಗಳು ತೀವ್ರ ಕಿಡಿಕಾರುತ್ತಿವೆ. ಇಂದು ಟಿಎಂಸಿಯ ಐವರು ಮುಖಂಡರನ್ನೊಳಗೊಂಡ ನಿಯೋಗವೊಂದು ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ.

ನಾಗಾಲ್ಯಾಂಡ್​ನ ಮೋನ್​​ನಲ್ಲಿ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಲ್ಲಿ ತಪ್ಪಾಗಿ ಭಾವಿಸಿ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ  ಪ್ರಕರಣವನ್ನು ಮೇಜರ್​ ಜನರಲ್​ ಶ್ರೇಣಿ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಲು ಭಾರತೀಯ ಸೇನೆ ನಿರ್ಧರಿಸಿದ್ದು, ಇನ್ನು ಸಿಬ್ಬಂದಿ ವಿಚಾರಣೆಯನ್ನು ಕೋರ್ಟ್​ನಲ್ಲಿ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾಗಿ ಸೇನಾ ಮೂಲಗಳು ತಿಳಿಸಿವೆ. ಈ ಮಧ್ಯೆ ರಾಜ್ಯದ ಬುಡಕಟ್ಟು ಜನಾಂಗದ ಪ್ರಮುಖ ಸಂಘಟನೆಯೊಂದು, ಭದ್ರತಾ ಪಡೆಯ ದಾಳಿಯಲ್ಲಿ ಮೃತಪಟ್ಟವರು 14 ಮಂದಿ ನಾಗರಿಕರಲ್ಲ, 17 ಮಂದಿ ಎಂದು ಪ್ರತಿಪಾದಿಸುತ್ತಿದ್ದು, ಪೊಲೀಸರು ಅಲ್ಲಗಳೆದಿದ್ದಾರೆ.

ಇದನ್ನೂ ಓದಿ: ನಾನು ಇನ್ಮುಂದೆ ಕಣ್ಣೀರು ಹಾಕಲ್ಲ: ಮಂಡ್ಯದಲ್ಲಿ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಹೇಳಿಕೆ

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ