AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತಮುಖಂಡರೊಂದಿಗಿನ 7ತಾಸು ಮಾತುಕತೆ ಬಳಿಕ..‘ನಮಗೆ ದುರಹಂಕಾರ ಇಲ್ಲ’ವೆಂದ ಕೇಂದ್ರ ಸಚಿವ

ದೆಹಲಿ: ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ಉಗ್ರಹೋರಾಟ ನಡೆಸುತ್ತಿರುವ ರೈತರೊಂದಿಗೆ ಇಂದು ಕೇಂದ್ರ ಸರ್ಕಾರ ಮಾತುಕತೆ ನಡೆಸಿದ್ದು, ಯಾವುದೇ ಒಂದು ನಿರ್ಣಯಕ್ಕೆ ಬರಲು ಸಾಧ್ಯವಾಗಲಿಲ್ಲ. ಹಾಗಾಗಿ, ಡಿಸೆಂಬರ್5ರಂದು ಮತ್ತೊಂದು ಹಂತದ ಮಾತುಕತೆ ನಡೆಯಲಿದೆ. ಕೃಷಿ ಮಸೂದೆ ಪಾಸ್ ಆಗುವುದಕ್ಕೂ ಮೊದಲಿನಿಂದಲೂ ಶುರುವಾದ ಹೋರಾಟ ಇತ್ತೀಚೆಗೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಂಜಾಬ್, ಹರ್ಯಾಣ, ಉತ್ತರಾಖಂಡ ಸೇರಿ ಐದಾರು ರಾಜ್ಯಗಳ ಸಾವಿರಕ್ಕೂ ಹೆಚ್ಚು ರೈತರು ದೆಹಲಿ ಚಲೋ ನಡೆಸಿದ್ದಾರೆ. ಕೇಂದ್ರಸರ್ಕಾರದ ಯಾವುದೇ ಮಾತಿಗೂ ಜಗ್ಗುತ್ತಿಲ್ಲ. ಕೇಂದ್ರ ಸರ್ಕಾರ ಸಂಸತ್ತಿನ […]

ರೈತಮುಖಂಡರೊಂದಿಗಿನ 7ತಾಸು ಮಾತುಕತೆ ಬಳಿಕ..‘ನಮಗೆ ದುರಹಂಕಾರ ಇಲ್ಲ’ವೆಂದ ಕೇಂದ್ರ ಸಚಿವ
ಕೇಂದ್ರ ಕೃಷಿ ಸಚಿವರು ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರು.
Lakshmi Hegde
|

Updated on:Dec 03, 2020 | 8:41 PM

Share

ದೆಹಲಿ: ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ಉಗ್ರಹೋರಾಟ ನಡೆಸುತ್ತಿರುವ ರೈತರೊಂದಿಗೆ ಇಂದು ಕೇಂದ್ರ ಸರ್ಕಾರ ಮಾತುಕತೆ ನಡೆಸಿದ್ದು, ಯಾವುದೇ ಒಂದು ನಿರ್ಣಯಕ್ಕೆ ಬರಲು ಸಾಧ್ಯವಾಗಲಿಲ್ಲ. ಹಾಗಾಗಿ, ಡಿಸೆಂಬರ್5ರಂದು ಮತ್ತೊಂದು ಹಂತದ ಮಾತುಕತೆ ನಡೆಯಲಿದೆ. ಕೃಷಿ ಮಸೂದೆ ಪಾಸ್ ಆಗುವುದಕ್ಕೂ ಮೊದಲಿನಿಂದಲೂ ಶುರುವಾದ ಹೋರಾಟ ಇತ್ತೀಚೆಗೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಪಂಜಾಬ್, ಹರ್ಯಾಣ, ಉತ್ತರಾಖಂಡ ಸೇರಿ ಐದಾರು ರಾಜ್ಯಗಳ ಸಾವಿರಕ್ಕೂ ಹೆಚ್ಚು ರೈತರು ದೆಹಲಿ ಚಲೋ ನಡೆಸಿದ್ದಾರೆ. ಕೇಂದ್ರಸರ್ಕಾರದ ಯಾವುದೇ ಮಾತಿಗೂ ಜಗ್ಗುತ್ತಿಲ್ಲ. ಕೇಂದ್ರ ಸರ್ಕಾರ ಸಂಸತ್ತಿನ ವಿಶೇಷ ಅಧಿವೇಶನ ನಡೆಸಿ, ಮೂರು ವಿವಾದಾತ್ಮಕ ಕಾಯ್ದೆಗಳನ್ನು ಹಿಂಪಡೆಯಲು ಕೊನೇ ಅವಕಾಶ ನೀಡುತ್ತಿದ್ದೇವೆ ಎಂದು ಎಚ್ಚರಿಕೆ ನೀಡಿದ್ದರು. ಅಂತೂ ಇಂದು 40 ರೈತ ಮುಖಂಡರನ್ನೊಳಗೊಂಡ ನಿಯೋಗ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಯಿತು. ಸುಮಾರು ಏಳು ತಾಸುಗಳ ಕಾಲ ರೈತ ಮುಖಂಡರು ಮತ್ತು ಕೇಂದ್ರಸಚಿವರ ನಡುವೆ ಮಾತುಕತೆ ನಡೆಯಿತು.

ನಂತರ ಮಾತನಾಡಿ, ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್​, ಇಂದು ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಸೌಹಾರ್ದಯುತ ಮಾತುಕತೆ ನಡೆದಿದೆ. ಈ ವಿಚಾರದಲ್ಲಿ ನಮ್ಮ ಸರ್ಕಾರಕ್ಕೆ ಯಾವುದೇ ಅಹಂಕಾರ ಇಲ್ಲ. ಶನಿವಾರ ಮತ್ತೊಂದು ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಹಾಗೇ, ಕನಿಷ್ಠ ಬೆಂಬಲ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ರೈತರಿಗೆ ಕಾನೂನಾತ್ಮಕವಾಗಿ ಇನ್ನಷ್ಟು ಹಕ್ಕು ನೀಡುವುದನ್ನು ಸರ್ಕಾರ ಪರಿಗಣನೆ ಮಾಡುತ್ತದೆ. ರೈತರು ತಮ್ಮ ಪ್ರತಿಭಟನೆ ನಿಲ್ಲಿಸಿದರೆ ನಿಜಕ್ಕೂ ಖುಷಿ ಎಂದು ಹೇಳಿದ್ದಾರೆ.

ಇಂದಿನ ಸಭೆಯಲ್ಲಿ ಏನಾಯ್ತು? ಇಂದು ಕೇಂದ್ರ ಸರ್ಕಾರ ಮತ್ತು ರೈತ ಪ್ರತಿನಿಧಿಗಳ ನಡುವಿನ ಸಭೆಯಲ್ಲಿ ಮೊದಲು, ರೈತರೇ ಮಾತನಾಡಿದರು. ಹೊಸ ಕೃಷಿ ಕಾಯ್ದೆಗಳು ಎಷ್ಟು ಅಸಮರ್ಪಕ? ಹೇಗೆ ಮಾರಕ ಎಂಬುದನ್ನು ಅವರು ಹೇಳಿದ ಬಳಿಕ, ಕೇಂದ್ರ ಸಚಿವರು ತಮ್ಮ ನಿಲುವನ್ನು ಹೇಳಿದ್ದಾರೆ. ಅಲ್ಲದೆ, ಈ ಮೂರು ಕೃಷಿ ಕಾಯ್ದೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ್ದು ದೃಢ ನಿರ್ಧಾರ. ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಆದರೆ ರೈತರಿಗೆ ಹೇಗೆ ಅನುಕೂಲ ಮಾಡಿಕೊಡಬಹುದು ಎಂಬ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ರೈತರಿಗೆ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಊಟಬೇಡವೆಂದ ರೈತರು ಇಂದಿನ ಸಭೆ ಮಧ್ಯೆ ಊಟದ ವೇಳೆ ರೈತ ಪ್ರತಿನಿಧಿಗಳು ಕೇಂದ್ರಸರ್ಕಾರ ನೀಡಿದ ಊಟ ಮಾಡಲು ನಿರಾಕರಿಸಿದ್ದಾರೆ. ಅವರು ನಮಗೆ ಊಟ ಕೊಟ್ಟರು..ಆದರೆ ನಾವು ಅದನ್ನು ಮುಟ್ಟಲಿಲ್ಲ. ಬದಲಿಗೆ ನಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದ ತಿಂಡಿಯನ್ನೇ ತಿಂದೆವು ಎಂದು ರೈತರೋರ್ವರು ತಿಳಿಸಿದ್ದಾರೆ.

Published On - 8:27 pm, Thu, 3 December 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ