AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ 18-44 ವರ್ಷ ವಯಸ್ಸಿನವರಿಗೆ ನೇರ ನೋಂದಣಿ, ಲಸಿಕೆ ವ್ಯರ್ಥವಾಗದಂತೆ ಕ್ರಮ: ಕೇಂದ್ರ ಆರೋಗ್ಯ ಸಚಿವಾಲಯ

Walk-in Vaccine Registration: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 18-44 ವಯೋಮಾನದವರಿಗೆ ಚುಚ್ಚುಮದ್ದು ನೀಡಲು ಆನ್‌ಲೈನ್ ಅಪಾಯಿಂಟ್ಮೆಂಟ್​ಗಳನ್ನು ಕಡ್ಡಾಯಗೊಳಿಸುವುದರಿಂದ  ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಜನದಟ್ಟಣೆ ತಡೆಯಲಾಗುತ್ತಿತ್ತು . ಆದರೆ ಲಸಿಕೆ ವ್ಯರ್ಥವಾಗುವುದನ್ನು ತಡೆಗಟ್ಟುವ ಸಲುವಾಗಿ ಈ ವಯಸ್ಸಿನವರಿಗೆ ನೇರ ನೋಂದಣಿಯನ್ನು ಈಗ ತೆರೆಯಲಾಗಿದೆ.

ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ 18-44 ವರ್ಷ ವಯಸ್ಸಿನವರಿಗೆ ನೇರ ನೋಂದಣಿ, ಲಸಿಕೆ ವ್ಯರ್ಥವಾಗದಂತೆ ಕ್ರಮ: ಕೇಂದ್ರ ಆರೋಗ್ಯ ಸಚಿವಾಲಯ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: May 24, 2021 | 5:56 PM

Share

ದೆಹಲಿ: 18-44 ವರ್ಷ ವಯಸ್ಸಿನವರು ಕೊವಿಡ್-19 ಲಸಿಕೆ ಹಾಕಿಸಿಕೊಳ್ಳಲು ಅನುಕೂಲವಾಗುವಂತೆ ಲಸಿಕಾ ಕೇಂದ್ರದಲ್ಲಿಯೇ  ಕೊವಿನ್ App ನಲ್ಲಿ ನೇರ ನೋಂದಣಿ (ಆನ್-ಸೈಟ್) ಸಕ್ರಿಯಗೊಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಆದರೆ, ಈ ವೈಶಿಷ್ಟ್ಯವನ್ನು ಕೇವಲ ಸರ್ಕಾರಿ ಕೊವಿಡ್ ಲಸಿಕೆ ಕೇಂದ್ರಗಳಲ್ಲಿ ಮಾತ್ರ ಸಕ್ರಿಯಗೊಳಿಸಲಾಗಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಈ ವೈಶಿಷ್ಟ್ಯವು ಖಾಸಗಿ ಕೊವಿಡ್ ಲಸಿಕೆ ಕೇಂದ್ರಗಳಲ್ಲಿ ಲಭ್ಯವಿರುವುದಿಲ್ಲ ಮತ್ತು ಅವರು ತಮ್ಮ ಲಸಿಕಾ ವೇಳಾಪಟ್ಟಿಗಳನ್ನು ಆನ್‌ಲೈನ್ ಅಪಾಯಿಂಟ್ಮೆಂಟ್‌ಗಳಿಗಾಗಿ ಸ್ಲಾಟ್‌ಗಳೊಂದಿಗೆ ಪ್ರತ್ಯೇಕವಾಗಿ ಪ್ರಕಟಿಸಬೇಕಾಗುತ್ತದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 18-44 ವಯೋಮಾನದವರಿಗೆ ಚುಚ್ಚುಮದ್ದು ನೀಡಲು ಆನ್‌ಲೈನ್ ಅಪಾಯಿಂಟ್ಮೆಂಟ್​ಗಳನ್ನು ಕಡ್ಡಾಯಗೊಳಿಸುವುದರಿಂದ  ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಜನದಟ್ಟಣೆ ತಡೆಯಲಾಗುತ್ತಿತ್ತು . ಆದರೆ ಲಸಿಕೆ ವ್ಯರ್ಥವಾಗುವುದನ್ನು ತಡೆಗಟ್ಟುವ ಸಲುವಾಗಿ ಈ ವಯಸ್ಸಿನವರಿಗೆ ನೇರ ನೋಂದಣಿಯನ್ನು ಈಗ ತೆರೆಯಲಾಗಿದೆ.

“ಆನ್‌ಲೈನ್ ಸ್ಲಾಟ್‌ಗಳೊಂದಿಗೆ ಪ್ರತ್ಯೇಕವಾಗಿ ಆಯೋಜಿಸಲಾದ ಸೆಷನ್‌ಗಳಲ್ಲಿ  ದಿನದ ಅಂತ್ಯದ ವೇಳೆಗೆ, ಆನ್‌ಲೈನ್ ಅಪಾಯಿಂಟ್ಮೆಂಟ್‌ ಫಲಾನುಭವಿಗಳು ಯಾವುದೇ ಕಾರಣಗಳಿಂದಾಗಿ ವ್ಯಾಕ್ಸಿನೇಷನ್ ದಿನದಂದು ಹಾಜರಾಗದಿದ್ದಲ್ಲಿ ಕೆಲವು ಡೋಸ್​ಗಳನ್ನು ಇನ್ನೂ ಬಳಸದೆ ಬಿಡಬಹುದು. ಅಂತಹ ಸಂದರ್ಭಗಳಲ್ಲಿ, ಲಸಿಕೆ ವ್ಯರ್ಥವನ್ನು ಕಡಿಮೆ ಮಾಡಲು ಕೆಲವು ಫಲಾನುಭವಿಗಳ ಆನ್-ಸೈಟ್ ನೋಂದಣಿ ಅಗತ್ಯವಾಗಬಹುದು ಎಂದು ಸಚಿವಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಆದಾಗ್ಯೂ, ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಕೇಂದ್ರವು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಅಧಿಕಾರ ನೀಡಿದೆ. ಲಸಿಕೆ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ಅರ್ಹ ಫಲಾನುಭವಿಗಳಿಗೆ ಲಸಿಕೆ ಹಾಕಲು ಅನುಕೂಲವಾಗುವಂತೆ ಸ್ಥಳೀಯ ಪರಿಸ್ಥಿತಿ ಆಧಾರದ ಮೇಲೆ 18-44 ವರ್ಷ ವಯಸ್ಸಿನವರಿಗೆ ಆನ್-ಸೈಟ್ ನೋಂದಣಿ / ಸುಗಮ ಸಮೂಹಗಳ ನೋಂದಣಿ ಮತ್ತು ಅಪಾಯಿಂಟ್ಮೆಂಟ್‌ಗಳನ್ನು ರಾಜ್ಯ / ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು ನಿರ್ಧರಿಸಬೇಕು ಎಂದು ಸಚಿವಾಲಯ ಹೇಳಿದೆ.

ಖಾಸಗಿ ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ವಾಕ್-ಇನ್ ವ್ಯಾಕ್ಸಿನೇಷನ್ ಅನ್ನು ಅನುಮತಿಸಲಾಗುವುದಿಲ್ಲ ಮತ್ತು ಇದು ಆನ್‌ಲೈನ್ ಅಪಾಯಿಂಟ್ಮೆಂಟ್‌ಗಳಿಗಾಗಿ ಸ್ಲಾಟ್‌ಗಳೊಂದಿಗೆ ಪ್ರತ್ಯೇಕವಾಗಿ ತಮ್ಮ ವ್ಯಾಕ್ಸಿನೇಷನ್ ವೇಳಾಪಟ್ಟಿಯನ್ನು ಪ್ರಕಟಿಸುವುದನ್ನು ಮುಂದುವರಿಸಬೇಕಾಗುತ್ತದೆ.

ಸಂಬಂಧಿತ ಬೆಳವಣಿಗೆಯೊಂದರಲ್ಲಿ, ಮುಂಬೈಯಲ್ಲಿ ಹಾಲುಣಿಸುವ ಮಹಿಳೆಯರಿಗೆ ಬಿಎಂಸಿ ವಾಕ್-ಇನ್ ಲಸಿಕೆ ನೀಡಲು ಅನುಮತಿ ನೀಡಿದೆ. ಹೆರಿಗೆಯ ನಂತರದ ಹಾಲುಣಿಸುವ ಮಹಿಳೆಯರಿಗೆ ವಿಶೇಷ ಗಮನ ನೀಡುವಂತೆ ಹೆಚ್ಚುವರಿ ಪುರಸಭೆ ಆಯುಕ್ತ ಸುರೇಶ್ ಕಾಕನಿ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ.

ಏತನ್ಮಧ್ಯೆ, 18 ರಿಂದ 44 ವಯಸ್ಸಿನವರಿಗೆ ಆನ್-ಸೈಟ್ ನೋಂದಣಿ ಮತ್ತು ಅಪಾಯಿಂಟ್ಮೆಂಟ್‌ ವೈಶಿಷ್ಟ್ಯವನ್ನು ಬಳಸುವ ವ್ಯಾಪ್ತಿ ಮತ್ತು ವಿಧಾನದ ಬಗ್ಗೆ ಆಯಾ ರಾಜ್ಯ / ಕೇಂದ್ರಾಡಳಿತ ಸರ್ಕಾರಗಳ ನಿರ್ಧಾರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ಜಿಲ್ಲಾ ಇಮ್ಯುನೈಜೇಷನ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರವು ತಿಳಿಸಿದೆ.

ವಾಕ್-ಇನ್  ಲಸಿಕೆಗಳನ್ನು ತೆರೆಯುವುದರಿಂದ ಜನದಟ್ಟಣೆ ಹೆಚ್ಚಾಗದಂತೆ ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು ಎಚ್ಚರಿಕೆ ವಹಿಸಬೇಕು ಎಂದು ಅದು ಹೇಳಿದೆ.

ಇದನ್ನೂ ಓದಿ: WHO ಪಟ್ಟಿಯಲಿಲ್ಲ ಕೊವ್ಯಾಕ್ಸಿನ್.. ಲಸಿಕೆಗೆ ಅನುಮೋದನೆ ಪಡೆಯಲು ಕೇಂದ್ರ ಸರ್ಕಾರ, ಭಾರತ್ ಬಯೋಟೆಕ್ ಸರ್ಕಸ್

Vaccine Tourism: ಲಸಿಕೆ ಪ್ರವಾಸೋದ್ಯಮ; ಕೈಯಲ್ಲಿ ಹಣವಿದ್ದವರು ವಿದೇಶಕ್ಕೆ ತೆರಳಿ ಕೊವಿಡ್ ಲಸಿಕೆ ಹಾಕಿಸಿಕೊಂಡು ಬರಬಹುದೇ?

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?