AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ 18-44 ವರ್ಷ ವಯಸ್ಸಿನವರಿಗೆ ನೇರ ನೋಂದಣಿ, ಲಸಿಕೆ ವ್ಯರ್ಥವಾಗದಂತೆ ಕ್ರಮ: ಕೇಂದ್ರ ಆರೋಗ್ಯ ಸಚಿವಾಲಯ

Walk-in Vaccine Registration: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 18-44 ವಯೋಮಾನದವರಿಗೆ ಚುಚ್ಚುಮದ್ದು ನೀಡಲು ಆನ್‌ಲೈನ್ ಅಪಾಯಿಂಟ್ಮೆಂಟ್​ಗಳನ್ನು ಕಡ್ಡಾಯಗೊಳಿಸುವುದರಿಂದ  ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಜನದಟ್ಟಣೆ ತಡೆಯಲಾಗುತ್ತಿತ್ತು . ಆದರೆ ಲಸಿಕೆ ವ್ಯರ್ಥವಾಗುವುದನ್ನು ತಡೆಗಟ್ಟುವ ಸಲುವಾಗಿ ಈ ವಯಸ್ಸಿನವರಿಗೆ ನೇರ ನೋಂದಣಿಯನ್ನು ಈಗ ತೆರೆಯಲಾಗಿದೆ.

ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ 18-44 ವರ್ಷ ವಯಸ್ಸಿನವರಿಗೆ ನೇರ ನೋಂದಣಿ, ಲಸಿಕೆ ವ್ಯರ್ಥವಾಗದಂತೆ ಕ್ರಮ: ಕೇಂದ್ರ ಆರೋಗ್ಯ ಸಚಿವಾಲಯ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 24, 2021 | 5:56 PM

Share

ದೆಹಲಿ: 18-44 ವರ್ಷ ವಯಸ್ಸಿನವರು ಕೊವಿಡ್-19 ಲಸಿಕೆ ಹಾಕಿಸಿಕೊಳ್ಳಲು ಅನುಕೂಲವಾಗುವಂತೆ ಲಸಿಕಾ ಕೇಂದ್ರದಲ್ಲಿಯೇ  ಕೊವಿನ್ App ನಲ್ಲಿ ನೇರ ನೋಂದಣಿ (ಆನ್-ಸೈಟ್) ಸಕ್ರಿಯಗೊಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಆದರೆ, ಈ ವೈಶಿಷ್ಟ್ಯವನ್ನು ಕೇವಲ ಸರ್ಕಾರಿ ಕೊವಿಡ್ ಲಸಿಕೆ ಕೇಂದ್ರಗಳಲ್ಲಿ ಮಾತ್ರ ಸಕ್ರಿಯಗೊಳಿಸಲಾಗಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಈ ವೈಶಿಷ್ಟ್ಯವು ಖಾಸಗಿ ಕೊವಿಡ್ ಲಸಿಕೆ ಕೇಂದ್ರಗಳಲ್ಲಿ ಲಭ್ಯವಿರುವುದಿಲ್ಲ ಮತ್ತು ಅವರು ತಮ್ಮ ಲಸಿಕಾ ವೇಳಾಪಟ್ಟಿಗಳನ್ನು ಆನ್‌ಲೈನ್ ಅಪಾಯಿಂಟ್ಮೆಂಟ್‌ಗಳಿಗಾಗಿ ಸ್ಲಾಟ್‌ಗಳೊಂದಿಗೆ ಪ್ರತ್ಯೇಕವಾಗಿ ಪ್ರಕಟಿಸಬೇಕಾಗುತ್ತದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 18-44 ವಯೋಮಾನದವರಿಗೆ ಚುಚ್ಚುಮದ್ದು ನೀಡಲು ಆನ್‌ಲೈನ್ ಅಪಾಯಿಂಟ್ಮೆಂಟ್​ಗಳನ್ನು ಕಡ್ಡಾಯಗೊಳಿಸುವುದರಿಂದ  ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಜನದಟ್ಟಣೆ ತಡೆಯಲಾಗುತ್ತಿತ್ತು . ಆದರೆ ಲಸಿಕೆ ವ್ಯರ್ಥವಾಗುವುದನ್ನು ತಡೆಗಟ್ಟುವ ಸಲುವಾಗಿ ಈ ವಯಸ್ಸಿನವರಿಗೆ ನೇರ ನೋಂದಣಿಯನ್ನು ಈಗ ತೆರೆಯಲಾಗಿದೆ.

“ಆನ್‌ಲೈನ್ ಸ್ಲಾಟ್‌ಗಳೊಂದಿಗೆ ಪ್ರತ್ಯೇಕವಾಗಿ ಆಯೋಜಿಸಲಾದ ಸೆಷನ್‌ಗಳಲ್ಲಿ  ದಿನದ ಅಂತ್ಯದ ವೇಳೆಗೆ, ಆನ್‌ಲೈನ್ ಅಪಾಯಿಂಟ್ಮೆಂಟ್‌ ಫಲಾನುಭವಿಗಳು ಯಾವುದೇ ಕಾರಣಗಳಿಂದಾಗಿ ವ್ಯಾಕ್ಸಿನೇಷನ್ ದಿನದಂದು ಹಾಜರಾಗದಿದ್ದಲ್ಲಿ ಕೆಲವು ಡೋಸ್​ಗಳನ್ನು ಇನ್ನೂ ಬಳಸದೆ ಬಿಡಬಹುದು. ಅಂತಹ ಸಂದರ್ಭಗಳಲ್ಲಿ, ಲಸಿಕೆ ವ್ಯರ್ಥವನ್ನು ಕಡಿಮೆ ಮಾಡಲು ಕೆಲವು ಫಲಾನುಭವಿಗಳ ಆನ್-ಸೈಟ್ ನೋಂದಣಿ ಅಗತ್ಯವಾಗಬಹುದು ಎಂದು ಸಚಿವಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಆದಾಗ್ಯೂ, ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಕೇಂದ್ರವು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಅಧಿಕಾರ ನೀಡಿದೆ. ಲಸಿಕೆ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ಅರ್ಹ ಫಲಾನುಭವಿಗಳಿಗೆ ಲಸಿಕೆ ಹಾಕಲು ಅನುಕೂಲವಾಗುವಂತೆ ಸ್ಥಳೀಯ ಪರಿಸ್ಥಿತಿ ಆಧಾರದ ಮೇಲೆ 18-44 ವರ್ಷ ವಯಸ್ಸಿನವರಿಗೆ ಆನ್-ಸೈಟ್ ನೋಂದಣಿ / ಸುಗಮ ಸಮೂಹಗಳ ನೋಂದಣಿ ಮತ್ತು ಅಪಾಯಿಂಟ್ಮೆಂಟ್‌ಗಳನ್ನು ರಾಜ್ಯ / ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು ನಿರ್ಧರಿಸಬೇಕು ಎಂದು ಸಚಿವಾಲಯ ಹೇಳಿದೆ.

ಖಾಸಗಿ ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ವಾಕ್-ಇನ್ ವ್ಯಾಕ್ಸಿನೇಷನ್ ಅನ್ನು ಅನುಮತಿಸಲಾಗುವುದಿಲ್ಲ ಮತ್ತು ಇದು ಆನ್‌ಲೈನ್ ಅಪಾಯಿಂಟ್ಮೆಂಟ್‌ಗಳಿಗಾಗಿ ಸ್ಲಾಟ್‌ಗಳೊಂದಿಗೆ ಪ್ರತ್ಯೇಕವಾಗಿ ತಮ್ಮ ವ್ಯಾಕ್ಸಿನೇಷನ್ ವೇಳಾಪಟ್ಟಿಯನ್ನು ಪ್ರಕಟಿಸುವುದನ್ನು ಮುಂದುವರಿಸಬೇಕಾಗುತ್ತದೆ.

ಸಂಬಂಧಿತ ಬೆಳವಣಿಗೆಯೊಂದರಲ್ಲಿ, ಮುಂಬೈಯಲ್ಲಿ ಹಾಲುಣಿಸುವ ಮಹಿಳೆಯರಿಗೆ ಬಿಎಂಸಿ ವಾಕ್-ಇನ್ ಲಸಿಕೆ ನೀಡಲು ಅನುಮತಿ ನೀಡಿದೆ. ಹೆರಿಗೆಯ ನಂತರದ ಹಾಲುಣಿಸುವ ಮಹಿಳೆಯರಿಗೆ ವಿಶೇಷ ಗಮನ ನೀಡುವಂತೆ ಹೆಚ್ಚುವರಿ ಪುರಸಭೆ ಆಯುಕ್ತ ಸುರೇಶ್ ಕಾಕನಿ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ.

ಏತನ್ಮಧ್ಯೆ, 18 ರಿಂದ 44 ವಯಸ್ಸಿನವರಿಗೆ ಆನ್-ಸೈಟ್ ನೋಂದಣಿ ಮತ್ತು ಅಪಾಯಿಂಟ್ಮೆಂಟ್‌ ವೈಶಿಷ್ಟ್ಯವನ್ನು ಬಳಸುವ ವ್ಯಾಪ್ತಿ ಮತ್ತು ವಿಧಾನದ ಬಗ್ಗೆ ಆಯಾ ರಾಜ್ಯ / ಕೇಂದ್ರಾಡಳಿತ ಸರ್ಕಾರಗಳ ನಿರ್ಧಾರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ಜಿಲ್ಲಾ ಇಮ್ಯುನೈಜೇಷನ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರವು ತಿಳಿಸಿದೆ.

ವಾಕ್-ಇನ್  ಲಸಿಕೆಗಳನ್ನು ತೆರೆಯುವುದರಿಂದ ಜನದಟ್ಟಣೆ ಹೆಚ್ಚಾಗದಂತೆ ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು ಎಚ್ಚರಿಕೆ ವಹಿಸಬೇಕು ಎಂದು ಅದು ಹೇಳಿದೆ.

ಇದನ್ನೂ ಓದಿ: WHO ಪಟ್ಟಿಯಲಿಲ್ಲ ಕೊವ್ಯಾಕ್ಸಿನ್.. ಲಸಿಕೆಗೆ ಅನುಮೋದನೆ ಪಡೆಯಲು ಕೇಂದ್ರ ಸರ್ಕಾರ, ಭಾರತ್ ಬಯೋಟೆಕ್ ಸರ್ಕಸ್

Vaccine Tourism: ಲಸಿಕೆ ಪ್ರವಾಸೋದ್ಯಮ; ಕೈಯಲ್ಲಿ ಹಣವಿದ್ದವರು ವಿದೇಶಕ್ಕೆ ತೆರಳಿ ಕೊವಿಡ್ ಲಸಿಕೆ ಹಾಕಿಸಿಕೊಂಡು ಬರಬಹುದೇ?

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!