ಕೇಂದ್ರ ಸರ್ಕಾರ ರೈತರ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ, ಅವರನ್ನು ಸಂಕಷ್ಟಕ್ಕೊಳಗಾಗಲು ಬಿಡುವುದಿಲ್ಲ: ಮೋದಿ

|

Updated on: Jul 27, 2023 | 2:09 PM

PM Modi in Sikar: ಹಳ್ಳಿಗಳು ಅಭಿವೃದ್ಧಿ ಹೊಂದಿದಾಗ ಮಾತ್ರ ಭಾರತ ಅಭಿವೃದ್ಧಿ ಹೊಂದಲು ಸಾಧ್ಯ. ನಮ್ಮ ಸರ್ಕಾರವು ನಗರಗಳಲ್ಲಿ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಹಳ್ಳಿಗಳಲ್ಲಿ ಒದಗಿಸಲು ಕೆಲಸ ಮಾಡುತ್ತಿದೆ. ಯೂರಿಯಾ ಬೆಲೆಯಿಂದ ರೈತರು ಸಂಕಷ್ಟಕ್ಕೆ ಒಳಗಾಗಲು ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ಮೋದಿ ಹೇಳಿದರು.

ಕೇಂದ್ರ ಸರ್ಕಾರ ರೈತರ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ, ಅವರನ್ನು ಸಂಕಷ್ಟಕ್ಕೊಳಗಾಗಲು ಬಿಡುವುದಿಲ್ಲ: ಮೋದಿ
ರಾಜಸ್ಥಾನದಲ್ಲಿ ಮೋದಿ
Follow us on

ಸಿಕಾರ್ ಜುಲೈ 27: ಕೇಂದ್ರ ಸರ್ಕಾರ ಒಂಬತ್ತು ವರ್ಷಗಳಿಂದ ರೈತರ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಅವರಿಗೆ ಬೀಜದಿಂದ ಮಾರುಕಟ್ಟೆವರೆಗೆ ವ್ಯವಸ್ಥೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. 1.25 ಲಕ್ಷ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು (PM Kisan Samriddhi Kendras) ರಾಷ್ಟ್ರಕ್ಕೆ ಸಮರ್ಪಿಸಿದ ನಂತರ ರಾಜಸ್ಥಾನದ (Rajasthan) ಸಿಕಾರ್ ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಈ ಕೇಂದ್ರಗಳು ರೈತರಿಗೆ ಒನ್ ಸ್ಟಾಪ್ ಸೆಂಟರ್ ಆಗಿದೆ. ಅದು ಅವರ ಏಳಿಗೆಗೆ ದಾರಿ ಮಾಡಿಕೊಡುತ್ತದೆ ಎಂದಿದ್ದಾರೆ.

ಸಿಕಾರ್‌ನಲ್ಲಿ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂದು ದೇಶದ ರೈತರು ಪಿಎಂ ಕಿಸಾನ್ ಸಮೃದ್ಧಿ ಅಡಿಯಲ್ಲಿ ₹ 18,000 ಕೋಟಿಗಳನ್ನು ಸ್ವೀಕರಿಸಿದ್ದಾರೆ. ಇಂದು, ದೇಶದಲ್ಲಿ 1,25,000 PM ಕಿಸಾನ್ ಸಮೃದ್ಧಿ ಕೇಂದ್ರಗಳು (PMKSKs) ಕೇಂದ್ರಗಳು ಪ್ರಾರಂಭವಾಗಿವೆ. ಬ್ಲಾಕ್ ಮತ್ತು ಗ್ರಾಮ ಮಟ್ಟದಲ್ಲಿ PMKSY ಕೇಂದ್ರಗಳು ರೈತರಿಗೆ ಪ್ರಯೋಜನವನ್ನು ನೀಡುತ್ತವೆ. ಡಿಜಿಟಲ್ ವಾಣಿಜ್ಯಕ್ಕಾಗಿ ಮುಕ್ತ ನೆಟ್‌ವರ್ಕ್ (ONDC) ಸಹ ರೈತರಿಗೆ ಪ್ರಾರಂಭವಾಗಿದೆ. ಹೊಸ ಯೂರಿಯಾ ಗೋಲ್ಡ್ ಪ್ರಾರಂಭಿಸಲಾಗಿದೆ.

ರಾಜಸ್ಥಾನದ ವಿವಿಧ ಪ್ರದೇಶಗಳು ವೈದ್ಯಕೀಯ ಕಾಲೇಜುಗಳು ಮತ್ತು ಏಕಲವ್ಯ ಮಾದರಿ ಶಾಲೆಗಳನ್ನು ಸಹ ಪಡೆದಿವೆ ಎಂದಿದ್ದಾರೆ.
ರೈತರ ಶಕ್ತಿ ಮತ್ತು ರೈತರ ಶ್ರಮವು ಮಣ್ಣಿನಿಂದ ಚಿನ್ನವನ್ನು ಹೊರತೆಗೆಯುತ್ತದೆ. ಅದಕ್ಕಾಗಿಯೇ ನಮ್ಮ ಸರ್ಕಾರವು ದೇಶದ ರೈತರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

‘ಸ್ವಾತಂತ್ರ್ಯ ಬಂದು ಹಲವು ದಶಕಗಳ ನಂತರ ಇಂತಹ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ರೈತನ ನೋವು-ನಲಿವುಗಳನ್ನು ಅರಿತು, ರೈತನ ಕಾಳಜಿಯನ್ನು ಅರ್ಥಮಾಡಿಕೊಂಡಿದೆ. ಅದಕ್ಕಾಗಿಯೇ ಕಳೆದ ಒಂಬತ್ತು ವರ್ಷಗಳಲ್ಲಿ ರೈತರ ಹಿತದೃಷ್ಟಿಯಿಂದ ನಿರಂತರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ರಾಜಸ್ಥಾನದಲ್ಲಿ ಆಧುನಿಕ ಮೂಲಸೌಕರ್ಯಗಳನ್ನು ಸೃಷ್ಟಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ನಾವು ಆಹ್ವಾನಿಸಿದ್ದೇವೆ, ಆದರೆ ನಿಮ್ಮ ಕಚೇರಿ ನಿರಾಕರಿಸಿದೆ: ಅಶೋಕ್ ಗೆಹ್ಲೋಟ್ ಆರೋಪಕ್ಕೆ ಪಿಎಂಒ ಉತ್ತರ

ಹಳ್ಳಿಗಳು ಅಭಿವೃದ್ಧಿ ಹೊಂದಿದಾಗ ಮಾತ್ರ ಭಾರತ ಅಭಿವೃದ್ಧಿ ಹೊಂದಲು ಸಾಧ್ಯ. ನಮ್ಮ ಸರ್ಕಾರವು ನಗರಗಳಲ್ಲಿ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಹಳ್ಳಿಗಳಲ್ಲಿ ಒದಗಿಸಲು ಕೆಲಸ ಮಾಡುತ್ತಿದೆ. ಯೂರಿಯಾ ಬೆಲೆಯಿಂದ ರೈತರು ಸಂಕಷ್ಟಕ್ಕೆ ಒಳಗಾಗಲು ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ಮೋದಿ ಹೇಳಿದರು.

ಭಾರತದ ರೈತರು, 266 ರೂ.ಗೆ ಯೂರಿಯಾ ಚೀಲವನ್ನು ಪಡೆಯುತ್ತಾರೆ. ಆದರೆ ಪಾಕಿಸ್ತಾನದಲ್ಲಿ ಇದರ ಬೆಲೆ ಸುಮಾರು 800 ರೂ. ಬಾಂಗ್ಲಾದೇಶದಲ್ಲಿ 720 ರೂ.ಗೆ ಮತ್ತು ಚೀನಾದಲ್ಲಿ 2,100 ರೂ.ಗೆ ಆಗಿದೆ ಎಂದಿದ್ದಾರೆ ಮೋದಿ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾರ್ಯಕ್ರಮಕ್ಕೆ ಬರಬೇಕಿತ್ತು.ಆದರೆ ಅವರ ಕಾಲಿನ ಸಮಸ್ಯೆಯಿಂದಾಗಿ ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.

ಇದಕ್ಕಿಂತ ಮುನ್ನ ಸಿಕಾರ್ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ತಮ್ಮ ಭಾಷಣವನ್ನು ರದ್ದುಗೊಳಿಸಿದೆ ಎಂದು ಗೆಹ್ಲೋಟ್ ಆರೋಪಿಸಿದರು. ಆದಾಗ್ಯೂ, ಅವರು ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಗೆಹ್ಲೋಟ್ ಅವರ ಕಚೇರಿಯಿಂದ ತಿಳಿಸಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ತಿಳಿಸಿದೆ. ಅವರು ಕಾರ್ಯಕ್ರಮಕ್ಕೆ ಸೇರುವುದಾದರೆ ಅವರನ್ನು ಸ್ವಾಗತಿಸುತ್ತೇವೆ ಎಂದು ಪ್ರಧಾನಿ ಕಚೇರಿ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:55 pm, Thu, 27 July 23