AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAFF Ban: ಭಯೋತ್ಪಾದನೆ ಚಟುವಟಿಕೆ; ಪಿಎಎಫ್​ಎಫ್ ನಿಷೇಧಿಸಿದ ಕೇಂದ್ರ

ಪಿಎಎಫ್​ಎಫ್ ಎಂಬುದು ಮೌಲಾನಾ ಮಸೂದ್ ಅಜರ್​ ನೇತೃತ್ವದ ಜೈಷ್-ಎ-ಮೊಹಮ್ಮದ್​ನ ಜತೆ ನಂಟು ಹೊಂದಿರುವ, ಅದರ ಕಾರ್ಯಸೂಚಿಗಳಿಗೆ ಅನುಗುಣವಾಗಿ ದುಷ್ಕೃತ್ಯಗಳನ್ನು ಎಸಗುವ ಸಂಘಟನೆ.

PAFF Ban: ಭಯೋತ್ಪಾದನೆ ಚಟುವಟಿಕೆ; ಪಿಎಎಫ್​ಎಫ್ ನಿಷೇಧಿಸಿದ ಕೇಂದ್ರ
ಸೇನಾ ಕಾರ್ಯಾಚರಣೆ (ಸಾಂದರ್ಭಿಕ ಚಿತ್ರ)
TV9 Web
| Updated By: Ganapathi Sharma|

Updated on: Jan 07, 2023 | 7:39 AM

Share

ನವದೆಹಲಿ: ಜೈಷ್-ಎ-ಮೊಹಮ್ಮದ್ (Jaish-e-Mohammed) ಉಗ್ರ ಸಂಘಟನೆ ಜತೆ ಸಂಪರ್ಕ ಹೊಂದಿರುವ ಪೀಪಲ್ಸ್ ಆ್ಯಂಟಿ-ಫ್ಯಾಸಿಸ್ಟ್ ಫ್ರಂಟ್ ಅಥವಾ ಪಿಎಎಫ್​ಎಫ್​ (PAFF) ಅನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಪಿಎಎಫ್​ಎಫ್​ ಸಂಘಟನೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ಅದರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆ ಹೇಳಿದೆ. ಲಷ್ಕರ್ ಎ ತಯ್ಬಾದ ನಂಟು ಹೊಂದಿರುವ ರೆಸಿಸ್ಟೆನ್ಸ್ ಫ್ರಂಟ್​​ಗೆ ಗುರುವಾರವಷ್ಟೇ ಗೃಹ ಸಚಿವಾಲಯ ನಿಷೇಧ ಹೇರಿತ್ತು. ಅದರ ಬೆನ್ನಲ್ಲೇ ಪಿಎಎಫ್​ಎಫ್ ವಿರುದ್ಧವೂ ಕ್ರಮ ಕೈಗೊಂಡಿದೆ.

ಪಿಎಎಫ್​ಎಫ್ ಎಂಬುದು ಮೌಲಾನಾ ಮಸೂದ್ ಅಜರ್​ ನೇತೃತ್ವದ ಜೈಷ್-ಎ-ಮೊಹಮ್ಮದ್​ನ ಜತೆ ನಂಟು ಹೊಂದಿರುವ, ಅದರ ಕಾರ್ಯಸೂಚಿಗಳಿಗೆ ಅನುಗುಣವಾಗಿ ದುಷ್ಕೃತ್ಯಗಳನ್ನು ಎಸಗುವ ಸಂಘಟನೆ. ದೇಶದ ಭದ್ರತಾ ಪಡೆಗಳಿಗೆ, ನಾಯಕರಿಗೆ, ಜಮ್ಮು ಮತ್ತು ಕಾಶ್ಮೀರ ಹಾಗೂ ಇತರ ರಾಜ್ಯಗಳ ನಾಗರಿಕರಿಗೆ ಭೀತಿ ಒಡ್ಡುವ ಸಂಘಟನೆ ಎಂದು ಗೃಹ ಸಚಿವಾಲಯದ ಅಧಿಸೂಚನೆ ತಿಳಿಸಿದೆ.

2019ರಲ್ಲಿ ಆರಂಭವಾಗಿದ್ದ ಪೀಪಲ್ಸ್ ಆ್ಯಂಟಿ-ಫ್ಯಾಸಿಸ್ಟ್ ಫ್ರಂಟ್

ಪೀಪಲ್ಸ್ ಆ್ಯಂಟಿ-ಫ್ಯಾಸಿಸ್ಟ್ ಫ್ರಂಟ್ 2019ರಲ್ಲಿ ಆರಂಭವಾಗಿತ್ತು. ಜೈಷ್-ಎ-ಮೊಹಮ್ಮದ್​ನ ನೆರಳಾಗಿ ಉಗ್ರ ಚಟುವಟಿಕೆಗಳಲ್ಲಿ ತೊಡಗಿಕೊಂಡಿತ್ತು. ಇದನ್ನು ಯುಎಪಿಎ ಅಡಿ ಗುರುತಿಸಲಾಗಿತ್ತು ಎಂದು ಗೃಹ ಸಚಿವಾಲಯ ತಿಳಿಸಿದೆ. ಸದ್ಯ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಎಲ್​​ಇಟಿಯ ಅರ್ಬಜ್ ಅಹಮದ್ ಮಿರ್​​ನಲ್ಲಿ ಕೇಂದ್ರ ಸರ್ಕಾರ ಶುಕ್ರವಾರ ಯುಎಪಿಎ ಅಡಿ ಭಯೋತ್ಪಾದಕನೆಂದು ಘೋಷಿಸಿತ್ತು. ಈತ ಕಳೆದ ವರ್ಷ ಮೇ ತಿಂಗಳಲ್ಲಿ ಕಾಶ್ಮೀರದಲ್ಲಿ ನಡೆದ ಶಿಕ್ಷಕರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!