AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAFF Ban: ಭಯೋತ್ಪಾದನೆ ಚಟುವಟಿಕೆ; ಪಿಎಎಫ್​ಎಫ್ ನಿಷೇಧಿಸಿದ ಕೇಂದ್ರ

ಪಿಎಎಫ್​ಎಫ್ ಎಂಬುದು ಮೌಲಾನಾ ಮಸೂದ್ ಅಜರ್​ ನೇತೃತ್ವದ ಜೈಷ್-ಎ-ಮೊಹಮ್ಮದ್​ನ ಜತೆ ನಂಟು ಹೊಂದಿರುವ, ಅದರ ಕಾರ್ಯಸೂಚಿಗಳಿಗೆ ಅನುಗುಣವಾಗಿ ದುಷ್ಕೃತ್ಯಗಳನ್ನು ಎಸಗುವ ಸಂಘಟನೆ.

PAFF Ban: ಭಯೋತ್ಪಾದನೆ ಚಟುವಟಿಕೆ; ಪಿಎಎಫ್​ಎಫ್ ನಿಷೇಧಿಸಿದ ಕೇಂದ್ರ
ಸೇನಾ ಕಾರ್ಯಾಚರಣೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Jan 07, 2023 | 7:39 AM

Share

ನವದೆಹಲಿ: ಜೈಷ್-ಎ-ಮೊಹಮ್ಮದ್ (Jaish-e-Mohammed) ಉಗ್ರ ಸಂಘಟನೆ ಜತೆ ಸಂಪರ್ಕ ಹೊಂದಿರುವ ಪೀಪಲ್ಸ್ ಆ್ಯಂಟಿ-ಫ್ಯಾಸಿಸ್ಟ್ ಫ್ರಂಟ್ ಅಥವಾ ಪಿಎಎಫ್​ಎಫ್​ (PAFF) ಅನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಪಿಎಎಫ್​ಎಫ್​ ಸಂಘಟನೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ಅದರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆ ಹೇಳಿದೆ. ಲಷ್ಕರ್ ಎ ತಯ್ಬಾದ ನಂಟು ಹೊಂದಿರುವ ರೆಸಿಸ್ಟೆನ್ಸ್ ಫ್ರಂಟ್​​ಗೆ ಗುರುವಾರವಷ್ಟೇ ಗೃಹ ಸಚಿವಾಲಯ ನಿಷೇಧ ಹೇರಿತ್ತು. ಅದರ ಬೆನ್ನಲ್ಲೇ ಪಿಎಎಫ್​ಎಫ್ ವಿರುದ್ಧವೂ ಕ್ರಮ ಕೈಗೊಂಡಿದೆ.

ಪಿಎಎಫ್​ಎಫ್ ಎಂಬುದು ಮೌಲಾನಾ ಮಸೂದ್ ಅಜರ್​ ನೇತೃತ್ವದ ಜೈಷ್-ಎ-ಮೊಹಮ್ಮದ್​ನ ಜತೆ ನಂಟು ಹೊಂದಿರುವ, ಅದರ ಕಾರ್ಯಸೂಚಿಗಳಿಗೆ ಅನುಗುಣವಾಗಿ ದುಷ್ಕೃತ್ಯಗಳನ್ನು ಎಸಗುವ ಸಂಘಟನೆ. ದೇಶದ ಭದ್ರತಾ ಪಡೆಗಳಿಗೆ, ನಾಯಕರಿಗೆ, ಜಮ್ಮು ಮತ್ತು ಕಾಶ್ಮೀರ ಹಾಗೂ ಇತರ ರಾಜ್ಯಗಳ ನಾಗರಿಕರಿಗೆ ಭೀತಿ ಒಡ್ಡುವ ಸಂಘಟನೆ ಎಂದು ಗೃಹ ಸಚಿವಾಲಯದ ಅಧಿಸೂಚನೆ ತಿಳಿಸಿದೆ.

2019ರಲ್ಲಿ ಆರಂಭವಾಗಿದ್ದ ಪೀಪಲ್ಸ್ ಆ್ಯಂಟಿ-ಫ್ಯಾಸಿಸ್ಟ್ ಫ್ರಂಟ್

ಪೀಪಲ್ಸ್ ಆ್ಯಂಟಿ-ಫ್ಯಾಸಿಸ್ಟ್ ಫ್ರಂಟ್ 2019ರಲ್ಲಿ ಆರಂಭವಾಗಿತ್ತು. ಜೈಷ್-ಎ-ಮೊಹಮ್ಮದ್​ನ ನೆರಳಾಗಿ ಉಗ್ರ ಚಟುವಟಿಕೆಗಳಲ್ಲಿ ತೊಡಗಿಕೊಂಡಿತ್ತು. ಇದನ್ನು ಯುಎಪಿಎ ಅಡಿ ಗುರುತಿಸಲಾಗಿತ್ತು ಎಂದು ಗೃಹ ಸಚಿವಾಲಯ ತಿಳಿಸಿದೆ. ಸದ್ಯ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಎಲ್​​ಇಟಿಯ ಅರ್ಬಜ್ ಅಹಮದ್ ಮಿರ್​​ನಲ್ಲಿ ಕೇಂದ್ರ ಸರ್ಕಾರ ಶುಕ್ರವಾರ ಯುಎಪಿಎ ಅಡಿ ಭಯೋತ್ಪಾದಕನೆಂದು ಘೋಷಿಸಿತ್ತು. ಈತ ಕಳೆದ ವರ್ಷ ಮೇ ತಿಂಗಳಲ್ಲಿ ಕಾಶ್ಮೀರದಲ್ಲಿ ನಡೆದ ಶಿಕ್ಷಕರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್