AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar Card ಆಧಾರ್ ಕಾರ್ಡ್ ಫೋಟೊಕಾಪಿ ಹಂಚಿಕೊಳ್ಳಬೇಡಿ ಎಂಬ ಯುಐಡಿಎಐ ಎಚ್ಚರಿಕೆ ವಾಪಸ್ ಪಡೆದ ಕೇಂದ್ರ ಸರ್ಕಾರ

ಪತ್ರಿಕಾ ಪ್ರಕಟಣೆ ಬಗ್ಗೆ ತಪ್ಪಾದ ವ್ಯಾಖ್ಯಾನಕ್ಕೆ ಸಾಧ್ಯತೆ ಇರುವ ಕಾರಣ ತಕ್ಷಣವೇ ಅದನ್ನು  ಹಿಂತೆಗೆದುಕೊಳ್ಳಲಾಗುತ್ತದೆ. ಆಧಾರ್ ಗುರುತಿನ ದೃಢೀಕರಣ ವ್ಯವಸ್ಥೆಯು ಆಧಾರ್ ಹೊಂದಿರುವವರ ಗುರುತು ಮತ್ತು ಗೌಪ್ಯತೆಯನ್ನು ರಕ್ಷಿಸಲು...

Aadhaar Card ಆಧಾರ್ ಕಾರ್ಡ್ ಫೋಟೊಕಾಪಿ ಹಂಚಿಕೊಳ್ಳಬೇಡಿ ಎಂಬ ಯುಐಡಿಎಐ ಎಚ್ಚರಿಕೆ ವಾಪಸ್ ಪಡೆದ ಕೇಂದ್ರ ಸರ್ಕಾರ
ಆಧಾರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 29, 2022 | 7:01 PM

ದೆಹಲಿ: ಜನರು ತಮ್ಮ ಆಧಾರ್ ಕಾರ್ಡ್‌ನ (Aadhaar card) ಫೋಟೊಕಾಪಿಗಳನ್ನು ಯಾವುದೇ ಸಂಸ್ಥೆಯೊಂದಿಗೆ ಹಂಚಿಕೊಳ್ಳಬೇಡಿ. ಅದು ದುರುಪಯೋಗಕ್ಕೊಳಗಾಗಬಹುದು ಎಂದು ಮೇ 27 ರಂದು ಯುಐಡಿಎಐ (UIDAI) ಹೊರಡಿಸಿದ ಪತ್ರಿಕಾ ಪ್ರಕಟಣೆ ಬಗ್ಗೆ ಕೇಂದ್ರ ಸರ್ಕಾರ  ಸ್ಪಷ್ಟೀಕರಣವನ್ನು ನೀಡಿದೆ.  “ಇದು ಬೆಂಗಳೂರು ಪ್ರಾದೇಶಿಕ ಕಚೇರಿ, UIDAI ನಿಂದ 27 ಮೇ 2022 ರ ಪತ್ರಿಕಾ ಪ್ರಕಟಣೆ ಬಗ್ಗೆ ಸ್ಪಷ್ಟನೆ. ದುರುಪಯೋಗಕ್ಕೊಳಗಾಗುವ ಸಾಧ್ಯತೆಯ ಹಿನ್ನಲೆಯಲ್ಲಿ ಆಧಾರ್ ಕಾರ್ಡ್ ಫೋಟೊಕಾಪಿ  ಪ್ರತಿಗಳನ್ನು ಹಂಚಿಕೊಳ್ಳಬೇಡಿ ಎಂದು ಈ ಸೂಚನೆ ನೀಡಲಾಗಿದೆ. ಹಾಗಾಗಿಯೇ ಜನರು ತಮ್ಮ ಆಧಾರ್‌ನ ಫೋಟೊಕಾಪಿಯನ್ನು ಯಾವುದೇ ಸಂಸ್ಥೆಯೊಂದಿಗೆ ಹಂಚಿಕೊಳ್ಳಬೇಡಿ ಎಂದು ಪ್ರಕಟಣೆಯು ಸಲಹೆ ನೀಡಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ಭಾನುವಾರ ಸ್ಪಷ್ಟನೆ ನೀಡಿದೆ.  ಆದಾಗ್ಯೂ ಪತ್ರಿಕಾ ಪ್ರಕಟಣೆ ಬಗ್ಗೆ ತಪ್ಪಾದ ವ್ಯಾಖ್ಯಾನಕ್ಕೆ ಸಾಧ್ಯತೆ ಇರುವ ಕಾರಣ ತಕ್ಷಣವೇ ಅದನ್ನು  ಹಿಂತೆಗೆದುಕೊಳ್ಳಲಾಗುತ್ತದೆ. ಆಧಾರ್ ಗುರುತಿನ ದೃಢೀಕರಣ ವ್ಯವಸ್ಥೆಯು ಆಧಾರ್ ಹೊಂದಿರುವವರ ಗುರುತು ಮತ್ತು ಗೌಪ್ಯತೆಯನ್ನು ರಕ್ಷಿಸಲು  ಸಾಕಷ್ಟು ವೈಶಿಷ್ಟ್ಯಗಳನ್ನು ಒದಗಿಸಿದೆ ಎಂದು ಸಚಿವಾಲಯ  ಹೇಳಿದೆ.

ಹಿಂದಿನ ಪತ್ರಿಕಾ ಪ್ರಕಟಣೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವಾಲಯ, ಆಧಾರ್ ಕಾರ್ಡ್‌ದಾರರು ತಮ್ಮ 12-ಅಂಕಿಯ ಐಡಿ ಸಂಖ್ಯೆಗಳನ್ನು ಬಳಸುವಾಗ ಮತ್ತು ಹಂಚಿಕೊಳ್ಳುವಲ್ಲಿ ಸಾಮಾನ್ಯ ವಿವೇಕವನ್ನು ಬಳಸಿ ಎಂದು ಹೇಳಿದೆ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ (ಯುಐಡಿಎಐ) ಪ್ರಕಟಣೆಯು ಆಧಾರ್  ಕಾರ್ಡುದಾರರಿಗೆ ಮಾಸ್ಕ್ ಮಾಡಿದ ಆಧಾರ್ ಕಾರ್ಡ್ ಅನ್ನು ಮಾತ್ರ ಬಳಸಲು ಕೇಳಿದೆ. ಮಾಸ್ಕ್ ಮಾಡಿದ ಕಾರ್ಡ್ ಬಳಕೆದಾರರ ಐಡಿಯ ಕೊನೆಯ ನಾಲ್ಕು ಅಂಕೆಗಳನ್ನು ಮಾತ್ರ ಪ್ರದರ್ಶಿಸುತ್ತದೆ. ಇ-ಆಧಾರ್ ಡೌನ್‌ಲೋಡ್ ಮಾಡಲು ಇಂಟರ್ನೆಟ್ ಕೆಫೆಗಳು ಅಥವಾ ಕಿಯೋಸ್ಕ್‌ಗಳಲ್ಲಿ ಸಾರ್ವಜನಿಕ ಕಂಪ್ಯೂಟರ್‌ಗಳನ್ನು ಬಳಸಬೇಡಿ ಎಂದು ಪ್ರಕಟಣೆಯಲ್ಲಿ ಸಲಹೆ ನೀಡಿದೆ.

ಇದನ್ನೂ ಓದಿ
Image
PM Kisan Samman Yojana: ಮೇ 31ರಂದು ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತು ಬಿಡುಗಡೆ; ಇಕೆವೈಸಿ ಮಾಡುವುದು ಹೇಗೆ?
Image
ಜಮ್ಮುವಿನ ಹೀರಾನಗರ ಸೆಕ್ಟರ್‌ನಲ್ಲಿ ಸ್ಫೋಟಕ ಹೊಂದಿದ್ದ ಪಾಕ್ ಡ್ರೋನ್ ಹೊಡೆದುರುಳಿಸಿದ ಭದ್ರತಾ ಪಡೆ
Image
7 ಗಂಟೆಯ ನಂತರ ಮಹಿಳೆಯರಿಗೆ ಕೆಲಸ ಮಾಡಲು ಒತ್ತಾಯಿಸುವಂತಿಲ್ಲ: ಉತ್ತರ ಪ್ರದೇಶ ಸರ್ಕಾರ ಹೊಸ ನಿಯಮ
Image
Aadhaar Card: ಸಿಕ್ಕಸಿಕ್ಕಲ್ಲಿ ಆಧಾರ್​ ಕಾರ್ಡ್​ ಹಂಚಿಕೊಳ್ಳುವುದರಿಂದ ಹಲವು ಅಪಾಯ; ಕೇಂದ್ರ ಸರ್ಕಾರದ ಎಚ್ಚರಿಕೆ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 6:45 pm, Sun, 29 May 22

ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ