AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 1ರಿಂದ ಮೂರನೇ ಹಂತದ ಕೊವಿಡ್​ ಲಸಿಕೆ ಅಭಿಯಾನ; ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಈ ಸಲಹೆಗಳ ಜತೆ ಸದ್ಯ ಹೆಚ್ಚುತ್ತಿರುವ ಕೊರೊನಾ ವೈರಸ್​ ವಿರುದ್ಧ ಹೋರಾಡಲು ಆಸ್ಪತ್ರೆಗಳಲ್ಲಿ ವ್ಯವಸ್ಥೆಗಳನ್ನು ಸುಧಾರಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ತಿಳಿಸಿದೆ.

ಮೇ 1ರಿಂದ ಮೂರನೇ ಹಂತದ ಕೊವಿಡ್​ ಲಸಿಕೆ ಅಭಿಯಾನ; ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 24, 2021 | 7:44 PM

Share

ದೆಹಲಿ: ದೇಶದಲ್ಲಿ ಮೇ 1ರಿಂದ ಮೂರನೇ ಹಂತದ ಕೊವಿಡ್​ -19 ಲಸಿಕೆ ಅಭಿಯಾನ ಶುರುವಾಗಲಿದ್ದು, ಇದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಇಂದು ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. 18ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಹೇಳಿದ್ದು, ಎಲ್ಲ ವಯಸ್ಸಿನವರಿಗೂ ಲಸಿಕೆ ಪಡೆಯಲು ಅವಕಾಶ ನೀಡಿದ ಮೊದಲ ದೇಶ ಭಾರತವಾಗಿದೆ. ಹಾಗೇ ಮೇ 1ರಿಂದ ದೊಡ್ಡಮಟ್ಟದಲ್ಲಿ ಲಸಿಕೆ ಅಭಿಯಾನ ಶುರುವಾಗುತ್ತಿರುವುದರಿಂದ, ಲಸಿಕೆ ಉತ್ಪಾದನಾ ಕಂಪನಿಗಳು ಶೇ.50ರಷ್ಟನ್ನು ಮುಕ್ತಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇಲ್ಲಿದೆ ನೋಡಿ ಮೂರನೇ ಹಂತದ ಲಸಿಕಾ ಅಭಿಯಾನಕ್ಕಾಗಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ನೀಡಿರುವ ಸಲಹೆಗಳು:

  • ಖಾಸಗಿ ಆಸ್ಪತ್ರೆಗಳು, ಕೈಗಾರಿಕಾ ಆಸ್ಪತ್ರೆಗಳು, ಕೈಗಾರಿಕಾ ಸಂಸ್ಥೆಗಳೊಂದಿಗೆ ಸೇರಿ,ಮಿಷನ್ ಮೋಡ್​​ನಲ್ಲಿ ಹೆಚ್ಚೆಚ್ಚು ಖಾಸಗಿ ಲಸಿಕಾ ಕೇಂದ್ರಗಳನ್ನು ನೋಂದಣಿ ಮಾಡಬೇಕು. ಕೊರೊನಾ ಲಸಿಕೆ ವಿತರಣೆ ಪ್ರಕ್ರಿಯೆಯಲ್ಲಿ ಅನುಮೋದಿತ ಆಡಳಿತದೊಂದಿಗೆ ಸಮನ್ವಯ ಸಾಧಿಸಬೇಕು.ತಮ್ಮಲ್ಲಿ ಲಭ್ಯ ಇರುವ ಲಸಿಕೆಗಳ ಡೋಸ್​, ಅದರ ಬೆಲೆಯನ್ನು ಕೊವಿನ್ ಆ್ಯಪ್​​ನಲ್ಲಿ ಘೋಷಿಸಿರುವ ಆಸ್ಪತ್ರೆಗಳನ್ನು ಮೇಲ್ವಿಚಾರಣೆ ಮಾಡಬೇಕು.
  • ಲಸಿಕೆ ಉತ್ಪಾದಕರಿಂದ ನೇರವಾಗಿ ಖರೀದಿಸುವ ನಿರ್ಧಾರಕ್ಕೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ಆದ್ಯತೆ ನೀಡಬೇಕು.
  • ಕೊರೊನಾ ಲಸಿಕೆ ವಿತರಣಾ ಕೇಂದ್ರದ ಬಳಿ ಹೆಚ್ಚೆಚ್ಚು ನೂಕುನುಗ್ಗಲು ಆಗದಂತೆ ತಪ್ಪಿಸಲು, ಲಾ ಆ್ಯಂಡ್ ಆರ್ಡರ್​ ವ್ಯವಸ್ಥೆಯನ್ನು ಸರಿಯಾಗಿ ಇಡಬೇಕು. ರಕ್ಷಣಾ ಇಲಾಖೆ ಜತೆ ಸಮನ್ವಯ ಇರಬೇಕು.
  • 18-45 ವರ್ಷದವರು ಆನ್​ಲೈನ್ ಮೂಲಕವೇ ನೋಂದಣಿ ಮಾಡಿಕೊಳ್ಳಲು ಸರ್ಕಾರಗಳು ಹೆಚ್ಚೆಚ್ಚು ಪ್ರೇರೇಪಿಸಬೇಕು.
  • ಲಸಿಕೆ ನೀಡುವ ಬಗ್ಗೆ, ಲಸಿಕೆ ನೀಡಿದ ನಂತರ ಉಂಟಾಗಬಹುದಾದ ಸಮಸ್ಯೆಗಳ ನಿರ್ವಹಣೆ, ಕೊವಿನ್​ ಬಳಕೆ ಕುರಿತು ಕೊವಿಡ್​ ಲಸಿಕಾ ಕೇಂದ್ರದ ಎಲ್ಲ ಸಿಬ್ಬಂದಿಗೂ ಸೂಕ್ತ ತರಬೇತಿ ನೀಡಬೇಕು.

ಈ ಸಲಹೆಗಳ ಜತೆ ಸದ್ಯ ಹೆಚ್ಚುತ್ತಿರುವ ಕೊರೊನಾ ವೈರಸ್​ ವಿರುದ್ಧ ಹೋರಾಡಲು ಆಸ್ಪತ್ರೆಗಳಲ್ಲಿ ವ್ಯವಸ್ಥೆಗಳನ್ನು ಸುಧಾರಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ತಿಳಿಸಿದೆ. ಬೆಡ್, ಆಕ್ಸಿಜನ್​ ಅಭಾವ ನಿಯಂತ್ರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.

ಇದನ್ನೂ ಓದಿ: ಕರ್ಫ್ಯೂ ನಿಯಮ ಉಲ್ಲಂಘಿಸಿ ತೆರಳುತ್ತಿದ್ದ ನಟ ಮಂಡ್ಯ ರಮೇಶ್​ರನ್ನು ಪ್ರಶ್ನಿಸಿದ ಪೊಲೀಸ್

Follow Us
Lakshmi Hegde
Lakshmi Hegde
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ