AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ 1200 ಮೆಟ್ರಿಕ್ ಟನ್ ಆಕ್ಸಿಜನ್​ ಪೂರೈಸಬೇಕೆಂಬ ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೊರೆ ಹೋದ ಭಾರತ ಸರ್ಕಾರ

Karnataka Needs Oxygen: ಈ ವಿಷಯವನ್ನು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ಅವರ ಗಮನಕ್ಕೆ ತರುವಂತೆ ನ್ಯಾಯಮೂರ್ತಿ ಚಂದ್ರಚೂಡ್ ಸೂಚಿಸಿದರು.

ಕರ್ನಾಟಕಕ್ಕೆ 1200 ಮೆಟ್ರಿಕ್ ಟನ್ ಆಕ್ಸಿಜನ್​ ಪೂರೈಸಬೇಕೆಂಬ ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೊರೆ ಹೋದ ಭಾರತ ಸರ್ಕಾರ
ಸುಪ್ರೀಂ​ ಕೋರ್ಟ್
Ghanashyam D M | ಡಿ.ಎಂ.ಘನಶ್ಯಾಮ
|

Updated on: May 06, 2021 | 4:37 PM

Share

ದೆಹಲಿ: ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ನಿಗದಿಪಡಿಸಿದ್ದ ವೈದ್ಯಕೀಯ ಆಮ್ಲಜನಕ ಸರಬರಾಜು ಮಿತಿಯನ್ನು 1200 ಮೆಟ್ರಿಕ್ ಟನ್​ಗೆ ಹೆಚ್ಚಿಸಬೇಕೆಂದು ಕರ್ನಾಟಕ ಹೈಕೋರ್ಟ್​​ ನಿನ್ನೆ (ಮೇ 5) ನೀಡಿದ್ದ ಆದೇಶವನ್ನು ಭಾರತ ಸರ್ಕಾರವು ಇಂದು (ಮೇ 6) ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಿದೆ. ದೆಹಲಿಗೆ ಆಕ್ಸಿಜನ್ ಸರಬರಾಜು ಕುರಿತು ವಿಚಾರಣೆ ನಡೆಸುತ್ತಿದ್ದ ವೇಳೆ ಸಾಲಿಸಿಟ್ ಜನರಲ್ ತುಷಾರ್ ಮೆಹ್ತಾ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್​ ನೇತೃತ್ವದ ಪೀಠದ ಎದುರು ವಿಶೇಷ ಮನವಿ ಸಲ್ಲಿಸಿದರು. ಈ ವಿಷಯವನ್ನು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ಅವರ ಎದುರು ಸಲ್ಲಿಸುವಂತೆ ನ್ಯಾಯಮೂರ್ತಿ ಚಂದ್ರಚೂಡ್ ಸೂಚಿಸಿದರು. ಸಮರ್ಪಕ ದಾಖಲೆಗಳನ್ನು ಪರಿಶೀಲಿಸದೇ ನಾವಾದರೂ ಏನು ಮಾಡಲು ಸಾಧ್ಯ ಎಂದು ನ್ಯಾಯಮೂರ್ತಿ ಚಂದ್ರಚೂಡ್​ ಪ್ರಶ್ನಿಸಿದರು.

ಆಕ್ಸಿಜನ್ ಕೊರತೆಯಿಂದ ರೋಗಿಗಳ ಸಾವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್​ ನಿನ್ನೆ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ನಿಗದಿಪಡಿಸಿರುವ ಆಮ್ಲಜನಕದ ಮಿತಿಯನ್ನು ಹೆಚ್ಚಿಸಬೇಕೆಂದು ಆದೇಶಿಸಿತ್ತು. ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಹೈಕೋರ್ಟ್​ ವಿಭಾಗೀಯ ಪೀಠವು ನೀಡಿದ್ದ ಆದೇಶ ಹೀಗಿತ್ತು..

‘ಕರ್ನಾಟಕ ಸರ್ಕಾರವು ಏಪ್ರಿಲ್ 30ರಂದು ನೀಡಿದ್ದ ಮನವಿಯನ್ನು ಒಪ್ಪಿಕೊಳ್ಳುವಂತೆ ಭಾರತ ಸರ್ಕಾರಕ್ಕೆ ನಾವು ಈ ಪರಿಸ್ಥಿತಿಯಲ್ಲಿ ಸೂಚಿಸುವುದು ಬಿಟ್ಟು ಬೇರೆ ಆಯ್ಕೆಗಳು ನಮ್ಮೆದುರು ಇಲ್ಲ. ಮುಂದಿನ ಒಂದು ವಾರದ ಅವಧಿಗೆ ಬೇಕಾಗುವಷ್ಟು ಆಕ್ಸಿಜನ್​ ಪ್ರಮಾಣವನ್ನು ಲೆಕ್ಕ ಹಾಕಿ ಕೇಂದ್ರ ಸರ್ಕಾರಕ್ಕೆ ತಿಳಿಸುವಂತೆ ನಾವು ಕರ್ನಾಟಕ ಸರ್ಕಾರಕ್ಕೆ ಸೂಚಿಸುತ್ತಿದ್ದೇವೆ. ಈ ಮನವಿಯನ್ನು ಭಾರತ ಸರ್ಕಾರವು ನಾಲ್ಕು ದಿನಗಳ ಒಳಗೆ ಒಪ್ಪಿಕೊಳ್ಳಬೇಕು. ಕರ್ನಾಟಕ ಸರ್ಕಾರವು ಮನವಿ ಸಲ್ಲಿಸಿ, ಮನವಿಯನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳುವವರೆಗೆ ರಾಜ್ಯಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಪ್ರತಿದಿನ 1200 ಮೆಟ್ರಿಕ್ ಟನ್ ಆಕ್ಸಿಜನ್ ಒದಗಿಸಬೇಕು ಎಂದು ಹೈಕೋರ್ಟ್​ ತನ್ನ ಆದೇಶದಲ್ಲಿ ತಿಳಿಸಿತ್ತು.

ಕರ್ನಾಟಕ ಸರ್ಕಾರವು ಒಂದು ದಿನಕ್ಕೆ 1700 ಮೆಟ್ರಿಕ್ ಟನ್ ಆಕ್ಸಿಜನ್​ಗೆ ಬೇಡಿಕೆಯಿಟ್ಟಿತ್ತು. ಆದರೆ ಕೇಂದ್ರ ಸರ್ಕಾರವು ಕೇವಲ 862 ಮೆಟ್ರಿಕ್ ಟನ್ ಮಾತ್ರ ನೀಡಿತ್ತು ಎಂದು ಕರ್ನಾಟಕ ಹೈಕೋರ್ಟ್​ ಹೇಳಿತ್ತು.

(Centre Moves Supreme Court Challenging Karnataka High Court Direction To Increase Daily Oxygen Quota For Karnataka As 1200 MT)

ಇದನ್ನೂ ಓದಿ: Karnataka High Court: ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ಒದಗಿಸಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ

ಇದನ್ನೂ ಓದಿ: ಕರ್ನಾಟಕದ ಆಕ್ಸಿಜನ್ ಕೋಟಾ ಹೆಚ್ಚಿಸ್ತೀರೋ ಇಲ್ಲವೋ? ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಎಚ್ಚರಿಕೆ

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ