AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ರೈತ ಸಮಸ್ಯೆ ಪರಿಹರಿಸಲು ಸರ್ಕಾರ ಸಿದ್ಧ: ರೈತ ನಾಯಕರಿಗೆ ಪತ್ರ ಬರೆದ ಸರ್ಕಾರ

‘ನೂತನ ಕೃಷಿ ಕಾಯ್ದೆಗಳ ಕುರಿತು ನಿಮ್ಮ ಎಲ್ಲಾ ಸಮಸ್ಯೆಗಳಿಗೂ ತಾರ್ಕಿಕ ಅಂತ್ಯ ಹಾಡಲು ಸರ್ಕಾರ ಸಿದ್ಧವಿದೆ’ ಎಂದು ರೈತ ನಾಯಕರಿಗೆ ಬರೆದ ಪತ್ರದಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.

Delhi Chalo | ರೈತ ಸಮಸ್ಯೆ ಪರಿಹರಿಸಲು ಸರ್ಕಾರ ಸಿದ್ಧ: ರೈತ ನಾಯಕರಿಗೆ ಪತ್ರ ಬರೆದ ಸರ್ಕಾರ
ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕಿಸಾನ್ ಮಜ್ದೂರ್ ಸಂಘ​ದ 60 ರೈತ ನಾಯಕರು
guruganesh bhat
|

Updated on:Dec 24, 2020 | 5:20 PM

Share

ದೆಹಲಿ: ‘ನೂತನ ಕೃಷಿ ಕಾಯ್ದೆಗಳ ಕುರಿತು ನಿಮ್ಮ ಎಲ್ಲಾ ಸಮಸ್ಯೆಗಳಿಗೂ ತಾರ್ಕಿಕ ಅಂತ್ಯ ಹಾಡಲು ಸರ್ಕಾರ ಸಿದ್ಧವಿದೆ’ ಎಂದು ರೈತ ನಾಯಕರಿಗೆ ಬರೆದ ಪತ್ರದಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ. ಆದರೆ, ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ನಿಮ್ಮ ಸೂಚನೆಗಳನ್ನು ಸೇರ್ಪಡೆಗೊಳಿಸುತ್ತೇವೆ ಎಂದು ಸ್ಪಷ್ಟಪಡಿಸಿದೆ.ಕೇಂದ್ರ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ವಿವೇಕ್ ಅಗರ್ವಾಲ್ ಈ ಪತ್ರ ಬರೆದಿದ್ದಾರೆ.

ಇನ್ನೊಂದು ಸುತ್ತಿನ ಮಾತುಕತೆಯ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸುವಂತೆ ಬರೆದಿದ್ದ ಪತ್ರದಲ್ಲಿ ದೆಹಲಿ ಚಲೋ ಚಳವಳಿಯ ತಾರ್ಕಿಕ ಅಂತ್ಯದ ಕುರಿತು ಪ್ರಸ್ತಾಪಿಸಲಾಗಿದೆ. ಈ ಬೆನ್ನಲ್ಲೇ ಕಿಸಾನ್ ಮಜ್ದೂರ್ ಸಂಘ​ದ 60 ರೈತ ನಾಯಕರು ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿದ್ದಾರೆ.

ಕೃಷಿ ಕಾಯ್ದೆಗಳು ಬಂಡವಾಳ ಶಾಹಿಗಳಿಗೆ ಉತ್ತೇಜನಕಾರಿಯಾಗಿವೆ ಎಂದು ದೂರಿರುವ ಭಾರತೀಯ ಕಿಸಾನ್ ಯೂನಿಯನ್ (ಲೋಕ ಶಕ್ತಿ) ಸರ್ವೋಚ್ಛ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಕಾಯ್ದೆಗಳು ರೈತರ ಹಿತವನ್ನು ಕಡೆಗಣಿಸಲಿವೆ ಎಂದು ಸಂಘಟನೆ ಆರೋಪಿಸಿದೆ.

ಟ್ರ್ಯಾಕ್ಟರ್ ಏರಿ ವಿಧಾನಸಭೆಗೆ ಆಗಮಿಸಲಿರುವ ಶಾಸಕರು ಡಿ.28ರಿಂದ ಆರಂಭವಾಗಲಿರುವ ಮಧ್ಯಪ್ರದೇಶದ ಚಳಿಗಾಲದ ಅಧಿವೇಶನಕ್ಕೆ ಕಾಂಗ್ರೆಸ್ ಶಾಸಕರು ಟ್ರ್ಯಾಕ್ಟರ್​ನಲ್ಲಿ ಆಗಮಿಸುವುದಾಗಿ ತಿಳಿಸಿದ್ದಾರೆ. ನೂತನ ಕೃಷಿ ಕಾಯ್ದೆ ಮತ್ತು ಹೆಚ್ಚುತ್ತಿರುವ ತೈಲ ಬೆಲೆಗಳನ್ನು ವಿರೋಧಿಸಿ ಟ್ರ್ಯಾಕ್ಟರ್ ಏರಿ ಬರುವುದಾಗಿ ಕಾಂಗ್ರೆಸ್ ಶಾಸಕರು ತಿಳಿಸಿದ್ದಾರೆ.

Inside Story ದೆಹಲಿ ಚಲೋ ರೈತ ಚಳವಳಿಯ ಪರ-ವಿರೋಧ ಚರ್ಚೆಯ ತಿರುಳೇನು?

Published On - 5:10 pm, Thu, 24 December 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?