AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ವಿಡಿಯೋ ಡಿಲೀಟ್, ಮೆಟಾ ಸಂಸ್ಥೆಯ ಗ್ಲೋಬಲ್ ಪಬ್ಲಿಕ್ ಪಾಲಿಸಿ ಹೆಡ್‌ಗೆ ಸಮನ್ಸ್: ‘ಮೆಟಾ’ ವಿವರಣೆಗೆ ಕೇಂದ್ರ ಅಸಮಾಧಾನ

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಪರೀಕ್ಷಾ ಸುಧಾರಣೆ ಕುರಿತ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ತಾತ್ಕಾಲಿಕವಾಗಿ ನಿರ್ಬಂಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮೆಟಾ ಸಂಸ್ಥೆಯ ಗ್ಲೋಬಲ್ ಪಬ್ಲಿಕ್ ಪಾಲಿಸಿ ಹೆಡ್ ಅವರಿಗೆ ಅಧಿಕೃತ ಸಮನ್ಸ್ ಜಾರಿಗೊಳಿಸಿದೆ. ಇನ್ನೊಂದೆಡೆ, ಈ ತಡೆಹಿಡಿಯುವಿಕೆಗೆ ಮೆಟಾ ಸಂಸ್ಥೆಯು ನೀಡಿರುವ ತಾಂತ್ರಿಕ ದೋಷ ಎಂಬ ಸಮಜಾಯಿಷಿ ಹಾಗೂ ವಿವರಣೆಯ ಕುರಿತು ಭಾರತ ಸರ್ಕಾರವು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಮೋದಿ ವಿಡಿಯೋ ಡಿಲೀಟ್, ಮೆಟಾ ಸಂಸ್ಥೆಯ ಗ್ಲೋಬಲ್ ಪಬ್ಲಿಕ್ ಪಾಲಿಸಿ ಹೆಡ್‌ಗೆ ಸಮನ್ಸ್: 'ಮೆಟಾ' ವಿವರಣೆಗೆ ಕೇಂದ್ರ ಅಸಮಾಧಾನ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jul 28, 2026 | 12:17 PM

Share

ನವದೆಹಲಿ, ಜುಲೈ 28: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಪರೀಕ್ಷಾ ಸುಧಾರಣೆ ಕುರಿತ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ತಾತ್ಕಾಲಿಕವಾಗಿ ನಿರ್ಬಂಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮೆಟಾ ಸಂಸ್ಥೆಯ ಗ್ಲೋಬಲ್ ಪಬ್ಲಿಕ್ ಪಾಲಿಸಿ ಹೆಡ್​ಗೆ ಅಧಿಕೃತ ಸಮನ್ಸ್ ಜಾರಿಗೊಳಿಸಿದೆ. ಇನ್ನೊಂದೆಡೆ, ಈ ತಡೆಹಿಡಿಯುವಿಕೆಗೆ ಮೆಟಾ ಸಂಸ್ಥೆಯು ನೀಡಿರುವ ತಾಂತ್ರಿಕ ದೋಷ ಎಂಬ ಸಮಜಾಯಿಷಿ ಹಾಗೂ ವಿವರಣೆಯ ಕುರಿತು ಭಾರತ ಸರ್ಕಾರವು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನ ಜಾಗತಿಕ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥರಿಗೆ ಸಮನ್ಸ್ ನೀಡಿರುವ ಸಚಿವಾಲಯ, ಈ ಘಟನೆ ಹೇಗೆ ಸಂಭವಿಸಿತು ಹಾಗೂ ಯಾವ ಆಧಾರದ ಮೇಲೆ ಪ್ರಧಾನಿಯವರ ಅಧಿಕೃತ ಹೇಳಿಕೆಯ ವೀಡಿಯೊವನ್ನು ‘ಕಾನೂನುಬದ್ಧ ವಿನಂತಿ’ ಎಂಬ ಸಂದೇಶದೊಂದಿಗೆ ತಡೆಹಿಡಿಯಲಾಯಿತು ಎಂಬುದರ ಕುರಿತು ಖುದ್ದು ಹಾಜರಾಗಿ ಸಂಪೂರ್ಣ ತಾಂತ್ರಿಕ ವಿವರಣೆ ನೀಡುವಂತೆ ಆದೇಶಿಸಿದೆ

ಅಕಸ್ಮಾತ್ತಾಗಿ ಹಾಗೂ ತಾಂತ್ರಿಕ ದೋಷದಿಂದ ವೀಡಿಯೊ ಡಿಲೀಟ್ ಆಗಿತ್ತು ಎಂಬ ಮೆಟಾದ ಕ್ಷಮಾಯಾಚನೆಯನ್ನು ಕೇಂದ್ರ ಸರ್ಕಾರವು ಸಂಪೂರ್ಣವಾಗಿ ಒಪ್ಪಿಕೊಂಡಿಲ್ಲ. ಸ್ವತಃ ದೇಶದ ಪ್ರಧಾನಿಯವರ ಸಂದೇಶವನ್ನು ಭಾರತೀಯ ಬಳಕೆದಾರರಿಗೆ ಲಭ್ಯವಾಗದಂತೆ ನಿರ್ಬಂಧಿಸುವುದು ಸಾಮಾನ್ಯ ತಾಂತ್ರಿಕ ಎಡವಟ್ಟಾಗಲು ಸಾಧ್ಯವಿಲ್ಲ, ಇದರ ಹಿಂದೆ ಬೇರೆ ಯಾವುದಾದರೂ ತಾಂತ್ರಿಕ ಅಥವಾ ನಿರ್ವಹಣಾ ಲೋಪವಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ಓದಿ: ಫೇಸ್​ಬುಕ್​​ನಿಂದ ಪ್ರಧಾನಿ ಮೋದಿ ವೀಡಿಯೊ ಡಿಲೀಟ್: ತಾಂತ್ರಿಕ ದೋಷ ಎಂದು ಸರ್ಕಾರಕ್ಕೆ ಮೆಟಾ ಕ್ಷಮೆಯಾಚನೆ

ವೀಡಿಯೊದಲ್ಲೇನಿತ್ತು?: ಜುಲೈ 23 ರಂದು ಪ್ರಧಾನಿ ಮೋದಿ ಅವರು ‘ಜೆನ್​ ಝಿ’ಯುವಜನತೆಯನ್ನು ಉದ್ದೇಶಿಸಿ ಮಾಡಿದ ಭಾಷಣದ ವೀಡಿಯೊದಲ್ಲಿ, ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕಾನೂನು ಜಾರಿಗೆ ತರುವುದಾಗಿ ಹಾಗೂ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದರು.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರಧಾನಿ, ಭಾರತದ ಯುವಕರೊಂದಿಗೆ ನೇರವಾಗಿ ಸಂಪರ್ಕ ಸಾಧಿಸಲು ಅಪ್‌ಲೋಡ್ ಮಾಡಿದ ಮೊದಲ ಸೆಲ್ಫಿ ವೀಡಿಯೊವನ್ನು ಫೇಸ್‌ಬುಕ್ ನಿರ್ಬಂಧಿಸುತ್ತದೆ ಎಂದರೆ ಏನರ್ಥ? ಲಕ್ಷಾಂತರ ಭಾರತೀಯರು ಏನನ್ನು ನೋಡಬೇಕು ಅಥವಾ ನೋಡಬಾರದು ಎಂದು ನಿರ್ಧರಿಸುವ ಅಧಿಕಾರವನ್ನು ಮೆಟಾಗೆ ಕೊಟ್ಟವರು ಯಾರು?” ಎಂದು ಬಿಜೆಪಿ ಕಾರ್ಯಕರ್ತೆ ಪ್ರೀತಿ ಗಾಂಧಿ ಖಾರವಾಗಿ ಪ್ರಶ್ನಿಸಿದ್ದರು.

ಜುಲೈ 28 ರ ಮುಂಜಾನೆ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದ್ದ ವೀಡಿಯೊವನ್ನು ‘ತಪ್ಪಾಗಿ’ ತೆಗೆದುಹಾಕಲಾಗಿತ್ತು ಮತ್ತು ತಕ್ಷಣವೇ ದೋಷ ಸರಿಪಡಿಸಿ ಮರುಸ್ಥಾಪಿಸಲಾಗಿದೆ ಎಂದು ಮೆಟಾ ಸಂಸ್ಥೆಯ ವಕ್ತಾರರು ಸ್ಪಷ್ಟಪಡಿಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಮಾಜಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ ಆಯೋಜಿಸಿದ್ದ 26 ದಿನಗಳ ಸತತ ವಿದ್ಯಾರ್ಥಿ ಆಂದೋಲನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈ ವೀಡಿಯೊ ಸಂದೇಶ ಬಿಡುಗಡೆ ಮಾಡಿದ್ದರು.

ಪಶ್ನೆ ಪತ್ರಿಕೆ ಸೋರಿಕೆ ಸಾಮಾನ್ಯ ವಿಚಾರವಲ್ಲ, ಇದು ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಭಾರಿ ನೋವು ತಂದಿದೆ ಎಂದು ಒಪ್ಪಿಕೊಂಡಿದ್ದ ಪ್ರಧಾನಿ, ಪರೀಕ್ಷಾ ಮಾಫಿಯಾ ತಡೆಯಲು ವಿಶೇಷ ‘ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳನ್ನು’ ಸ್ಥಾಪಿಸುವುದಾಗಿ ಹಾಗೂ ಕಠಿಣ ಕಾನೂನು ತರುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದರು. 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಕ್ಕೆ ಧಕ್ಕೆಯಾಗದಂತೆ ಸರ್ಕಾರ ಶ್ರಮಿಸಲಿದೆ ಎಂದು ಪ್ರಧಾನಿ ಪ್ರಕಟಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು