AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿ ಮುಖ್ಯ ಸಲಹೆಗಾರನ ಬೆನ್ನು ಬಿಡದ ಕೇಂದ್ರ ಸರ್ಕಾರ; ಆಲಾಪನ್ ಬಂಡೋಪಾಧ್ಯಾಯರಿಗೆ ಶೋಕಾಸ್ ನೋಟಿಸ್​

ಬಂಡೋಪಾಧ್ಯಾಯ ಅವರನ್ನು ವರ್ಗಾವಣೆ ಮಾಡಿ ಕೇಂದ್ರ ಆದೇಶ ಹೊರಡಿಸಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿಯವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ತಾವು ಅವರನ್ನು ಕಳಿಸುವುದಿಲ್ಲ ಎಂದು ಹೇಳಿದ್ದರು.

ಮಮತಾ ಬ್ಯಾನರ್ಜಿ ಮುಖ್ಯ ಸಲಹೆಗಾರನ ಬೆನ್ನು ಬಿಡದ ಕೇಂದ್ರ ಸರ್ಕಾರ; ಆಲಾಪನ್ ಬಂಡೋಪಾಧ್ಯಾಯರಿಗೆ ಶೋಕಾಸ್ ನೋಟಿಸ್​
ಅಲಾಪನ್ ಬಂಡೋಪಾಧ್ಯಾಯ
Lakshmi Hegde
|

Updated on:Jun 01, 2021 | 12:37 PM

Share

ಕೋಲ್ಕತ್ತ: ಪಶ್ಚಿಮಬಂಗಾಳ ಸರ್ಕಾರದ ಮುಖ್ಯಕಾರ್ಯದರ್ಶಿ ಸ್ಥಾನದಿಂದ ನಿವೃತ್ತಿ ಪಡೆದು, ನಂತರ ಸರ್ಕಾರದ ಮುಖ್ಯ ಸಲಹೆಗಾರನಾಗಿ ನೇಮಕಗೊಂಡ ಆಲಾಪನ್​ ಬಂಡೋಪಾಧ್ಯಾಯರಿಗೆ ಕೇಂದ್ರ ಸರ್ಕಾರ ಶೋಕಾಸ್​ ನೋಟಿಸ್​ ನೀಡಿದೆ. ಇತ್ತೀಚೆಗೆ ಪ್ರಧಾನಿ ಮೋದಿಯವರು ಯಾಸ್​ ಚಂಡಮಾರುತದ ಹಾನಿ ಬಗ್ಗೆ ಪರಿಶೀಲನಾ ಸಭೆ ನಡೆಸಲು ಪಶ್ಚಿಮಬಂಗಾಳಕ್ಕೆ ಆಗಮಿಸಿದ್ದಾಗ ಆಲಾಪನ್​ ಬಂಡೋಪಾಧ್ಯಾಯ ಮತ್ತು ಮಮತಾ ಬ್ಯಾನರ್ಜಿಯವರು ಅವರ ಸಭೆಗೆ 30 ನಿಮಿಷ ತಡವಾಗಿ ಬಂದಿದ್ದರು. ಒಬ್ಬ ಮುಖ್ಯಕಾರ್ಯದರ್ಶಿಯಾಗಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ಮೋದಿಯವರಿಗೆ ಅಗೌರವ ತೋರಿಸಿದ್ದಾರೆಂದು ಹಲವು ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದಾಗಿ ಒಂದೇ ದಿನದಲ್ಲಿ ಆಲಾಪನ್​ರಿಗೆ ದೆಹಲಿಗೆ ವರ್ಗಾವಣೆಯಾಗಿತ್ತು.

ದೆಹಲಿಗೆ ವರ್ಗಾವಣೆಯಾದರೂ ಅಲ್ಲಿಗೆ ತೆರಳಲು ನಿರಾಕರಿಸಿದ ಆಲಾಪನ್​ ಬಂಡೋಪಾಧ್ಯಾಯ ತಮ್ಮ ಸೇವೆಗೆ ನಿವೃತ್ತಿ ಘೋಷಿಸಿದ್ದರು. ಹಾಗೇ ಮಮತಾ ಬ್ಯಾನರ್ಜಿಯವರ ಆಪ್ತ ಸಲಹೆಗಾರನಾಗಿ ಮುಂದಿನ ಮೂರು ವರ್ಷಕ್ಕೆ ನೇಮಕಗೊಂಡಿದ್ದರು. ಅವರಿಗೀಗ ಕೇಂದ್ರ ಸರ್ಕಾರ ಶೋಕಾಸ್​ ನೋಟಿಸ್​ ನೀಡಿದ್ದು, ಮಂಗಳವಾರ ಬೆಳಗ್ಗೆ 10ಗಂಟೆಗೆ ದೆಹಲಿಯ ನಾರ್ತ್​ಬ್ಲಾಕ್​​ನಲ್ಲಿರುವ ಗೃಹಸಚಿವಾಲಯದ ಕಚೇರಿಯಲ್ಲಿ ಹಾಜರಿರಲು ಸೂಚಿಸಲಾಗಿತ್ತು. ಆದರೆ ಯಾಕೆ ಸೇರ್ಪಡೆಯಾಗಲಿಲ್ಲ ಎಂಬುದಕ್ಕೆ ವಿವರಣೆ ಕೊಡಬೇಕು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿಯವರ ಸಭೆಯಲ್ಲಿ ಪಾಲ್ಗೊಳ್ಳದೆ ಇರುವುದಕ್ಕೆ ಕಾರಣವೇನು ಎಂಬುದರ ಬಗ್ಗೆಯೂ ಸರಿಯಾದ ವಿವರಣೆ ನೀಡಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ಸಭೆಯನ್ನು ಮಮತಾ ಬ್ಯಾನರ್ಜಿಯವರು ತಪ್ಪಿಸಿಕೊಂಡ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಪರ-ವಿರೋಧ ಮಾತುಗಳು ಕೇಳಿಬಂದಿದ್ದವು. ಇನ್ನು ಬಂಡೋಪಾಧ್ಯಾಯ ಅವರನ್ನು ವರ್ಗಾವಣೆ ಮಾಡಿ ಕೇಂದ್ರ ಆದೇಶ ಹೊರಡಿಸಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿಯವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ತಾವು ಅವರನ್ನು ಕಳಿಸುವುದಿಲ್ಲ ಎಂದು ಹೇಳಿದ್ದರು. ಇದು ಪ್ರತೀಕಾರದ ಧೋರಣೆ. ಇಷ್ಟು ಕ್ರೂರತನವನ್ನು ನಾನೆಂದೂ ನೋಡಿಲ್ಲ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ:  ಕೇಂದ್ರ-ಮಮತಾ ಕಾದಾಟಕ್ಕೆ ನಾಟಕೀಯ ತಿರುವು, ಸೇವೆಗೆ ನಿವೃತ್ತಿ ಘೋಷಿಸಿದ ಮುಖ್ಯ ಕಾರ್ಯದರ್ಶಿ ಈಗ ಬಂಗಾಳ ಸರ್ಕಾರದ ಮುಖ್ಯ ಸಲಹೆಗಾರ!

ಜೂನ್ 1 ರಿಂದ ಎರಡು ತಿಂಗಳುಗಳ ಕಾಲ ಮೀನುಗಾರಿಕೆ ಸ್ಥಗಿತ; ಮೀನುಗಾರರ ನೆರವಿಗೆ ಧಾವಿಸುವಂತೆ ಸರ್ಕಾರಕ್ಕೆ ಮನವಿ

Published On - 11:48 am, Tue, 1 June 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?