AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿ ಮುಖ್ಯ ಸಲಹೆಗಾರನ ಬೆನ್ನು ಬಿಡದ ಕೇಂದ್ರ ಸರ್ಕಾರ; ಆಲಾಪನ್ ಬಂಡೋಪಾಧ್ಯಾಯರಿಗೆ ಶೋಕಾಸ್ ನೋಟಿಸ್​

ಬಂಡೋಪಾಧ್ಯಾಯ ಅವರನ್ನು ವರ್ಗಾವಣೆ ಮಾಡಿ ಕೇಂದ್ರ ಆದೇಶ ಹೊರಡಿಸಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿಯವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ತಾವು ಅವರನ್ನು ಕಳಿಸುವುದಿಲ್ಲ ಎಂದು ಹೇಳಿದ್ದರು.

ಮಮತಾ ಬ್ಯಾನರ್ಜಿ ಮುಖ್ಯ ಸಲಹೆಗಾರನ ಬೆನ್ನು ಬಿಡದ ಕೇಂದ್ರ ಸರ್ಕಾರ; ಆಲಾಪನ್ ಬಂಡೋಪಾಧ್ಯಾಯರಿಗೆ ಶೋಕಾಸ್ ನೋಟಿಸ್​
ಅಲಾಪನ್ ಬಂಡೋಪಾಧ್ಯಾಯ
Follow us
Lakshmi Hegde
|

Updated on:Jun 01, 2021 | 12:37 PM

ಕೋಲ್ಕತ್ತ: ಪಶ್ಚಿಮಬಂಗಾಳ ಸರ್ಕಾರದ ಮುಖ್ಯಕಾರ್ಯದರ್ಶಿ ಸ್ಥಾನದಿಂದ ನಿವೃತ್ತಿ ಪಡೆದು, ನಂತರ ಸರ್ಕಾರದ ಮುಖ್ಯ ಸಲಹೆಗಾರನಾಗಿ ನೇಮಕಗೊಂಡ ಆಲಾಪನ್​ ಬಂಡೋಪಾಧ್ಯಾಯರಿಗೆ ಕೇಂದ್ರ ಸರ್ಕಾರ ಶೋಕಾಸ್​ ನೋಟಿಸ್​ ನೀಡಿದೆ. ಇತ್ತೀಚೆಗೆ ಪ್ರಧಾನಿ ಮೋದಿಯವರು ಯಾಸ್​ ಚಂಡಮಾರುತದ ಹಾನಿ ಬಗ್ಗೆ ಪರಿಶೀಲನಾ ಸಭೆ ನಡೆಸಲು ಪಶ್ಚಿಮಬಂಗಾಳಕ್ಕೆ ಆಗಮಿಸಿದ್ದಾಗ ಆಲಾಪನ್​ ಬಂಡೋಪಾಧ್ಯಾಯ ಮತ್ತು ಮಮತಾ ಬ್ಯಾನರ್ಜಿಯವರು ಅವರ ಸಭೆಗೆ 30 ನಿಮಿಷ ತಡವಾಗಿ ಬಂದಿದ್ದರು. ಒಬ್ಬ ಮುಖ್ಯಕಾರ್ಯದರ್ಶಿಯಾಗಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ಮೋದಿಯವರಿಗೆ ಅಗೌರವ ತೋರಿಸಿದ್ದಾರೆಂದು ಹಲವು ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದಾಗಿ ಒಂದೇ ದಿನದಲ್ಲಿ ಆಲಾಪನ್​ರಿಗೆ ದೆಹಲಿಗೆ ವರ್ಗಾವಣೆಯಾಗಿತ್ತು.

ದೆಹಲಿಗೆ ವರ್ಗಾವಣೆಯಾದರೂ ಅಲ್ಲಿಗೆ ತೆರಳಲು ನಿರಾಕರಿಸಿದ ಆಲಾಪನ್​ ಬಂಡೋಪಾಧ್ಯಾಯ ತಮ್ಮ ಸೇವೆಗೆ ನಿವೃತ್ತಿ ಘೋಷಿಸಿದ್ದರು. ಹಾಗೇ ಮಮತಾ ಬ್ಯಾನರ್ಜಿಯವರ ಆಪ್ತ ಸಲಹೆಗಾರನಾಗಿ ಮುಂದಿನ ಮೂರು ವರ್ಷಕ್ಕೆ ನೇಮಕಗೊಂಡಿದ್ದರು. ಅವರಿಗೀಗ ಕೇಂದ್ರ ಸರ್ಕಾರ ಶೋಕಾಸ್​ ನೋಟಿಸ್​ ನೀಡಿದ್ದು, ಮಂಗಳವಾರ ಬೆಳಗ್ಗೆ 10ಗಂಟೆಗೆ ದೆಹಲಿಯ ನಾರ್ತ್​ಬ್ಲಾಕ್​​ನಲ್ಲಿರುವ ಗೃಹಸಚಿವಾಲಯದ ಕಚೇರಿಯಲ್ಲಿ ಹಾಜರಿರಲು ಸೂಚಿಸಲಾಗಿತ್ತು. ಆದರೆ ಯಾಕೆ ಸೇರ್ಪಡೆಯಾಗಲಿಲ್ಲ ಎಂಬುದಕ್ಕೆ ವಿವರಣೆ ಕೊಡಬೇಕು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿಯವರ ಸಭೆಯಲ್ಲಿ ಪಾಲ್ಗೊಳ್ಳದೆ ಇರುವುದಕ್ಕೆ ಕಾರಣವೇನು ಎಂಬುದರ ಬಗ್ಗೆಯೂ ಸರಿಯಾದ ವಿವರಣೆ ನೀಡಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ಸಭೆಯನ್ನು ಮಮತಾ ಬ್ಯಾನರ್ಜಿಯವರು ತಪ್ಪಿಸಿಕೊಂಡ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಪರ-ವಿರೋಧ ಮಾತುಗಳು ಕೇಳಿಬಂದಿದ್ದವು. ಇನ್ನು ಬಂಡೋಪಾಧ್ಯಾಯ ಅವರನ್ನು ವರ್ಗಾವಣೆ ಮಾಡಿ ಕೇಂದ್ರ ಆದೇಶ ಹೊರಡಿಸಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿಯವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ತಾವು ಅವರನ್ನು ಕಳಿಸುವುದಿಲ್ಲ ಎಂದು ಹೇಳಿದ್ದರು. ಇದು ಪ್ರತೀಕಾರದ ಧೋರಣೆ. ಇಷ್ಟು ಕ್ರೂರತನವನ್ನು ನಾನೆಂದೂ ನೋಡಿಲ್ಲ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ:  ಕೇಂದ್ರ-ಮಮತಾ ಕಾದಾಟಕ್ಕೆ ನಾಟಕೀಯ ತಿರುವು, ಸೇವೆಗೆ ನಿವೃತ್ತಿ ಘೋಷಿಸಿದ ಮುಖ್ಯ ಕಾರ್ಯದರ್ಶಿ ಈಗ ಬಂಗಾಳ ಸರ್ಕಾರದ ಮುಖ್ಯ ಸಲಹೆಗಾರ!

ಜೂನ್ 1 ರಿಂದ ಎರಡು ತಿಂಗಳುಗಳ ಕಾಲ ಮೀನುಗಾರಿಕೆ ಸ್ಥಗಿತ; ಮೀನುಗಾರರ ನೆರವಿಗೆ ಧಾವಿಸುವಂತೆ ಸರ್ಕಾರಕ್ಕೆ ಮನವಿ

Published On - 11:48 am, Tue, 1 June 21

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ