AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಝಿಕಾ  ವೈರಸ್ ಪತ್ತೆ: ವೈದ್ಯಕೀಯ ತಜ್ಞರ ತಂಡ ಕಳುಹಿಸಿದ ಕೇಂದ್ರ ಸರ್ಕಾರ

Zika Virus: ಕಳೆದ ತಿಂಗಳ ಆರಂಭದಲ್ಲಿ ಪುರಂದರ ಹಳ್ಳಿಯಿಂದ ಹಲವಾರು ಜ್ವರ ಪ್ರಕರಣಗಳು ವರದಿಯಾಗಿವೆ ಎಂದು ಇಲಾಖೆ ಹೇಳಿದೆ. ಪರೀಕ್ಷೆಗೆ ಪುಣೆಗೆ ಕಳುಹಿಸಿದ ಮೂರು ಮಾದರಿಗಳು ಚಿಕೂನ್ ಗುನ್ಯಾ ಇರುವುದಾಗಿ ದೃಢಪಟ್ಟಿದೆ.

ಮಹಾರಾಷ್ಟ್ರದಲ್ಲಿ ಝಿಕಾ  ವೈರಸ್ ಪತ್ತೆ: ವೈದ್ಯಕೀಯ ತಜ್ಞರ ತಂಡ ಕಳುಹಿಸಿದ ಕೇಂದ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 02, 2021 | 9:39 PM

Share

ದೆಹಲಿ: ಝಿಕಾ ವೈರಸ್ ಸೋಂಕಿನ ಮೊದಲ ಪ್ರಕರಣ ವರದಿ ಆದ ನಂತರ ಕೇಂದ್ರ ಸರ್ಕಾರ ಮಹಾರಾಷ್ಟ್ರಕ್ಕೆ ವೈದ್ಯಕೀಯ ತಜ್ಞರ ತಂಡವನ್ನು ಕಳುಹಿಸಿದೆ. ದೆಹಲಿಯ ಲೇಡಿ ಹಾರ್ಡಿಂಜ್ ಮೆಡಿಕಲ್ ಕಾಲೇಜಿನ ಸ್ತ್ರೀರೋಗ ತಜ್ಞರು ಮತ್ತು ನಗರದ ರಾಷ್ಟ್ರೀಯ ಮಲೇರಿಯಾ ಸಂಶೋಧನಾ ಸಂಸ್ಥೆಯ ಕೀಟಶಾಸ್ತ್ರಜ್ಞರನ್ನು ಒಳಗೊಂಡ ತಂಡವು ರಾಜ್ಯದ ವೈರಸ್ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಿದೆ. ಅದೇ ವೇಳೆ ಕೇಂದ್ರ ಆರೋಗ್ಯ ಸಚಿವಾಲಯದ ಝಿಕಾ ನಿರ್ವಹಣೆಗಾಗಿರುವ ಕ್ರಿಯಾ ಯೋಜನೆ ಅಳವಡಿಸಲಾಗುವುದು. ಇತ್ತೀಚಿನವರೆಗೂ ಭಾರತದಲ್ಲಿ ಕೊವಿಡ್-19 ಸಾಂಕ್ರಾಮಿಕದ ಕೇಂದ್ರಬಿಂದುವಾಗಿದ್ದ ಮಹಾರಾಷ್ಟ್ರದಲ್ಲಿ ಭಾನುವಾರ ಇದೇ ಮೊದಲ ಬಾರಿ ಝಿಕಾ ವೈರಸ್ ಪ್ರಕರಣವನ್ನು ವರದಿ ಮಾಡಿದೆ. ಪುಣೆ ಜಿಲ್ಲೆಯ ಪುರಂದರ್ ಪ್ರದೇಶದ 50 ವರ್ಷದ ಮಹಿಳೆಗೆ ಈ ರೋಗ ತಗುಲಿದ್ದು, ಇವರಿಗೆ ಚಿಕುನ್ ಗುನ್ಯಾ ಕೂಡಾ ಇದೆ. ಆಕೆ ಸೋಂಕಿನಿಂದ ಚೇತರಿಸಿಕೊಂಡಿದ್ದಾಳೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಕಳೆದ ತಿಂಗಳ ಆರಂಭದಲ್ಲಿ ಪುರಂದರ ಹಳ್ಳಿಯಿಂದ ಹಲವಾರು ಜ್ವರ ಪ್ರಕರಣಗಳು ವರದಿಯಾಗಿವೆ ಎಂದು ಇಲಾಖೆ ಹೇಳಿದೆ. ಪರೀಕ್ಷೆಗೆ ಪುಣೆಗೆ ಕಳುಹಿಸಿದ ಮೂರು ಮಾದರಿಗಳು ಚಿಕೂನ್ ಗುನ್ಯಾ ಇರುವುದಾಗಿ ದೃಢಪಟ್ಟಿದೆ.

ಆ ಹಳ್ಳಿಯ ನಿವಾಸಿಗಳಿಗೆ ಮತ್ತು ಆ ಪ್ರದೇಶದಲ್ಲಿ ಇರುವವರಿಗೆ ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಾಯಿತು. ಚಿಕೂನ್ ಗುನ್ಯಾದ 25 ಪ್ರಕರಣಗಳು, ಮೂರು ಡೆಂಗ್ಯೂ ಮತ್ತು ಒಂದು ಝಿಕಾ ವೈರಸ್ ಸೋಂಕು ಪತ್ತೆಯಾಗಿದೆ.ಮಹಾರಾಷ್ಟ್ರ ಆರೋಗ್ಯ ಇಲಾಖೆಯ ತ್ವರಿತ ಪ್ರತಿಕ್ರಿಯೆ ತಂಡವು ಶನಿವಾರ ಈ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳೊಂದಿಗೆ ಅವರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಮಾತನಾಡಿದ್ದಾರೆ.

ಈ ಮೊದಲು, ಕೇರಳದಲ್ಲಿ ಮಾತ್ರ ಈ ವರ್ಷ ಝಿಕಾ ವೈರಸ್ ಪ್ರಕರಣಗಳು ವರದಿಯಾಗಿವೆ. ಕೇರಳ ರಾಜ್ಯದಲ್ಲಿ ಇದುವರೆಗೆ 63 ಪ್ರಕರಣಗಳು ವರದಿ ಆಗಿವೆ .

ಝಿಕಾ ವೈರಸ್ ಈಡಿಸ್ ಸೊಳ್ಳೆಯಿಂದ ಹರಡುತ್ತದೆ. ಇದು ಡೆಂಗ್ಯೂ ಮತ್ತು ಚಿಕೂನ್ ಗುನ್ಯಾವನ್ನು ಕೂಡಾ ಹರಡುತ್ತದೆ.

ಜ್ವರ, ದೇಹದ ನೋವು, ದದ್ದು, ಕಾಂಜಂಕ್ಟಿವಿಟಿಸ್, ಸ್ನಾಯು ಮತ್ತು ಕೀಲು ನೋವು ಮತ್ತು ಅಸ್ವಸ್ಥತೆ ಅಥವಾ ತಲೆನೋವು ಕೆಲವು ಸಾಮಾನ್ಯ ಲಕ್ಷಣಗಳಾಗಿವೆ. ರೋಗಲಕ್ಷಣಗಳು ಸಾಮಾನ್ಯವಾಗಿ ಎರಡು ಮತ್ತು ಏಳು ದಿನಗಳ ನಡುವೆ ಇರುತ್ತದೆ, ಆದರೂ ಸೋಂಕಿತರಲ್ಲಿ ಹೆಚ್ಚಿನವರು ರೋಗಲಕ್ಷಣಗಳನ್ನು ಕಾಣಿಸುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಸಿದೆ.

ಝಿಕಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ವೈದ್ಯಕೀಯ ತಜ್ಞರು ಅತಿಯಾದ ಕಳವಳ ವ್ಯಕ್ತಪಡಿಸಿದ್ದಾರೆ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೊನಾವೈರಸ್‌ ಹೆಚ್ಚುತ್ತಿರುವುದು ಕೂಡಾ ಈ ಆತಂಕಕ್ಕೆ ಕಾರಣವಾಗಿದೆ. ಕೊರೊನಾವೈರಸ್‌ನಂತೆ ಝಿಕಾ ವೈರಸ್ ಕೂಡ (ಇನ್ನೂ) ಅಜ್ಞಾತ ರೂಪಗಳನ್ನು ಹೊಂದಿರಬಹುದು ಮತ್ತು ಸಾಧ್ಯವಾದಷ್ಟು ಬೇಗ ಸೋಂಕುಗಳನ್ನು ಗುರುತಿಸಲು ಮತ್ತು ಪ್ರತ್ಯೇಕಿಸಲು ಪರೀಕ್ಷೆಯನ್ನು ಹೆಚ್ಚಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿರುವುದಾಗಿ ದೆಹಲಿಯ ಮೌಲಾನಾ ಆಜಾದ್ ಮೆಡಿಕಲ್ ಕಾಲೇಜಿನ ನಿರ್ದೇಶಕರಾದ ಡಾ.ನರೇಶ್ ಗುಪ್ತಾ ಅವರು ಎಎನ್ಐ ಸುದ್ದಿಸಂಸ್ಥೆಗೆ ಹೇಳಿದ್ದಾರೆ.

ಝಿಕಾ ಗಂಭೀರ ಕಾಳಜಿಯ ವೈರಸ್. ಇದು ಸ್ಥಳೀಯವಾಗಿ ಏಕಾಏಕಿ ಹರಡುತ್ತದೆ. ಹಾಗಾಗಿ,ಇದು ಒಂದು ನಿರ್ದಿಷ್ಟ ರಾಜ್ಯ ಅಥವಾ ಸ್ಥಳದಲ್ಲಿ ಸಂಭವಿಸುತ್ತಿದ್ದರೆ ಕಣ್ಗಾವಲಿಡಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸಾಲುಸಾಲು ವೈರಸ್​ಗಳು; ಮೊದಲ ಝಿಕಾ ಪ್ರಕರಣ ಪತ್ತೆ, 25 ಮಂದಿಯಲ್ಲಿ ಚಿಕೂನ್​ಗುನ್ಯಾ, ಡೆಂಘೆ ಆತಂಕ

(Centre sent team of medical experts to Maharashtra to support the state in Zika Virus Case)

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ