AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ ವಾಹಿನಿಯ ಚರ್ಚೆಯಲ್ಲಿ ಭಾಗವಹಿಸಿದ್ದ ಶೋಯೆಬ್ ಜಮೈ ಮೇಲೆ ಹಲ್ಲೆ ಮಾಡಿ ಹೊರದೂಡಿದ ಸಹ ಪ್ಯಾನೆಲಿಸ್ಟ್: ವಿಡಿಯೊ ವೈರಲ್

ಜುಲೈ 7 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿರುವ ಸಂಜಯ್ ಪುರಣ್ ಸಿಂಗ್ ನಿರ್ದೇಶನದ '72 ಹೂರೇ ' ಚಲನಚಿತ್ರದ ಕುರಿತು ಸುದ್ದಿ ವಾಹಿನಿಯಲ್ಲಿ ಚರ್ಚೆ ನಡೆದಿತ್ತು. ಸುದೀರ್ಘ ಟ್ವಿಟ್ಟರ್ ಪೋಸ್ಟ್‌ನಲ್ಲಿ, ಶೋಯೆಬ್ ಜಮೈ ಈ ಘಟನೆಯನ್ನು ವಿವರಿಸಿದ್ದಾರೆ.

ಟಿವಿ ವಾಹಿನಿಯ ಚರ್ಚೆಯಲ್ಲಿ ಭಾಗವಹಿಸಿದ್ದ ಶೋಯೆಬ್ ಜಮೈ ಮೇಲೆ ಹಲ್ಲೆ ಮಾಡಿ ಹೊರದೂಡಿದ ಸಹ ಪ್ಯಾನೆಲಿಸ್ಟ್: ವಿಡಿಯೊ ವೈರಲ್
ಶೋಯೆಬ್ ಜಮೈ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 12, 2023 | 2:06 PM

Share

ಟಿವಿ ವಾಹಿನಿಯ ಚರ್ಚೆಯ ಪ್ಯಾನೆಲಿಸ್ಟ್ ಆಗಿ ಭಾಗವಹಿಸಿದ್ದ ಇಂಡಿಯಾ ಮುಸ್ಲಿಂ ಫೌಂಡೇಶನ್ (India Muslim Foundation) ಮುಖ್ಯಸ್ಥ, ಜಾಮಿಯಾ ವಿದ್ಯಾರ್ಥಿ ಶೋಯೆಬ್ ಜಮೈ(Shoaib Jamai) ಮೇಲೆ ಹಲ್ಲೆ ನಡೆಸಿ, ಅವರನ್ನು ಕಾರ್ಯಕ್ರಮದಿಂದ ಹೊರಹೋಗುವಂತೆ ಹೇಳಲಾದ ವಿಡಿಯೊ ವೈರಲ್ ಆಗಿದೆ. ಈ ವೈರಲ್ ವಿಡಿಯೊವನ್ನು ಹಂಚಿಕೊಂಡ ಶಿವಸೇನಾ ಸಂಸದೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಪ್ರಿಯಾಂಕಾ ಚತುರ್ವೇದಿ (Priyanka Chaturvedi ), ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗಿಂತ ಭಾರತೀಯ ಸುದ್ದಿ ವಾಹಿನಿಗಳು ಉತ್ತಮ ಮನರಂಜನೆ ನೀಡುತ್ತವೆ ಎಂದು ಬರೆದಿದ್ದಾರೆ.

ಶೋಯೆಬ್ ಜಮೈ ಪ್ಯಾನೆಲಿಸ್ಟ್ ಆಗಿರುವ ಯಾವುದೇ ಸುದ್ದಿ ವಾಹಿನಿ ಚರ್ಚೆಯಲ್ಲಿ ನಾನು ಭಾಗವಹಿಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಅವರು ಹೇಳಿದ್ದಾರೆ. “ಈಗ ಸ್ವಲ್ಪ ಸಮಯದಿಂದ ಈ ವ್ಯಕ್ತಿ ಸಭ್ಯತೆಯ ಎಲ್ಲ ಮಿತಿಗಳನ್ನು ದಾಟುತ್ತಿದ್ದಾನೆ. ಆದರೆ ಯಾವ ಟಿವಿ ಚಾನೆಲ್ ಅವರನ್ನು ಕರೆಯುತ್ತದೆಯೋ ಅದನ್ನು ನಾನು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ ಅವರು ಭಾಗವಹಿಸುವ ಟಿವಿ ಚರ್ಚೆಯಲ್ಲಿ ನಾನು ಭಾಗವಹಿಸುವುಜಿಲ್ಲ ಎಂದು ಎಂದು ಪೂನಾವಾಲಾ ಹೇಳಿದ್ದಾರೆ.

ವೈರಲ್ ವಿಡಿಯೊದಲ್ಲಿ ಸಹ-ಪ್ಯಾನೆಲಿಸ್ಟ್ ಸುಬುಹಿ ಖಾನ್ ಮತ್ತು ಶೋಯೆಬ್​​ ಮೈ ಮುಟ್ಟಿ ಜಗಳವಾಡುತ್ತಿರುವುದನ್ನು ಕಾಣಬಹುದು. ನಂತರ ಶೋಯೆಬ್ ಜಮೈಯನ್ನು ಕಾರ್ಯಕ್ರಮದಿಂದ ಹೊರಹೋಗುವಂತೆ ಕೇಳಲಾಯಿತು.

ಜುಲೈ 7 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿರುವ ಸಂಜಯ್ ಪುರಣ್ ಸಿಂಗ್ ನಿರ್ದೇಶನದ ’72 ಹೂರೇ ‘ ಚಲನಚಿತ್ರದ ಕುರಿತು ಸುದ್ದಿ ವಾಹಿನಿಯಲ್ಲಿ ಚರ್ಚೆ ನಡೆದಿತ್ತು. ಸುದೀರ್ಘ ಟ್ವಿಟ್ಟರ್ ಪೋಸ್ಟ್‌ನಲ್ಲಿ, ಶೋಯೆಬ್ ಜಮೈ ಈ ಘಟನೆಯನ್ನು ವಿವರಿಸಿದ್ದಾರೆ. ಇದು ದುರದೃಷ್ಟಕರ. ನಾನು ಸಹ -ಪ್ಯಾನಲಿಸ್ಟ್​​ನಿಂದ ನಿಂದನೆಗೊಳಗಾದೆ. ಆದರೆ ನಾನು ಈ ವಿಷಯವನ್ನು ಬೇರೆ ರೀತಿಯಲ್ಲಿ ದೊಡ್ಡದು ಮಾಡಲು ಹೋಗಿಲ್ಲ ಎಂದಿದ್ದಾರೆ.

ಇದನ್ನೂ ಓದಿ: G20 Meeting: ಡಿಜಿಟಲೀಕರಣವು ಭಾರತದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದೆ: ನರೇಂದ್ರ ಮೋದಿ

ಇಂಡಿಯಾ ಮುಸ್ಲಿಂ ಫೌಂಡೇಶನ್‌ನ ಅಧ್ಯಕ್ಷ ಶೋಯೆಬ್ ಜಮೈ ಆಗಾಗ ಪ್ರಚೋದನಾಕಾರಿ ಹೇಳಿಕೆಗಳಿಂದ ಸುದ್ದಿಯಲ್ಲಿರುತ್ತಾರೆ. ಬಾಂಗ್ಲಾದೇಶದಿಂದ 25 ಕೋಟಿ, ಪಾಕಿಸ್ತಾನದಿಂದ 25 ಕೋಟಿ ಮತ್ತು ಭಾರತಕ್ಕಾಗಿ 25 ಕೋಟಿ ಮುಸ್ಲಿಮರು ಒಂದಾದರೆ ಭಾರತವು ಅಖಂಡ ಭಾರತವಾಗಿ ಬದಲಾಗುತ್ತದೆ ಎಂದು ಅವರು ಹೇಳಿದ್ದರು. ಹಿಂದೂಗಳ ವಿರುದ್ಧ ಯಾವುದೇ ದ್ವೇಷದ ಭಾಷಣದ ಉದ್ದೇಶ ನನಗೆ ಇರಲಿಲ್ಲ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು