AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಶೂಟೌಟ್ ಪ್ರಕರಣ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕಿಡಿ

ಚಾಮರಾಜನಗರದ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿಯ ಗುಂಡಿನ ಚಕಮಕಿಯಲ್ಲಿ ಮೂವರು ತಮಿಳು ಮೂಲದ ವ್ಯಕ್ತಿಗಳ ಸಾವು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಇದನ್ನು "ಹತ್ಯಾಕಾಂಡ" ಎಂದು ಖಂಡಿಸಿ, ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದು, ಘಟನೆಯ ಸತ್ಯಾಂಶ ಹೊರಬರಲಿದೆ ಎಂದಿದ್ದಾರೆ.

ಚಾಮರಾಜನಗರ ಶೂಟೌಟ್ ಪ್ರಕರಣ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಕಿಡಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 17, 2026 | 3:23 PM

Share

ಚೆನ್ನೈ, ಆ.17: ಚಾಮರಾಜನಗರ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ಚಕಮಕಿಯಲ್ಲಿ ತಮಿಳು ಮೂಲದ ಮೂವರು ಮೃತಪಟ್ಟ ಘಟನೆಯನ್ನು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ತೀವ್ರವಾಗಿ ಖಂಡಿಸಿದ್ದಾರೆ. ಈ ಘಟನೆಯನ್ನು “ಹತ್ಯಾಕಾಂಡ” (Massacre) ಎಂದು ಕರೆದಿರುವ ಅವರು, ಪ್ರಕರಣದ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ.

“ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಿವಾಸಿಗಳಾದ ಆಂಥೋನಿ ಸಾಮಿ, ಜಾನ್ ರೋಸ್ ಪೀಟರ್ ಹಾಗೂ ಕುಮಾರ್ ಅವರನ್ನು ಆಗಸ್ಟ್ 15ರ ಮುಂಜಾನೆ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ಗುಂಡಿಕ್ಕಿ ಕೊಂದು ಹಾಕಿರುವುದು ತೀವ್ರ ಹೃದಯವಿದ್ರಾವಕ. ಈ ದೌರ್ಜನ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.

“ಕರ್ನಾಟಕ ಅರಣ್ಯ ಇಲಾಖೆ ನೀಡುತ್ತಿರುವ ವಿವರಣೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಘಟನೆಯ ನೈಜತೆ ಹೊರಬರಲು ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಒತ್ತಾಯಿಸಿದ್ದಾರೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಮತ್ತು ಇಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಕರ್ನಾಟಕ ಸರ್ಕಾರ ಎಚ್ಚರವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರ ಬಲಿ ಪ್ರಕರಣ: ಘಟನೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ!

ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ ಸಿಎಂ ಡಿ.ಕೆ. ಶಿವಕುಮಾರ್:

ಮತ್ತೊಂದೆಡೆ, ಚಾಮರಾಜನಗರ ಜಿಲ್ಲೆಯ ಶಾಗ್ಯ ಗ್ರಾಮದ ಬಳಿ ನಡೆದ ಈ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಪ್ರತಿಕ್ರಿಯಿಸಿದ್ದು, ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

“ಘಟನೆಯ ಬಗ್ಗೆ ಮುಂಜಾನೆ 5 ಗಂಟೆಗೆ ಮಾಹಿತಿ ಸಿಕ್ಕಿದೆ. ಹಲವು ಪ್ರತ್ಯಕ್ಷದರ್ಶಿಗಳನ್ನು ವಿಚಾರಣೆ ನಡೆಸಲಾಗಿದ್ದು, ಬಂದೂಕುಗಳು ಸೇರಿದಂತೆ ಪ್ರಮುಖ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಗಿದ ನಂತರವೇ ಪೂರ್ಣ ಸತ್ಯಾಂಶ ತಿಳಿಯಲಿದೆ” ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಹನೂರು ತಾಲೂಕಿನ ಮಾರಿಯ ಮಂಗಲ ಬೀಟ್ ಪ್ರದೇಶದಲ್ಲಿ ಶಂಕಿತ ಬೇಟೆಗಾರರು ಅರಣ್ಯ ಸಿಬ್ಬಂದಿಯತ್ತ ಗನ್ ಗುರಿಮಾಡಿದಾಗ, ಆತ್ಮರಕ್ಷಣೆಗಾಗಿ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಮೃತಪಟ್ಟವರನ್ನು ತೋಮಿಯರ್ ಪಾಳ್ಯದ ನಿವಾಸಿಗಳು ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಸ್ಥಳೀಯವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!