AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂಡೀಗಢ ಮೇಯರ್ ಚುನಾವಣೆ ಮುಂದೂಡಿಕೆ; ಕಾಂಗ್ರೆಸ್, ಎಎಪಿ ಪ್ರತಿಭಟನೆ

ಯಾವುದೇ ಬಿಜೆಪಿ ಕೌನ್ಸಿಲರ್‌ಗಳು ಚುನಾವಣೆಗೆ ಬಂದಿಲ್ಲ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ, ಅಂದರೆ ಇಂದು ಚುನಾವಣೆ ನಡೆಯುವುದಿಲ್ಲ ಎಂದು ಅವರಿಗೆ ಮೊದಲೇ ತಿಳಿದಿದೆ. ಚುನಾವಣೆ ಮುಂದೂಡಿಕೆ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಕಾಂಗ್ರೆಸ್ ಹೇಳಿದೆ.

ಚಂಡೀಗಢ ಮೇಯರ್ ಚುನಾವಣೆ ಮುಂದೂಡಿಕೆ; ಕಾಂಗ್ರೆಸ್, ಎಎಪಿ ಪ್ರತಿಭಟನೆ
ಚಂಢೀಗಢ ಮೇಯರ್ ಚುನಾವಣೆ
ರಶ್ಮಿ ಕಲ್ಲಕಟ್ಟ
|

Updated on:Jan 18, 2024 | 1:08 PM

Share

ಚಂಡೀಗಢ ಜನವರಿ 18: ಇಂದು (ಗುರುವಾರ) ನಡೆಯಬೇಕಿದ್ದ ಚಂಡೀಗಢ ಮೇಯರ್ ಚುನಾವಣೆಯನ್ನು(Chandigarh mayor polls) ಮುಂದಿನ ಸೂಚನೆಯವರೆಗೆ ಮುಂದೂಡಲಾಗಿದೆ. ಚುನಾವಣೆಗೆ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡ ಅನಿಲ್ ಮಸಿಹ್ (Anil Masih) ಅವರ ಅನಾರೋಗ್ಯದ ಕಾರಣದಿಂದ ಮುಂದೂಡಲಾಗಿದೆ ಎಂದು ಹಲವಾರು ಕೌನ್ಸಿಲರ್‌ಗಳು ಪಠ್ಯ ಸಂದೇಶವನ್ನು ಸ್ವೀಕರಿಸಿದ್ದಾರೆ. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಬಿಜೆಪಿ (BJP) “ಸೋಲು ಎದುರಿಸಲು ಸಿದ್ಧವಿಲ್ಲ” ಎಂದು ಹೇಳಿದೆ.

ಮೇಯರ್ ಹುದ್ದೆಗೆ 18.1.24 ರಂದು ನಿಗದಿಪಡಿಸಲಾದ ಸಭೆಯ ಅಧ್ಯಕ್ಷತೆ u/60 (a) ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ (ಕಾರ್ಯವಿಧಾನ ಮತ್ತು ವ್ಯವಹಾರದ ನಡವಳಿಕೆ) ನಿಯಮಾವಳಿ 1996 ರ ನಿಯಮಾವಳಿ 6(1) ಪ್ರಕಾರ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿರುವ ಅನಿಲ್ ಮಸಿಹ್ ಅವರ ಅನಾರೋಗ್ಯದ ಬಗ್ಗೆ ದೂರವಾಣಿ ಸಂದೇಶವನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಲಾಗಿದೆ. ಮೇಲಿನ ದೃಷ್ಟಿಯಿಂದ, ದಯವಿಟ್ಟು ಮುಂದಿನ ಆದೇಶಗಳನ್ನು ಸ್ವೀಕರಿಸುವವರೆಗೆ ಎಂಸಿ ಕಚೇರಿಗೆ ಬರುವುದುದು ಬೇಡ ವಿನಂತಿಸಲಾಗಿದೆ,” ಹಲವಾರು ಕೌನ್ಸಿಲರ್‌ಗಳು ಬೆಳಿಗ್ಗೆ 10.30 ಕ್ಕೆ ಈ ಸಂದೇಶವನ್ನು ಸ್ವೀಕರಿಸಿದರು.

ಈ ನಿರ್ಧಾರಕ್ಕೆ ಮೇಯರ್ ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ ಮಾಡಿದೆ.

14 ರಲ್ಲಿ, 35-ಸದಸ್ಯ ಎಂಸಿ ಹೌಸ್‌ನಲ್ಲಿ ಬಿಜೆಪಿಯು ಅತಿ ಹೆಚ್ಚು ಕೌನ್ಸಿಲರ್‌ಗಳನ್ನು ಹೊಂದಿದೆ . ಎಎಪಿ 13 ಸೀಟುಗಳೊಂದಿಗ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್ ಏಳು ಕೌನ್ಸಿಲರ್‌ಗಳನ್ನು ಹೊಂದಿದೆ. ಇದರಲ್ಲಿ ಒಬ್ಬರು ಎಸ್‌ಎಡಿ ಕೌನ್ಸಿಲರ್.

ಸ್ಥಳೀಯ ಸಂಸದ ಮತ್ತು  ಸದಸ್ಯ ಕಿರಣ್ ಖೇರ್ ಸೀಟಿನೊಂದಿಗೆ ಬಿಜೆಪಿ ಇದ್ದರೂ ಕಾಂಗ್ರೆಸ್ ಮತ್ತು ಎಎಪಿಯ ಸಂಯೋಜಿತ ಸಂಖ್ಯೆಯನ್ನು ಸೋಲಿಸಲು ಸಾಕಾಗುವುದಿಲ್ಲ.

ಯಾವುದೇ ಬಿಜೆಪಿ ಕೌನ್ಸಿಲರ್‌ಗಳು ಚುನಾವಣೆಗೆ ಬಂದಿಲ್ಲ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ, ಅಂದರೆ ಇಂದು ಚುನಾವಣೆ ನಡೆಯುವುದಿಲ್ಲ ಎಂದು ಅವರಿಗೆ ಮೊದಲೇ ತಿಳಿದಿದೆ.

ಇದನ್ನೂ ಓದಿಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಚುನಾವಣೆ ಮುಂದೂಡಿಕೆ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಕಾಂಗ್ರೆಸ್ ಹೇಳಿದೆ.

“ಬಿಜೆಪಿ ಸೋಲು ಎದುರಿಸಲು ಸಿದ್ಧರಿಲ್ಲ ಮತ್ತು ಉದ್ದೇಶಪೂರ್ವಕವಾಗಿ ಚುನಾವಣೆಯನ್ನು ಮುಂದೂಡಿದ್ದಾರೆ. ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ, ಅವರು ಅಧ್ಯಕ್ಷರನ್ನು ಬದಲಾಯಿಸಲು ಡಿಸಿಗೆ ಮನವಿ ಮಾಡುತ್ತಿದ್ದರು. ಇದು ಪ್ರಜಾಪ್ರಭುತ್ವದ ಅಂತ್ಯ, ನಾವು ಈಗ ನ್ಯಾಯಾಲಯದ ಮೊರೆ ಹೋಗುತ್ತೇವೆ” ಎಂದು ಮಾಜಿ ಸಂಸದ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪವನ್ ಬನ್ಸಾಲ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:05 pm, Thu, 18 January 24

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ