AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂಡೀಗಢದ ಮೆಂಟಲ್ ಆಸ್ಪತ್ರೆಗೆ ಬಾಂಬ್​ ಬೆದರಿಕೆ

ಚಂಡೀಗಢದ ಮಾನಸಿಕ ಆರೋಗ್ಯ ಆಸ್ಪತ್ರೆಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆಯ ಇ-ಮೇಲ್ ಕಳುಹಿಸಿದ್ದಾರೆ. ಕೂಡಲೇ ರೋಗಿಗಳನ್ನು ಬೇರೆಡೆಗೆ ಕರೆದೊಯ್ಯಲಾಗಿದ್ದು, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಅದೇ ಇಮೇಲ್ ಅನ್ನು ದೆಹಲಿ ಮತ್ತು ದಕ್ಷಿಣ ಭಾರತದ ಹಲವಾರು ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಚಂಡೀಗಢದ ಮೆಂಟಲ್ ಆಸ್ಪತ್ರೆಗೆ ಬಾಂಬ್​ ಬೆದರಿಕೆ
ಬಾಂಬ್ ಬೆದರಿಕೆ
ನಯನಾ ರಾಜೀವ್
|

Updated on:Jun 12, 2024 | 3:13 PM

Share

ಇತ್ತೀಚಿನ ದಿನಗಳಲ್ಲಿ ಬಾಂಬ್​ ಬೆದರಿಕೆ(Bomb Threat)ಗಳು ಹೆಚ್ಚಾಗುತ್ತಿವೆ, ಶಾಲೆ, ಆಸ್ಪತ್ರೆಗಳು, ವಿಮಾನಗಳಿಗೆ ಹೆಚ್ಚಿನ ಬೆದರಿಕೆಗಳು ಬಂದಿವೆ. ಇದೀಗ ಚಂಡೀಗಢದ ಮಾನಸಿಕ ಆಸ್ಪತ್ರೆ(ಗೆ ಬಾಂಬ್​ ಬೆದರಿಕೆಯ ಇ-ಮೇಲ್ ಬಂದಿದ್ದು, ಆತಂಕ ಸೃಷ್ಟಿ ಮಾಡಿದೆ. ಕೂಡಲೇ ರೋಗಿಗಳನ್ನು ಬೇರೆಡೆಗೆ ಕರೆದೊಯ್ಯಲಾಗಿದ್ದು, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.

ಅದೇ ಇಮೇಲ್ ಅನ್ನು ದೆಹಲಿ ಮತ್ತು ದಕ್ಷಿಣ ಭಾರತದ ಹಲವಾರು ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇ-ಮೇಲ್ ಮೂಲಕ ಬಂದ ಬಾಂಬ್ ಬೆದರಿಕೆಯ ಬಗ್ಗೆ ನಮಗೆ ಆಸ್ಪತ್ರೆಯಿಂದ ಮಾಹಿತಿ ಬಂದಿದೆ, ತಪಾಸಣೆ ವೇಳೆ ಏನೂ ದೊರೆತಿಲ್ಲ, ಹಿರಿಯ ಅಧಿಕಾರಿಗಳಿಂದ ಅನುಮತಿ ಪಡೆದ ಬಳಿಕ ಆಸ್ಪತ್ರೆ ತೆರೆಯಲಾಗುವುದು ಎಂದು ಡಿಎಸ್​ಪಿ ದಲ್ಬೀರ್​ ಸಿಂಗ್ ತಿಳಿಸಿದ್ದಾರೆ.

ಚಂಡೀಗಢದ ಸೆಕ್ಟರ್ 32 ನಲ್ಲಿರುವ ಮಾನಸಿಕ ಆರೋಗ್ಯ ಸಂಸ್ಥೆಯ ಉಪ ವೈದ್ಯಕೀಯ ಅಧೀಕ್ಷಕಿ ಡಾ ಅಪರಾಜಿತಾ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಆಸ್ಪತ್ರೆಗೆ ಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಆ ಸಮಯದಲ್ಲಿ ಆಸ್ಪತ್ರೆಯಲ್ಲಿ ರೋಗಿಗಳು, ವೈದ್ಯರು ಮತ್ತು ಇತರ ಉದ್ಯೋಗಿಗಳು ಸೇರಿದಂತೆ ಸುಮಾರು 100 ಜನರು ಇದ್ದರು ಎಂದು ಅವರು ಹೇಳಿದರು.

ನಮಗೆ ಇ-ಮೇಲ್ ಬಂದಿದೆ, ನಮ್ಮ ಕೇಂದ್ರದ ಜೊತೆಗೆ, ದೇಶದ ಅನೇಕ ಮನೋವೈದ್ಯಕೀಯ ಆಸ್ಪತ್ರೆಗಳಿಗೆ ಇಮೇಲ್ ಕಳುಹಿಸಲಾಗಿದೆ. ಆಸ್ಪತ್ರೆಯಲ್ಲಿ ಬಾಂಬ್ ಇದೆ ಎಂದು ಬರೆಯಲಾಗಿದೆ ಎಂದು ವೈದ್ಯರು ಹೇಳಿದರು. ನಾವು ಪೊಲೀಸರಿಗೆ ಇಮೇಲ್ ಅನ್ನು ಫಾರ್ವರ್ಡ್ ಮಾಡಿದ್ದೇವೆ. ಆಸ್ಪತ್ರೆಯಲ್ಲಿ ಬಾಂಬ್‌ ಇದೆ ಮತ್ತು ಎಲ್ಲರೂ ಸಾಯುತ್ತಾರೆ ಎಂದು ಇಮೇಲ್‌ನಲ್ಲಿ ಬರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:06 pm, Wed, 12 June 24

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ