ಚಂಡೀಗಢದ ಮೆಂಟಲ್ ಆಸ್ಪತ್ರೆಗೆ ಬಾಂಬ್​ ಬೆದರಿಕೆ

ಚಂಡೀಗಢದ ಮಾನಸಿಕ ಆರೋಗ್ಯ ಆಸ್ಪತ್ರೆಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆಯ ಇ-ಮೇಲ್ ಕಳುಹಿಸಿದ್ದಾರೆ. ಕೂಡಲೇ ರೋಗಿಗಳನ್ನು ಬೇರೆಡೆಗೆ ಕರೆದೊಯ್ಯಲಾಗಿದ್ದು, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಅದೇ ಇಮೇಲ್ ಅನ್ನು ದೆಹಲಿ ಮತ್ತು ದಕ್ಷಿಣ ಭಾರತದ ಹಲವಾರು ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಚಂಡೀಗಢದ ಮೆಂಟಲ್ ಆಸ್ಪತ್ರೆಗೆ ಬಾಂಬ್​ ಬೆದರಿಕೆ
ಬಾಂಬ್ ಬೆದರಿಕೆ
Follow us
|

Updated on:Jun 12, 2024 | 3:13 PM

ಇತ್ತೀಚಿನ ದಿನಗಳಲ್ಲಿ ಬಾಂಬ್​ ಬೆದರಿಕೆ(Bomb Threat)ಗಳು ಹೆಚ್ಚಾಗುತ್ತಿವೆ, ಶಾಲೆ, ಆಸ್ಪತ್ರೆಗಳು, ವಿಮಾನಗಳಿಗೆ ಹೆಚ್ಚಿನ ಬೆದರಿಕೆಗಳು ಬಂದಿವೆ. ಇದೀಗ ಚಂಡೀಗಢದ ಮಾನಸಿಕ ಆಸ್ಪತ್ರೆ(ಗೆ ಬಾಂಬ್​ ಬೆದರಿಕೆಯ ಇ-ಮೇಲ್ ಬಂದಿದ್ದು, ಆತಂಕ ಸೃಷ್ಟಿ ಮಾಡಿದೆ. ಕೂಡಲೇ ರೋಗಿಗಳನ್ನು ಬೇರೆಡೆಗೆ ಕರೆದೊಯ್ಯಲಾಗಿದ್ದು, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.

ಅದೇ ಇಮೇಲ್ ಅನ್ನು ದೆಹಲಿ ಮತ್ತು ದಕ್ಷಿಣ ಭಾರತದ ಹಲವಾರು ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇ-ಮೇಲ್ ಮೂಲಕ ಬಂದ ಬಾಂಬ್ ಬೆದರಿಕೆಯ ಬಗ್ಗೆ ನಮಗೆ ಆಸ್ಪತ್ರೆಯಿಂದ ಮಾಹಿತಿ ಬಂದಿದೆ, ತಪಾಸಣೆ ವೇಳೆ ಏನೂ ದೊರೆತಿಲ್ಲ, ಹಿರಿಯ ಅಧಿಕಾರಿಗಳಿಂದ ಅನುಮತಿ ಪಡೆದ ಬಳಿಕ ಆಸ್ಪತ್ರೆ ತೆರೆಯಲಾಗುವುದು ಎಂದು ಡಿಎಸ್​ಪಿ ದಲ್ಬೀರ್​ ಸಿಂಗ್ ತಿಳಿಸಿದ್ದಾರೆ.

ಚಂಡೀಗಢದ ಸೆಕ್ಟರ್ 32 ನಲ್ಲಿರುವ ಮಾನಸಿಕ ಆರೋಗ್ಯ ಸಂಸ್ಥೆಯ ಉಪ ವೈದ್ಯಕೀಯ ಅಧೀಕ್ಷಕಿ ಡಾ ಅಪರಾಜಿತಾ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಆಸ್ಪತ್ರೆಗೆ ಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಆ ಸಮಯದಲ್ಲಿ ಆಸ್ಪತ್ರೆಯಲ್ಲಿ ರೋಗಿಗಳು, ವೈದ್ಯರು ಮತ್ತು ಇತರ ಉದ್ಯೋಗಿಗಳು ಸೇರಿದಂತೆ ಸುಮಾರು 100 ಜನರು ಇದ್ದರು ಎಂದು ಅವರು ಹೇಳಿದರು.

ನಮಗೆ ಇ-ಮೇಲ್ ಬಂದಿದೆ, ನಮ್ಮ ಕೇಂದ್ರದ ಜೊತೆಗೆ, ದೇಶದ ಅನೇಕ ಮನೋವೈದ್ಯಕೀಯ ಆಸ್ಪತ್ರೆಗಳಿಗೆ ಇಮೇಲ್ ಕಳುಹಿಸಲಾಗಿದೆ. ಆಸ್ಪತ್ರೆಯಲ್ಲಿ ಬಾಂಬ್ ಇದೆ ಎಂದು ಬರೆಯಲಾಗಿದೆ ಎಂದು ವೈದ್ಯರು ಹೇಳಿದರು. ನಾವು ಪೊಲೀಸರಿಗೆ ಇಮೇಲ್ ಅನ್ನು ಫಾರ್ವರ್ಡ್ ಮಾಡಿದ್ದೇವೆ. ಆಸ್ಪತ್ರೆಯಲ್ಲಿ ಬಾಂಬ್‌ ಇದೆ ಮತ್ತು ಎಲ್ಲರೂ ಸಾಯುತ್ತಾರೆ ಎಂದು ಇಮೇಲ್‌ನಲ್ಲಿ ಬರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:06 pm, Wed, 12 June 24

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ