AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂಡೀಗಢದಲ್ಲಿ ಉಗ್ರರ ದಾಳಿ ಸಂಚು ವಿಫಲ: ಬಸ್ ನಿಲ್ದಾಣದ ಬಳಿ ಐಇಡಿ, ಪಿಸ್ತೂಲ್ ಸಹಿತ ಮೂವರು ಶಂಕಿತರ ಬಂಧನ

ಚಂಡೀಗಢದಲ್ಲಿ ಪಾಕಿಸ್ತಾನ ಬೆಂಬಲಿತ BKI ಖಲಿಸ್ತಾನಿ ಉಗ್ರರ ಸರಣಿ ಸ್ಫೋಟದ ಬೃಹತ್ ಸಂಚು ಭಗ್ನಗೊಂಡಿದೆ. ಬಸ್ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಐಇಡಿ ಮತ್ತು ಮಾರಕಾಸ್ತ್ರಗಳೊಂದಿಗೆ ಪಂಜಾಬ್ ಮೂಲದ ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ವಿದೇಶದಲ್ಲಿರುವ ಕಮಾಂಡರ್ ಸೂಚನೆ ಮೇರೆಗೆ ಪ್ರಮುಖ ಸ್ಥಳಗಳಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಲಾಗಿತ್ತು. ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಚಂಡೀಗಢದಲ್ಲಿ ಉಗ್ರರ ದಾಳಿ ಸಂಚು ವಿಫಲ: ಬಸ್ ನಿಲ್ದಾಣದ ಬಳಿ ಐಇಡಿ, ಪಿಸ್ತೂಲ್ ಸಹಿತ ಮೂವರು ಶಂಕಿತರ ಬಂಧನ
ಪೊಲೀಸ್
ನಯನಾ ರಾಜೀವ್
|

Updated on: Aug 24, 2026 | 9:11 AM

Share

ಚಂಡೀಗಢ, ಆಗಸ್ಟ್​ 24: ಸರಣಿ ಸ್ಫೋಟ ನಡೆಸಿ ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಬೆಂಬಲಿತ ಖಲಿಸ್ತಾನಿ(Khalistani) ಉಗ್ರ ಸಂಘಟನೆ ‘ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್’ (BKI) ರೂಪಿಸಿದ್ದ ಬೃಹತ್ ಸಂಚನ್ನು ಚಂಡೀಗಢ ಪೊಲೀಸರು ಯಶಸ್ವಿಯಾಗಿ ಭಗ್ನಗೊಳಿಸಿದ್ದಾರೆ.

ಸೆಕ್ಟರ್ 43 ರ ಅಂತಾರಾಜ್ಯ ಬಸ್ ಟರ್ಮಿನಲ್ (ISBT) ಹಿಂಭಾಗದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಟಿಫಿನ್ ಬಾಕ್ಸ್‌ನಲ್ಲಿ ಅಡಗಿಸಿಟ್ಟಿದ್ದ ಶಂಕಿತ ಐಇಡಿ (IED) ಹಾಗೂ ಮಾರಕಾಸ್ತ್ರಗಳೊಂದಿಗೆ ಪಂಜಾಬ್ ಮೂಲದ ಮೂವರು ಶಂಕಿತ ಉಗ್ರರನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ಪಂಜಾಬ್‌ನ ಲವ್‌ಪ್ರೀತ್ ಸಿಂಗ್ (19), ಜಶನ್‌ಪ್ರೀತ್ ಸಿಂಗ್ (21) ಮತ್ತು ಪ್ರಭ್‌ಪ್ರೀತ್ ಸಿಂಗ್ (19) ಎಂದು ಗುರುತಿಸಲಾಗಿದೆ.

ಸುಮಾರು 5 ಕೆಜಿ ಜೆಲಾಟಿನ್ ಕಡ್ಡಿಗಳು, ಡಿಟೋನೇಟರ್, ರಿಮೋಟ್ ಕಂಟ್ರೋಲ್ ಚಾಲಿತ ವ್ಯವಸ್ಥೆ, ಒಂದು ಪಿಸ್ತೂಲ್, ಮ್ಯಾಗಜೀನ್ ಹಾಗೂ 5 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿಗಳು ವಿದೇಶದಲ್ಲಿರುವ ಬಿಕೆಐ ಕಮಾಂಡರ್ ಸತ್ನಾಮ್ ಅಲಿಯಾಸ್ ಸತ್ತಾ ನೌಶೇರಾ ಸೂಚನೆಯಂತೆ ಚಂಡೀಗಢದ ಪ್ರಮುಖ ಸ್ಥಳಗಳಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದರು.

ಮತ್ತಷ್ಟು ಓದಿ: ಖಲಿಸ್ತಾನಿ ಉಗ್ರ ಹರ್ದೀಪ್ ನಿಜ್ಜರ್ ಹತ್ಯೆ ಮಾಡಿದ್ದು ನಾನೇ ಎಂದ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್

ಕಳೆದ ತಿಂಗಳು ಜುಲೈ 26ರಂದಷ್ಟೇ ಜಲಂಧರ್ ಮೂಲದ ಸತ್ಬೀರ್ ಸಿಂಗ್ ಎಂಬಾತನಿಂದ 1.3 ಕೆಜಿ ಐಇಡಿ ವಶಪಡಿಸಿಕೊಳ್ಳಲಾಗಿತ್ತು. ಈಗ ಮತ್ತೆ ಅದೇ ಮಾದರಿಯ ಜಾಲ ಪತ್ತೆಯಾಗಿದೆ. ಘಟನೆಯ ಬೆನ್ನಲ್ಲೇ ಚಂಡೀಗಢ, ಮೊಹಾಲಿ ಮತ್ತು ಪಂಚಕುಲದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಬಾಂಬ್ ನಿಷ್ಕ್ರಿಯ ದಳ (BDDS) ಹಾಗೂ ಶ್ವಾನದಳದೊಂದಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಸ್ಫೋಟಕಗಳ ಮೂಲ ಮತ್ತು ಜಾಲದಲ್ಲಿರುವ ಇತರ ಸಹಚರರ ಪತ್ತೆಗಾಗಿ ಪೊಲೀಸರು ಬಿಎನ್‌ಎಸ್ (BNS), ಸ್ಫೋಟಕ ಕಾಯ್ದೆ ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು