AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಸಿಡಿ ಪ್ರಕರಣ; ನಟಿ ಜತೆ ಮಾಜಿ ಸಚಿವನ ಲಿವ್​​ ಇನ್​ ರಿಲೇಶನ್​ಶಿಪ್, ಠಾಣೆ ಮೆಟ್ಟಿಲೇರಿದ ಕೇಸ್​

ನನ್ನನ್ನು ಮದುವೆಯಾಗಬೇಕೆಂದು ನಾನು ಮಣಿಕಂದನ್​ ಅವರನ್ನು ಒತ್ತಾಯಿಸುತ್ತಿದ್ದೇನೆ. ನನ್ನ ಜತೆ ಸಂಬಂಧದಲ್ಲಿದ್ದಾಗ ಅವರು ನನ್ನ ಖಾಸಗಿ ಭಾಗದ ಫೋಟಗಳು ಹಾಗೂ ವಿಡಿಯೋಗಳನ್ನು ತೆಗೆದುಕೊಂಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ಮತ್ತೊಂದು ಸಿಡಿ ಪ್ರಕರಣ; ನಟಿ ಜತೆ ಮಾಜಿ ಸಚಿವನ ಲಿವ್​​ ಇನ್​ ರಿಲೇಶನ್​ಶಿಪ್, ಠಾಣೆ ಮೆಟ್ಟಿಲೇರಿದ ಕೇಸ್​
ಚಾಂದಿನಿ-ಮಣಿಕಂದನ್
ರಾಜೇಶ್ ದುಗ್ಗುಮನೆ
| Edited By: |

Updated on:May 28, 2021 | 6:33 PM

Share

ತಮಿಳು ನಟಿ ಚಾಂದಿನಿ ಅವರು ಈಗ ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಎಡಿಎಂಕೆ ಮಾಜಿ  ಸಚಿವ ಮಣಿಕಂದನ್​ ಜತೆ ನಾನು ಐದು ವರ್ಷ ಲೀವ್​​ ಇನ್​​ ರಿಲೇಶನ್​ಶಿಪ್​ನಲ್ಲಿದ್ದೆ. ಆದರೆ, ಈಗ ಅವರು ಮದುವೆ ಆಗಲು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲು ಮಾಡಿದ್ದಾರೆ. ಸದ್ಯ, ಈ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ.

ನನ್ನನ್ನು ಮದುವೆಯಾಗಬೇಕೆಂದು ನಾನು ಮಣಿಕಂದನ್​ ಅವರನ್ನು ಒತ್ತಾಯಿಸುತ್ತಿದ್ದೇನೆ. ನನ್ನ ಜತೆ ಸಂಬಂಧದಲ್ಲಿದ್ದಾಗ ಅವರು ನನ್ನ ಖಾಸಗಿ ಭಾಗದ ಫೋಟಗಳು ಹಾಗೂ ವಿಡಿಯೋಗಳನ್ನು ತೆಗೆದುಕೊಂಡಿದ್ದಾರೆ. ಇವುಗಳನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವುದಾಗಿ ಹೆದರಿಸುತ್ತಿದ್ದಾರೆ. ನನ್ನನ್ನು ಕೊಲ್ಲುವುದಾಗಿಯೂ ಬೆದರಿಕೆ ಹಾಕುತ್ತಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಎಐಎಡಿಎಂಕೆ ಸರ್ಕಾರದಲ್ಲಿ ಮಣಿಕಂದನ್ ರಾಜಕೀಯದ ಆಟ ಆಡಿದ್ದರು. 18 ಇತರ ಶಾಸಕರೊಂದಿಗೆ ಶಶಿಕಲಾರ ಸೋದರ ಸಂಬಂಧಿ ಟಿಟಿವಿ ದಿನಕರನ್ ಪರ ಗುರುತಿಸಿಕೊಂಡಿದ್ದರು. ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ವಿರುದ್ಧ ತಿರುಗಿಬಿದ್ದಿದ್ದ ಟಿಟಿವಿ ದಿನಕರನ್ ಸಚಿವ ಸ್ಥಾನ ಕಳೆದುಕೊಂಡಿದ್ದರು.

ಚಾಂದಿನಿ ಮಲೇಷಿಯಾ ಮೂಲದವರು. ಭಾರತಕ್ಕೆ ಬಂದು ತಮಿಳಿನ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಪಬ್​ಜಿ’ ಹೆಸರಿನ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಸದ್ಯ ನಡೆಯುತ್ತಿವೆ. ಮಣಿಕಂದನ್​ ಜತೆ ರಿಲೇಶನ್​ಶಿಪ್​ನಲ್ಲಿ ಇದ್ದಿರುವ ಬಗ್ಗೆ ಚಾಂದಿನಿ​ ಫೋಟೋಗಳನ್ನು ಪೊಲೀಸರಿಗೆ ನೀಡಿದ್ದಾರೆ. ಪೊಲೀಸರು ಮಣಿಕಂದನ್​ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಖಾಸಗಿ ಭಾಗದ ಸೈಜ್​ ಹೇಳೆಂದ ಅಭಿಮಾನಿಗೆ ನಟಿ ಕೊಟ್ಟ ಉತ್ತರವೇನು?

Mia Khalifa: ಮಿಯಾ ಖಲೀಫಾಗೆ ಪಾಕ್​ ಶಾಕ್​; ಮಾಜಿ ನೀಲಿ ತಾರೆ ಉತ್ತರ ಸಖತ್​ ಖಡಕ್​

Published On - 6:00 pm, Fri, 28 May 21

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ