AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದ ಪಾರ್ಲಿಮೆಂಟ್​ನಲ್ಲಿ ಮೊಳಗಿದ ಕನ್ನಡ ಭಾಷೆ: ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ

ಈ ಮೂಲಕ ಕೆನಡಾದ ಪಾರ್ಲಿಮೆಂಟ್​ನಲ್ಲಿ ಕನ್ನಡದ ಕಹಳೆ ಮೊಳಗಿದೆ. ಈ ಸುಂದರ ಭಾಷೆಗೆ ಸುದೀರ್ಘ ಇತಿಹಾಸ ಇದೆ. ಕನ್ನಡ ಭಾಷೆಯನ್ನು‌ 5 ಕೋಟಿ ಜನರು ಮಾತನಾಡುತ್ತಾರೆ ಎಂದು ಅವರು ಹೇಳಿದರು.

ಕೆನಡಾದ ಪಾರ್ಲಿಮೆಂಟ್​ನಲ್ಲಿ ಮೊಳಗಿದ ಕನ್ನಡ ಭಾಷೆ: ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ
ಕೆನಡಾ ಪಾರ್ಲಿಮೆಂಟ್ ಸಂಸದ ಚಂದ್ರ ಆರ್ಯ
TV9 Web
| Edited By: |

Updated on:May 20, 2022 | 11:27 AM

Share

ಕೆನಡಾ: ನಾನು‌ ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದು ಕೆನಡಾ ಪಾರ್ಲಿಮೆಂಟ್​ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದಾರೆ. ಕೆನಡಾ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ, ಇದೇ ಮೊದಲ‌ ಬಾರಿಗೆ ವಿದೇಶಿ ಪಾರ್ಲಿಮೆಂಟ್​ನಲ್ಲಿ ‌ಕನ್ನಡದಲ್ಲಿ‌ ಭಾಷಣ ಮಾಡಿದರು. ಈ ಮೂಲಕ ಕೆನಡಾದ ಪಾರ್ಲಿಮೆಂಟ್​ನಲ್ಲಿ ಕನ್ನಡದ ಕಹಳೆ ಮೊಳಗಿದೆ. ಈ ಸುಂದರ ಭಾಷೆಗೆ ಸುದೀರ್ಘ ಇತಿಹಾಸ ಇದೆ. ಕನ್ನಡ ಭಾಷೆಯನ್ನು‌ 5 ಕೋಟಿ ಜನರು ಮಾತನಾಡುತ್ತಾರೆ ಎಂದು ಅವರು ಹೇಳಿದರು. ಕುವೆಂಪು ರಚನೆಯ ಮತ್ತು ಡಾ. ರಾಜಕುಮಾರ ಹಾಡಿರುವ ಭಾವಗೀತೆಯಾದ ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು ಎಂದು ಕೆನಡಾ ಸಂಸತ್​ನಲ್ಲಿ ಚಂದ್ರ ಆರ್ಯ ಹೇಳುವ ಮೂಲಕ ತಮ್ಮ ಭಾಷಣವನ್ನು ಮುಗಿಸಿದರು.

ಚಂದ್ರ ಆರ್ಯ, ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ದ್ವಾರಾಳು ಗ್ರಾಮದವರು. ಕೆನಡಾದ ಲಿಬರಲ್ ರಾಜಕಾರಣಿ. ಅವರು 2015 ರ ಫೆಡರಲ್ ಚುನಾವಣೆಯಲ್ಲಿ ಕೆನಡಾದ ಹೌಸ್ ಆಫ್ ಕಾಮನ್ಸ್‌ನಲ್ಲಿ ನೇಪಿಯನ್ ಆಗಿ ಪ್ರತಿನಿಧಿಸಲು ಆಯ್ಕೆಯಾದರು. ಮತ್ತು 2019 ರಲ್ಲಿ ಫೆಡರಲ್ ಚುನಾವಣೆಯಲ್ಲಿ ಮರು ಚುನಾಯಿತರಾದರು. ಅವರು ಪ್ರಸ್ತುತ ಅಂತರಾಷ್ಟ್ರೀಯ ವ್ಯಾಪಾರದ (CIIT) ಸ್ಥಾಯಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:46 am, Fri, 20 May 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್