AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದ ಪಾರ್ಲಿಮೆಂಟ್​ನಲ್ಲಿ ಮೊಳಗಿದ ಕನ್ನಡ ಭಾಷೆ: ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ

ಈ ಮೂಲಕ ಕೆನಡಾದ ಪಾರ್ಲಿಮೆಂಟ್​ನಲ್ಲಿ ಕನ್ನಡದ ಕಹಳೆ ಮೊಳಗಿದೆ. ಈ ಸುಂದರ ಭಾಷೆಗೆ ಸುದೀರ್ಘ ಇತಿಹಾಸ ಇದೆ. ಕನ್ನಡ ಭಾಷೆಯನ್ನು‌ 5 ಕೋಟಿ ಜನರು ಮಾತನಾಡುತ್ತಾರೆ ಎಂದು ಅವರು ಹೇಳಿದರು.

ಕೆನಡಾದ ಪಾರ್ಲಿಮೆಂಟ್​ನಲ್ಲಿ ಮೊಳಗಿದ ಕನ್ನಡ ಭಾಷೆ: ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ
ಕೆನಡಾ ಪಾರ್ಲಿಮೆಂಟ್ ಸಂಸದ ಚಂದ್ರ ಆರ್ಯ
TV9 Web
| Edited By: |

Updated on:May 20, 2022 | 11:27 AM

Share

ಕೆನಡಾ: ನಾನು‌ ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದು ಕೆನಡಾ ಪಾರ್ಲಿಮೆಂಟ್​ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದಾರೆ. ಕೆನಡಾ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ, ಇದೇ ಮೊದಲ‌ ಬಾರಿಗೆ ವಿದೇಶಿ ಪಾರ್ಲಿಮೆಂಟ್​ನಲ್ಲಿ ‌ಕನ್ನಡದಲ್ಲಿ‌ ಭಾಷಣ ಮಾಡಿದರು. ಈ ಮೂಲಕ ಕೆನಡಾದ ಪಾರ್ಲಿಮೆಂಟ್​ನಲ್ಲಿ ಕನ್ನಡದ ಕಹಳೆ ಮೊಳಗಿದೆ. ಈ ಸುಂದರ ಭಾಷೆಗೆ ಸುದೀರ್ಘ ಇತಿಹಾಸ ಇದೆ. ಕನ್ನಡ ಭಾಷೆಯನ್ನು‌ 5 ಕೋಟಿ ಜನರು ಮಾತನಾಡುತ್ತಾರೆ ಎಂದು ಅವರು ಹೇಳಿದರು. ಕುವೆಂಪು ರಚನೆಯ ಮತ್ತು ಡಾ. ರಾಜಕುಮಾರ ಹಾಡಿರುವ ಭಾವಗೀತೆಯಾದ ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು ಎಂದು ಕೆನಡಾ ಸಂಸತ್​ನಲ್ಲಿ ಚಂದ್ರ ಆರ್ಯ ಹೇಳುವ ಮೂಲಕ ತಮ್ಮ ಭಾಷಣವನ್ನು ಮುಗಿಸಿದರು.

ಚಂದ್ರ ಆರ್ಯ, ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ದ್ವಾರಾಳು ಗ್ರಾಮದವರು. ಕೆನಡಾದ ಲಿಬರಲ್ ರಾಜಕಾರಣಿ. ಅವರು 2015 ರ ಫೆಡರಲ್ ಚುನಾವಣೆಯಲ್ಲಿ ಕೆನಡಾದ ಹೌಸ್ ಆಫ್ ಕಾಮನ್ಸ್‌ನಲ್ಲಿ ನೇಪಿಯನ್ ಆಗಿ ಪ್ರತಿನಿಧಿಸಲು ಆಯ್ಕೆಯಾದರು. ಮತ್ತು 2019 ರಲ್ಲಿ ಫೆಡರಲ್ ಚುನಾವಣೆಯಲ್ಲಿ ಮರು ಚುನಾಯಿತರಾದರು. ಅವರು ಪ್ರಸ್ತುತ ಅಂತರಾಷ್ಟ್ರೀಯ ವ್ಯಾಪಾರದ (CIIT) ಸ್ಥಾಯಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:46 am, Fri, 20 May 22

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?