AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಇಂದು ಆಂಧ್ರ ಬಂದ್​ಗೆ ಕರೆ ನೀಡಿದ ಟಿಡಿಪಿ

ತೆಲುಗು ದೇಶಂ ಪಕ್ಷ(ಟಿಡಿಪಿ)ರ ವರಿಷ್ಠ ಚಂದ್ರಬಾಬು ನಾಯ್ಡು ಬಂಧನವನ್ನು ವಿರೋಧಿಸಿ ಟಿಡಿಪಿ ಸೋಮವಾರ ಆಂಧ್ರಪ್ರದೇಶದಾದ್ಯಂತ ಬಂದ್​ಗೆ ಕರೆ ನೀಡಿದೆ. ಆಂಧ್ರಪ್ರದೇಶದ ಸಿಐಡಿ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ನಾಯ್ಡು ಅವರನ್ನು ಶನಿವಾರ (ಸೆಪ್ಟೆಂಬರ್ 8) ಬಂಧಿಸಿತ್ತು. ಅವರನ್ನು ಭಾನುವಾರ (ಸೆಪ್ಟೆಂಬರ್ 10) ಬೆಳಗ್ಗೆ ವಿಜಯವಾಡದ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಇಂದು ಆಂಧ್ರ ಬಂದ್​ಗೆ ಕರೆ ನೀಡಿದ ಟಿಡಿಪಿ
ಚಂದ್ರಬಾಬು ನಾಯ್ಡುImage Credit source: Moneycontrol
ನಯನಾ ರಾಜೀವ್
|

Updated on: Sep 11, 2023 | 8:16 AM

Share

ತೆಲುಗು ದೇಶಂ ಪಕ್ಷ(ಟಿಡಿಪಿ)ರ ವರಿಷ್ಠ ಚಂದ್ರಬಾಬು ನಾಯ್ಡು(Chandrababu Naidu) ಬಂಧನವನ್ನು ವಿರೋಧಿಸಿ ಟಿಡಿಪಿ ಸೋಮವಾರ ಆಂಧ್ರಪ್ರದೇಶದಾದ್ಯಂತ ಬಂದ್​ಗೆ ಕರೆ ನೀಡಿದೆ. ಆಂಧ್ರಪ್ರದೇಶದ ಸಿಐಡಿ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ನಾಯ್ಡು ಅವರನ್ನು ಶನಿವಾರ (ಸೆಪ್ಟೆಂಬರ್ 8) ಬಂಧಿಸಿತ್ತು. ಅವರನ್ನು ಭಾನುವಾರ (ಸೆಪ್ಟೆಂಬರ್ 10) ಬೆಳಗ್ಗೆ ವಿಜಯವಾಡದ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಸಂಸ್ಥೆ ಪಿಟಿಐ ವರದಿಯ ಪ್ರಕಾರ, ಅವರ ಬಂಧನದ ನಂತರ, ನಾಯ್ಡು ಅವರನ್ನು ಶನಿವಾರ-ಭಾನುವಾರ ಮಧ್ಯರಾತ್ರಿ 3:40 ಕ್ಕೆ ವೈದ್ಯಕೀಯ ಪರೀಕ್ಷೆಗಾಗಿ ವಿಜಯವಾಡದ ಸರ್ಕಾರಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದಾದ ನಂತರ ನಾಯ್ಡು ಅವರನ್ನು ಮತ್ತೆ ಎಸ್‌ಐಟಿ ಕಚೇರಿಗೆ ಕರೆದೊಯ್ದು, ಸುಮಾರು 10 ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು.

ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಅವರು ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಖಂಡಿಸಿದರು ಮತ್ತು ಮಾಜಿ ಮುಖ್ಯಮಂತ್ರಿಯನ್ನು ಬೆಂಬಲಿಸಲು ವಿಜಯವಾಡಕ್ಕೆ ತೆರಳಲು ಪ್ರಯತ್ನಿಸಿದರು. ಅವರು ಮೊದಲು ವಿಶೇಷ ವಿಮಾನದಲ್ಲಿ ಹೋಗಲು ಪ್ರಯತ್ನ ಪಟ್ಟರು, ಆದರೆ, ಪೊಲೀಸರು ಅವರನ್ನು ತಡೆದರು.

ಮತ್ತಷ್ಟು ಓದಿ: ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣ: ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ

ಬಳಿಕ ರಸ್ತೆ ಮೂಲಕ ವಿಜಯವಾಡಕ್ಕೆ ತೆರಳಲು ಆರಂಭಿಸಿದ ಪೊಲೀಸರು ಆತನ ಬೆಂಗಾವಲು ವಾಹನವನ್ನು ತಡೆದು ವಶಕ್ಕೆ ತೆಗೆದುಕೊಂಡರು. ಪೊಲೀಸರು ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ.

ಚಂದ್ರಬಾಬು ನಾಯ್ಡು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ ತನ್ನ ಸೇವೆಯನ್ನು ಯಾವ ಶಕ್ತಿಯೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಹುಕೋಟಿ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ವಿಜಯವಾಡದ ಸ್ಥಳೀಯ ನ್ಯಾಯಾಲಯವು ಭಾನುವಾರ ಚಂದ್ರಬಾಬು ನಾಯ್ಡು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕೌಶಲ ಅಭಿವೃದ್ಧಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದ್ದು, ಇದರಿಂದ ರಾಜ್ಯ ಸರ್ಕಾರಕ್ಕೆ 300 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಎಪಿ ಸಿಐಡಿ ಮುಖ್ಯಸ್ಥ ಎನ್ ಸಂಜಯ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ