ಕಸದ ಟ್ರಕ್‌ನಲ್ಲಿಯೇ ಮೂವರು ಕೊರೊನಾ ಶಂಕಿತರನ್ನು ಸಾಗಿಸಿದರು! ವಿಡಿಯೋ ನೋಡಿ

ಹೈದರಾಬಾದ್: ಮೂವರು ಕೊರೊನಾ ಶಂಕಿತರನ್ನು ಆಸ್ಪತ್ರೆಗೆ ರವಾನಿಸಲು ಕಸ ಸಾಗಿಸುವ ಟ್ರಕ್ ಬಳಸಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರಾಶೆ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಜಾರ್ಜಪುಪೆಟದ ಬಿ.ಸಿ ಕಾಲೋನಿಯಲ್ಲಿ ಕಸದ ಟ್ರಕ್‌ನಲ್ಲಿ ಮೂವರು ಶಂಕಿತ ಕೋವಿಡ್ 19 ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಈ ಬಗ್ಗೆ ತಿಳಿದ ಟಿಡಿಪಿ ಮುಖ್ಯಸ್ಥ ಮತ್ತು ಮಾಜಿ ಆಂಧ್ರ ಸಿಎಂ ಈ ಘಟನೆಯನ್ನು ಖಂಡಿಸಿದ್ದಾರೆ. ಕೊರೊನಾವೈರಸ್ ಬಗ್ಗೆ ಜನರಿಗೆ ಅರಿವಿಲ್ಲ, ಆದರೆ […]

ಕಸದ ಟ್ರಕ್‌ನಲ್ಲಿಯೇ ಮೂವರು ಕೊರೊನಾ ಶಂಕಿತರನ್ನು ಸಾಗಿಸಿದರು! ವಿಡಿಯೋ ನೋಡಿ
Edited By:

Updated on: Aug 04, 2020 | 11:45 AM

ಹೈದರಾಬಾದ್: ಮೂವರು ಕೊರೊನಾ ಶಂಕಿತರನ್ನು ಆಸ್ಪತ್ರೆಗೆ ರವಾನಿಸಲು ಕಸ ಸಾಗಿಸುವ ಟ್ರಕ್ ಬಳಸಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರಾಶೆ ವ್ಯಕ್ತಪಡಿಸಿದ್ದಾರೆ.

ವಿಜಯನಗರ ಜಿಲ್ಲೆಯ ಜಾರ್ಜಪುಪೆಟದ ಬಿ.ಸಿ ಕಾಲೋನಿಯಲ್ಲಿ ಕಸದ ಟ್ರಕ್‌ನಲ್ಲಿ ಮೂವರು ಶಂಕಿತ ಕೋವಿಡ್ 19 ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಈ ಬಗ್ಗೆ ತಿಳಿದ ಟಿಡಿಪಿ ಮುಖ್ಯಸ್ಥ ಮತ್ತು ಮಾಜಿ ಆಂಧ್ರ ಸಿಎಂ ಈ ಘಟನೆಯನ್ನು ಖಂಡಿಸಿದ್ದಾರೆ.

ಕೊರೊನಾವೈರಸ್ ಬಗ್ಗೆ ಜನರಿಗೆ ಅರಿವಿಲ್ಲ, ಆದರೆ ಅಸಹಾಯಕ ರೋಗಿಗಳು ಇತರ ಅಪಾಯಕಾರಿ ಕಾಯಿಲೆಗಳಿಗೆ ತುತ್ತಾಗಬಹುದು. ಅವರನ್ನು ಮನುಷ್ಯರಂತೆ ಏಕೆ ಪರಿಗಣಿಸಲಾಗುವುದಿಲ್ಲ? ಎಂದು ಚಂದ್ರಬಾಬು ನಾಯ್ಡು ಟ್ವಿಟ್ಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ವಿಜಯನಗರ ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (DMHO) ಡಾ.ರಮಣ ಕುಮಾರಿ ಈ ಬಗ್ಗೆ ತನಿಖೆಗೆ ಆದೇಶಿಸುವುದಾಗಿ ತಿಳಿಸಿದ್ದಾರೆ.

Published On - 11:44 am, Tue, 4 August 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us