AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಜೀವನದಲ್ಲಿ‌ ಎಂದೂ ಇಂತಹ ಅವಮಾನ, ಟೀಕೆಗಳನ್ನು ಅನುಭವಿಸಿಲ್ಲ: TDP ನಾಯಕ ಚಂದ್ರಬಾಬು‌ನಾಯ್ಡು

ರೈತರ‌ ಕಷ್ಟ ತಿಳಿಸಲು ಪೊಡಿಯಂ ಬಳಿ ಪ್ರತಿಭಟನೆ ಮಾಡಿದ್ದೇನೆ. ಆದರೆ ಇದಕ್ಕಾಗಿ ಸದನದಿಂದ ಹೊರ‌ ಹಾಕಲಾಗಿದೆ. ನನ್ನ ಜೀವನದಲ್ಲಿ‌ ಎಂದೂ ಇಂತಹ ಅವಮಾನ, ಟೀಕೆಗಳನ್ನು ಅನುಭವಿಸಿಲ್ಲ. ಆದರೆ, ನನ್ನ ರಾಜಕೀಯ ಜೀವನ ಇನ್ನೂ ಮುಗಿದಿಲ್ಲ.

ನನ್ನ ಜೀವನದಲ್ಲಿ‌ ಎಂದೂ ಇಂತಹ ಅವಮಾನ, ಟೀಕೆಗಳನ್ನು ಅನುಭವಿಸಿಲ್ಲ: TDP ನಾಯಕ ಚಂದ್ರಬಾಬು‌ನಾಯ್ಡು
ಚಂದ್ರಬಾಬು ನಾಯ್ಡು
ಪೃಥ್ವಿಶಂಕರ
|

Updated on:Nov 30, 2020 | 6:40 PM

Share

ಹೈದರಾಬಾದ್: ಒಂದು ದಿನದ ಮಟ್ಟಿಗೆ ತೆಲುಗು ದೇಶಂ ಪಾರ್ಟಿಯ (ಟಿಡಿಪಿ) 13 ಶಾಸಕರನ್ನು ಅಮಾನತು ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಂಧ್ರದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು‌ನಾಯ್ಡು ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ‌ಜಗನ್ ಮೋಹನ್ ರೆಡ್ಡಿ ಮೇಲೆ ಹರಿಹಾಯ್ದಿರುವ ಅವರು, ‘ಅವರು ನಾಚಿಕೆಯಿಲ್ಲದಂತೆ ಮಾತನಾಡುತ್ತಾರೆ. ಮುಖ್ಯಮಂತ್ರಿ ತಡವಾಗಿ ವಿಧಾನಸಭೆಗೆ ಬಂದಿದ್ದರಿಂದ, ತಡವಾಗಿ ಅಧಿವೇಶನ ಶುರುವಾಯಿತು. 14 ವರ್ಷ ಮುಖ್ಯಮಂತ್ರಿಯಾಗಿ, 12 ವರ್ಷ ಪ್ರತಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದೇನೆ. ನನ್ನ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಓರ್ವ ಫೇಕ್ ಸಿಎಂ‌ ನೋಡುತ್ತಿದ್ದೇನೆ’  ಎಂದರು.

ಪಂಚಾಯತ್ ರಾಜ್​ ಕಾಯ್ದೆ ಬಗ್ಗೆ ಮಾತನಾಡಲು ಅವಕಾಶ ನೀಡದೆ, ಅಮಾನತು ಆದೇಶವನ್ನು ಅಂಗೀಕರಿಸಲಾಗಿದೆ. ಚಂಡಮಾರುತದಿಂದಾಗಿ ರೈತರು ಬೆಳೆದ 20 ಲಕ್ಷ ಎಕರೆ ಬೆಳೆ ಹಾನಿಗೀಡಾಗಿದೆ. ರೈತರು 1 ಲಕ್ಷ ಕೋಟಿ ಹಾನಿಗೀಡಾಗಿ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ಇದನ್ನು ಹೇಳಿದರೆ ಮುಖ್ಯಮಂತ್ರಿ ಗಾಳಿಸುದ್ದಿ ಅಂತಾರೆ. ಬಹಳ ಅಹಂಕಾರದಿಂದ‌ ಮಾತನಾಡ್ತಾರೆ ಎಂದು ಬೇಸರ ವ್ಯಕ್ತಪಡಿಸಿದೆ.

ರೈತರ‌ ಕಷ್ಟ ತಿಳಿಸಲು ಪೊಡಿಯಂ ಬಳಿ ಪ್ರತಿಭಟನೆ ಮಾಡಿದ್ದೇನೆ. ಆದರೆ ಇದಕ್ಕಾಗಿ ಸದನದಿಂದ ಹೊರ‌ ಹಾಕಲಾಗಿದೆ. ನನ್ನ ಜೀವನದಲ್ಲಿ‌ ಎಂದೂ ಇಂತಹ ಅವಮಾನ, ಟೀಕೆಗಳನ್ನು ಅನುಭವಿಸಿಲ್ಲ. ನನ್ನ ರಾಜಕೀಯ ಜೀವನ ಇನ್ನೂ ಮುಗಿದಿಲ್ಲ. ಮುಂದಿನ‌ ದಿನಗಳಲ್ಲಿ ಮತ್ತೆ‌ ನಮ್ಮ ಸರ್ಕಾರ  ಬರಲಿದೆ. ಎಚ್ಚರ ಇರಲಿ ಎಂದು ಸಿ‌ಎಂ ‌ಜಗನ್ ಮೋಹನ್ ರೆಡ್ಡಿಗೆ, ಚಂದ್ರಬಾಬು ನಾಯ್ಡು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಒಂದು ದಿನದ ಮಟ್ಟಿಗೆ 13 TDP ಶಾಸಕರು ಆಂಧ್ರ ವಿಧಾನಸಭೆಯಿಂದ ಅಮಾನತು

Published On - 6:35 pm, Mon, 30 November 20

ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ