AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಶೇಖರ್ ಆಜಾದ್ ಹತ್ಯೆಗೆ ಸಂಚು ನಡೆಸಿದ್ದು ನೆಹರು: ರಾಜಸ್ಥಾನದ ಬಿಜೆಪಿ ಶಾಸಕ ಮದನ್ ದಿಲಾವರ್ ಆರೋಪ

Rajasthan: ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಅವರು ಕ್ರಾಂತಿಕಾರಿ ಚಟುವಟಿಕೆಗಳನ್ನು ಮಾಡುತ್ತಿರುವಾಗ ಅವರಿಗೆ ಹಣದ ಅವಶ್ಯಕತೆ ಇತ್ತು. ಹಾಗಾಗಿ ಅವರು ಪಂಡಿತ್ ಜವಾಹರ್ ಲಾಲ್ ನೆಹರು ಬಳಿ ಹೋದರು. ಆಜಾದ್​ಗೆ ₹1,200 ಅಗತ್ಯವಿತ್ತು

ಚಂದ್ರಶೇಖರ್ ಆಜಾದ್ ಹತ್ಯೆಗೆ ಸಂಚು ನಡೆಸಿದ್ದು ನೆಹರು: ರಾಜಸ್ಥಾನದ ಬಿಜೆಪಿ ಶಾಸಕ ಮದನ್ ದಿಲಾವರ್ ಆರೋಪ
ಬಿಜೆಪಿ ಶಾಸಕ ಮದನ್ ದಿಲಾವರ್
ರಶ್ಮಿ ಕಲ್ಲಕಟ್ಟ
|

Updated on:Mar 01, 2021 | 1:19 PM

Share

ಜೈಪುರ್: ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಹತ್ಯೆಗೆ ಸಂಚು ಹೂಡಿದ್ದು ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಎಂದು ರಾಜಸ್ಥಾನದ ಬಿಜೆಪಿ ಶಾಸಕ ಮದನ್ ದಿಲಾವರ್ ಆರೋಪಿಸಿದ್ದಾರೆ. ದಿಲಾವರ್ ಹೇಳಿಕೆಯನ್ನು ಖಂಡಿಸಿದ ಕಾಂಗ್ರೆಸ್, ರಾಜಸ್ಥಾನದ ಬಿಜೆಪಿ ಶಾಸಕ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದಿದೆ. ಖ್ಯಾತ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಅವರು ಕ್ರಾಂತಿಕಾರಿ ಚಟುವಟಿಕೆಗಳನ್ನು ಮಾಡುತ್ತಿರುವಾಗ ಅವರಿಗೆ ಹಣದ ಅವಶ್ಯಕತೆ ಇತ್ತು. ಹಾಗಾಗಿ ಅವರು ಪಂಡಿತ್ ಜವಾಹರ್ ಲಾಲ್ ನೆಹರು ಬಳಿ ಹೋದರು. ಆಜಾದ್​ಗೆ ₹1,200 ಅಗತ್ಯವಿತ್ತು. ಹಣದ ಅಗತ್ಯವಿದೆ ಎಂದು ನೆಹರು ಅವರಲ್ಲಿ ಹೇಳಿದಾಗ, ಹಣದ ವ್ಯವಸ್ಥೆ ಮಾಡುತ್ತೇನೆ ಎಂದು ಭರವಸೆ ನೀಡಿದ ನೆಹರು ಅದಕ್ಕಾಗಿ ಪಾರ್ಕ್​ನಲ್ಲಿ  ಕಾಯುವಂತೆ ಹೇಳಿದ್ದರು. ಹೀಗೆ ಹೇಳಿದ ನೆಹರು ಬ್ರಿಟಿಷ್ ಪೊಲೀಸರಿಗೆ ಮಾಹಿತಿ ನೀಡಿ ಪಾರ್ಕ್​ನಲ್ಲಿ ಆಜಾದ್ ಕುಳಿತಿರುವ ವಿಷಯ ತಿಳಿಸಿದ್ದರು ಎಂದು ರಾಜಸಮಂದ್ ಜಿಲ್ಲೆಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ದಿಲಾವರ್ ಹೇಳಿದ್ದಾರೆ.

ಪಾರ್ಕ್​ಗೆ ಬಂದ ಬ್ರಿಟಿಷ್ ಪೊಲೀಸರು ಆಜಾದ್ ಮೇಲೆ ಗುಂಡು ಹಾರಿಸಿದ್ದಾರೆ. ಆಜಾದ್ ಕೂಡಾ ಪ್ರತಿಯಾಗಿ ಗುಂಡು ಹಾರಿಸಿ ಮೂವರು ಪೊಲೀಸರನ್ನು ಹತ್ಯೆ ಮಾಡಿದ್ದಾರೆ. ಬ್ರಿಟಿಷರು ಆಜಾದ್​ನ್ನು ಸುತ್ತುವರಿದಾಗ ಆಜಾದ್ ತನ್ನ ಬಂದೂಕಿನಿಂದಲೇ ಗುಂಡು ಹಾರಿಸಿ ಪ್ರಾಣಬಿಟ್ಟಿದ್ದಾರೆ ಎಂದಿದ್ದಾರೆ ದಿಲಾವರ್. ಈ ಹೇಳಿಕೆ ಬಗ್ಗೆ ಸೋಮವಾರ ದಿ ಇಂಡಿಯನ್ ಎಕ್ಸ್​ಪ್ರೆಸ್ ಜತೆ ಮಾತನಾಡಿದ ದಿಲಾವರ್, ಆಜಾದ್ ಸಾವಿಗೆ ನೆಹರು ಅವರೇ ಕಾರಣ. ಅವರ ಸಂಚಿನಿಂದಲೇ ಚಂದ್ರಶೇಖರ್ ಆಜಾದ್ ಹತ್ಯೆಯಾಗಿದ್ದು ಎಂದಿದ್ದಾರೆ.

ಈ ಆರೋಪಕ್ಕೆ ಸಾಕ್ಷ್ಯ ಏನು ಎಂದು ಮಾಧ್ಯಮದವರು ಕೇಳಿದಾಗ ಪುಸ್ತಕ ಮತ್ತು ಸ್ಥಳೀಯ ಮಾಧ್ಯಮಗಳಿಂದ ಈ ಮಾಹಿತಿ ಸಿಕ್ಕಿದೆ ಎಂದು ದಿಲಾವರ್ ಹೇಳಿದ್ದಾರೆ.

ದಿಲಾವರ್ ಹೇಳಿಕೆ ಖಂಡಿಸಿದ ಕಾಂಗ್ರೆಸ್ ಆಜಾದ್ ಸಾವಿಗೆ ನೆಹರು ಅವರೇ ಕಾರಣ ಎಂದು ಹೇಳಿದ ದಿಲಾವರ್ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸಿದೆ. ದಿಲಾವರ್ ಅವರಿಗೆ ಚರಿತ್ರೆ ಬಗ್ಗೆ ಜ್ಞಾನ ಕಮ್ಮಿ. ವಯಸ್ಸಾಗುತ್ತಿದ್ದಂತೆ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಸುದ್ದಿಯಲ್ಲಿರಬೇಕು ಎಂಂಬ ಹಪಾಹಪಿಯಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿ( RPCC) ಕಾರ್ಯದರ್ಶಿ ಪುಷ್ಪೇಂದ್ರ ಭಾರದ್ವಾಜ್ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು, ರೈತರಲ್ಲ. ಡ್ರೈಫ್ರೂಟ್ಸ್, ಚಿಕನ್ ಬಿರಿಯಾನಿ ತಿಂದು ಪ್ರತಿಭಟನೆ ಸ್ಥಳಗಳಲ್ಲಿ ಐಷಾರಾಮಿ ಸೌಕರ್ಯಗಳನ್ನು ಪಡೆಯುತ್ತಿರುವ ಇವರು ಹಕ್ಕಿ ಜ್ವರ ಹರಡುವ ಸಂಚು ನಡೆಸುತ್ತಿದ್ದಾರೆ ಎಂದು ದಿಲಾವರ್ ಜನವರಿ ತಿಂಗಳಲ್ಲಿ ಆರೋಪ ಮಾಡಿದ್ದರು.

ಕೋವಿಡ್ ನಿಬಂಧನೆ ಉಲ್ಲಂಘಿಸಿದ್ದರು ಮದನ್ ಈ ಹಿಂದೆ ಆರ್​ಎಸ್​ಎಸ್ ಕಾರ್ಯಕರ್ತರೊಬ್ಬರ ಹತ್ಯೆ ಖಂಡಿಸಿ ಕೋವಿಡ್ ನಿರ್ಬಂಧದ ನಡುವೆಯೇ ಪ್ರತಿಭಟನೆ ನಡೆಸಿದ ಆರೋಪದಲ್ಲಿ ರಾಮ್ ಗಂಜ್ ಮಂಡಿ ಶಾಸಕ ಮದನ್ ದಿಲಾವರ್ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದರು. ಸಿಆರ್​ಪಿಸಿ  ಸೆಕ್ಷನ್ 144 ಉಲ್ಲಂಘಿಸಿದ್ದಕ್ಕಾಗಿ ದಿಲಾವರ್ ಮತ್ತು ಅವರ ಬೆಂಬಲಿಗರ ಮೇಲೆ ಕೋಟಾದಲ್ಲಿ ರಾಮ್ ಗಂಜ್ ಪೊಲೀಸರು ಫೆಬ್ರವರಿ 12ರಂದು ದೂರು ದಾಖಲಿಸಿದ್ದರು

 ಇದನ್ನೂ ಓದಿ: ರಾಜಸ್ಥಾನದಲ್ಲಿ ವ್ಯಾಟ್ ರೇಟ್ ಕಡಿಮೆ ಆಗಿದೆ.. ಕರ್ನಾಟಕದಲ್ಲಿ ಏಕೆ ಮಾಡಿಲ್ಲ? ರಣದೀಪ್ ಸಿಂಗ್ ಸುರ್ಜೇವಾಲ ಪ್ರಶ್ನೆ

Published On - 1:18 pm, Mon, 1 March 21

ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ