AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan 3: ಬಂದೇ ಬಿಡ್ತು ಕೋಟಿ ಕೋಟಿ ಭಾರತೀಯರ ಕನಸು ನನಸಾಗುವ ಕ್ಷಣ, ಇಂದು ನಿರ್ಣಾಯಕ ದಿನ

ಚಂದ್ರಯಾನ-3.. ಇಡೀ ದೇಶವೇ ಕಾಯುತ್ತಿರುವ ಕ್ಷಣ ಹತ್ತಿರವಾಗುತ್ತಿದೆ. ಇಸ್ರೋ ಉಡಾವಣೆ ಮಾಡಿದ್ದ ನೌಕೆ ಚಂದ್ರನ ಅಂತಿಮ ಕಕ್ಷೆ ಸೇರಿದ್ದು, ಇಂದು ನೌಕೆಯಿಂದ ಲ್ಯಾಂಡರ್ ಪ್ರತ್ಯೇಕಗೊಳ್ಳಲು ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ಇಡೀ ದೇಶವೇ ಕಾಯುತ್ತಿರುವ ಕ್ಷಣ ಹತ್ತಿರವಾಗುತ್ತಿದೆ.

Chandrayaan 3: ಬಂದೇ ಬಿಡ್ತು ಕೋಟಿ ಕೋಟಿ ಭಾರತೀಯರ ಕನಸು ನನಸಾಗುವ ಕ್ಷಣ, ಇಂದು ನಿರ್ಣಾಯಕ ದಿನ
ಚಂದ್ರಯಾನ-3
ಹರೀಶ್ ಜಿ.ಆರ್​.
| Edited By: |

Updated on: Aug 17, 2023 | 7:26 AM

Share

ಬೆಂಗಳೂರು, (ಆಗಸ್ಟ್ 17): ಕೋಟಿ ಕೋಟಿ ಭಾರತೀಯರ ಕನಸು ನನಸಾಗುವ ಕ್ಷಣ ಬಂದಿದೆ. ಭಾರತದ(India) ಮಹತ್ವಾಕಾಂಕ್ಷೆಯ ಇಸ್ರೋದ(ISRO) ಚಂದ್ರಯಾನ-3(Chandrayaan 3:), ಐದನೇ ಹಾಗೂ ಅಂತಿಮ ಕಕ್ಷೆಯನ್ನ ಯಶಸ್ವಿಯಾಗಿ ತಲುಪಿದೆ. ಚಂದ್ರನನ್ನ ಚುಂಬಿಸಲು ನೌಕೆ ಮತ್ತಷ್ಟು ಹತ್ತಿರವಾಗಿದೆ. ಚಂದ್ರನ ದಕ್ಷಿಣ ಧ್ರುವದಿಂದ ಜಸ್ಟ್ 163 ಕಿಲೋಮೀಟರ್ ದೂರದಲ್ಲಿ ನೌಕೆ ಸಾಗುತ್ತಿದೆ. ಆಗಸ್ಟ್ 5ರಿಂದ ಹಂತ ಹಂತವಾಗಿ ಕಕ್ಷೆಯಿಂದ ಕಕ್ಷೆಗೆ ನೌಕೆಯನ್ನ ದಾಟಿಸುವಲ್ಲಿ ಇಸ್ರೋ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ನಿನ್ನೆ (ಆಗಸ್ಟ್ 16) ಬೆಳಗಿನ ಜಾವ 8.30ಕ್ಕೆ ಸರಿಯಾಗಿ ಅಂತಿಮ ಕಕ್ಷೆ ಸೇರಿದೆ. ನೌಕೆಯ ಪ್ರೊಪಲ್ಷನ್ ಮತ್ತು ಲ್ಯಾಂಡರ್ ಮಾಡ್ಯೂಲ್‌ ಪ್ರತ್ಯೇಕಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು ಇಂದು (ಆಗಸ್ಟ್ 17) ಪ್ರತ್ಯೇಕಗೊಳ್ಳಲಿವೆ. ಹೀಗಾಗಿ ಕೋಟಿ ಕೋಟಿ ಭಾರತೀಯರು ಕಾಯುತ್ತಿರುವ ಕ್ಷಣ ಹತ್ತಿರವಾಗುತ್ತಿದ್ದು, ಆಗಸ್ಟ್ 23ರಂದು ನೌಕೆ ಚಂದ್ರನ ದಕ್ಷಿಣ ಧ್ರುವದ ಮೇಲೆ ಸ್ಮೂತ್ ಲ್ಯಾಂಡ್ ಆಗಲಿದೆ.

ಈವರೆಗೂ ಇಸ್ರೋ ಅಂದುಕೊಂಡಂತೆ ಎಲ್ಲವೂ ನಡೆಯುತ್ತಿದೆ. ಸ್ಮೂತ್ ಲ್ಯಾಂಡಿಂಗ್ ಬಳಿಕ ಚಂದ್ರನ ಮೇಲೆ ನೀರು ಸೇರಿದಂತೆ ಹಲವು ರೀತಿ ಅಧ್ಯಯನ ನಡೆಸಲು ಇಸ್ರೋದ ವಿಜ್ಞಾನಿಗಳು ಸಿದ್ಧತೆ ನಡೆಸಿದ್ದಾರೆ. ರೋವರ್ ಚಂದ್ರನ ಮೇಲೆ ಲ್ಯಾಂಡ್ ಆದ ನಂತರವೇ ಮುಂದಿನ ಹಂತ ಶುರುವಾಗಲಿದ್ದು, ಅಲ್ಲಿಂದ ಭಾರತ ಬಾಹ್ಯಾಕಾಶ ಲೋಕದಲ್ಲಿ ಹೊಸ ಇತಿಹಾಸ ಬರೆಯಲಿದೆ.

ಇದನ್ನೂ ಓದಿ: ಚಂದ್ರಯಾನ 3 ರ ಐದನೇ ಮತ್ತು ಅಂತಿಮ ಚಂದ್ರನ ಕಕ್ಷೆಯ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ!

ಚಂದ್ರಯಾನ-3 ಮಿಷನ್ ಆಗಸ್ಟ್ 23, ಸಂಜೆ 5:47 ಕ್ಕೆ ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿಯಲಿದೆ. ಇದು ಯಶಸ್ವಿಯಾದರೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಐತಿಹಾಸಿಕ ಸಾಧನೆಯಾಗಲಿದೆ. ಅಲ್ಲದೇ ಚಂದ್ರನ ಬಗ್ಗೆ ಮತ್ತಷ್ಟು ತಿಳಿದುಕೊಳ್ಳಲು ಸಹಾಯಕವಾಗಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ