AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan 3: ಬಂದೇ ಬಿಡ್ತು ಕೋಟಿ ಕೋಟಿ ಭಾರತೀಯರ ಕನಸು ನನಸಾಗುವ ಕ್ಷಣ, ಇಂದು ನಿರ್ಣಾಯಕ ದಿನ

ಚಂದ್ರಯಾನ-3.. ಇಡೀ ದೇಶವೇ ಕಾಯುತ್ತಿರುವ ಕ್ಷಣ ಹತ್ತಿರವಾಗುತ್ತಿದೆ. ಇಸ್ರೋ ಉಡಾವಣೆ ಮಾಡಿದ್ದ ನೌಕೆ ಚಂದ್ರನ ಅಂತಿಮ ಕಕ್ಷೆ ಸೇರಿದ್ದು, ಇಂದು ನೌಕೆಯಿಂದ ಲ್ಯಾಂಡರ್ ಪ್ರತ್ಯೇಕಗೊಳ್ಳಲು ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ಇಡೀ ದೇಶವೇ ಕಾಯುತ್ತಿರುವ ಕ್ಷಣ ಹತ್ತಿರವಾಗುತ್ತಿದೆ.

Chandrayaan 3: ಬಂದೇ ಬಿಡ್ತು ಕೋಟಿ ಕೋಟಿ ಭಾರತೀಯರ ಕನಸು ನನಸಾಗುವ ಕ್ಷಣ, ಇಂದು ನಿರ್ಣಾಯಕ ದಿನ
ಚಂದ್ರಯಾನ-3
ಹರೀಶ್ ಜಿ.ಆರ್​.
| Edited By: |

Updated on: Aug 17, 2023 | 7:26 AM

Share

ಬೆಂಗಳೂರು, (ಆಗಸ್ಟ್ 17): ಕೋಟಿ ಕೋಟಿ ಭಾರತೀಯರ ಕನಸು ನನಸಾಗುವ ಕ್ಷಣ ಬಂದಿದೆ. ಭಾರತದ(India) ಮಹತ್ವಾಕಾಂಕ್ಷೆಯ ಇಸ್ರೋದ(ISRO) ಚಂದ್ರಯಾನ-3(Chandrayaan 3:), ಐದನೇ ಹಾಗೂ ಅಂತಿಮ ಕಕ್ಷೆಯನ್ನ ಯಶಸ್ವಿಯಾಗಿ ತಲುಪಿದೆ. ಚಂದ್ರನನ್ನ ಚುಂಬಿಸಲು ನೌಕೆ ಮತ್ತಷ್ಟು ಹತ್ತಿರವಾಗಿದೆ. ಚಂದ್ರನ ದಕ್ಷಿಣ ಧ್ರುವದಿಂದ ಜಸ್ಟ್ 163 ಕಿಲೋಮೀಟರ್ ದೂರದಲ್ಲಿ ನೌಕೆ ಸಾಗುತ್ತಿದೆ. ಆಗಸ್ಟ್ 5ರಿಂದ ಹಂತ ಹಂತವಾಗಿ ಕಕ್ಷೆಯಿಂದ ಕಕ್ಷೆಗೆ ನೌಕೆಯನ್ನ ದಾಟಿಸುವಲ್ಲಿ ಇಸ್ರೋ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ನಿನ್ನೆ (ಆಗಸ್ಟ್ 16) ಬೆಳಗಿನ ಜಾವ 8.30ಕ್ಕೆ ಸರಿಯಾಗಿ ಅಂತಿಮ ಕಕ್ಷೆ ಸೇರಿದೆ. ನೌಕೆಯ ಪ್ರೊಪಲ್ಷನ್ ಮತ್ತು ಲ್ಯಾಂಡರ್ ಮಾಡ್ಯೂಲ್‌ ಪ್ರತ್ಯೇಕಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು ಇಂದು (ಆಗಸ್ಟ್ 17) ಪ್ರತ್ಯೇಕಗೊಳ್ಳಲಿವೆ. ಹೀಗಾಗಿ ಕೋಟಿ ಕೋಟಿ ಭಾರತೀಯರು ಕಾಯುತ್ತಿರುವ ಕ್ಷಣ ಹತ್ತಿರವಾಗುತ್ತಿದ್ದು, ಆಗಸ್ಟ್ 23ರಂದು ನೌಕೆ ಚಂದ್ರನ ದಕ್ಷಿಣ ಧ್ರುವದ ಮೇಲೆ ಸ್ಮೂತ್ ಲ್ಯಾಂಡ್ ಆಗಲಿದೆ.

ಈವರೆಗೂ ಇಸ್ರೋ ಅಂದುಕೊಂಡಂತೆ ಎಲ್ಲವೂ ನಡೆಯುತ್ತಿದೆ. ಸ್ಮೂತ್ ಲ್ಯಾಂಡಿಂಗ್ ಬಳಿಕ ಚಂದ್ರನ ಮೇಲೆ ನೀರು ಸೇರಿದಂತೆ ಹಲವು ರೀತಿ ಅಧ್ಯಯನ ನಡೆಸಲು ಇಸ್ರೋದ ವಿಜ್ಞಾನಿಗಳು ಸಿದ್ಧತೆ ನಡೆಸಿದ್ದಾರೆ. ರೋವರ್ ಚಂದ್ರನ ಮೇಲೆ ಲ್ಯಾಂಡ್ ಆದ ನಂತರವೇ ಮುಂದಿನ ಹಂತ ಶುರುವಾಗಲಿದ್ದು, ಅಲ್ಲಿಂದ ಭಾರತ ಬಾಹ್ಯಾಕಾಶ ಲೋಕದಲ್ಲಿ ಹೊಸ ಇತಿಹಾಸ ಬರೆಯಲಿದೆ.

ಇದನ್ನೂ ಓದಿ: ಚಂದ್ರಯಾನ 3 ರ ಐದನೇ ಮತ್ತು ಅಂತಿಮ ಚಂದ್ರನ ಕಕ್ಷೆಯ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ!

ಚಂದ್ರಯಾನ-3 ಮಿಷನ್ ಆಗಸ್ಟ್ 23, ಸಂಜೆ 5:47 ಕ್ಕೆ ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿಯಲಿದೆ. ಇದು ಯಶಸ್ವಿಯಾದರೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಐತಿಹಾಸಿಕ ಸಾಧನೆಯಾಗಲಿದೆ. ಅಲ್ಲದೇ ಚಂದ್ರನ ಬಗ್ಗೆ ಮತ್ತಷ್ಟು ತಿಳಿದುಕೊಳ್ಳಲು ಸಹಾಯಕವಾಗಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ