AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan 3: ಬಂದೇ ಬಿಡ್ತು ಕೋಟಿ ಕೋಟಿ ಭಾರತೀಯರ ಕನಸು ನನಸಾಗುವ ಕ್ಷಣ, ಇಂದು ನಿರ್ಣಾಯಕ ದಿನ

ಚಂದ್ರಯಾನ-3.. ಇಡೀ ದೇಶವೇ ಕಾಯುತ್ತಿರುವ ಕ್ಷಣ ಹತ್ತಿರವಾಗುತ್ತಿದೆ. ಇಸ್ರೋ ಉಡಾವಣೆ ಮಾಡಿದ್ದ ನೌಕೆ ಚಂದ್ರನ ಅಂತಿಮ ಕಕ್ಷೆ ಸೇರಿದ್ದು, ಇಂದು ನೌಕೆಯಿಂದ ಲ್ಯಾಂಡರ್ ಪ್ರತ್ಯೇಕಗೊಳ್ಳಲು ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ಇಡೀ ದೇಶವೇ ಕಾಯುತ್ತಿರುವ ಕ್ಷಣ ಹತ್ತಿರವಾಗುತ್ತಿದೆ.

Chandrayaan 3: ಬಂದೇ ಬಿಡ್ತು ಕೋಟಿ ಕೋಟಿ ಭಾರತೀಯರ ಕನಸು ನನಸಾಗುವ ಕ್ಷಣ, ಇಂದು ನಿರ್ಣಾಯಕ ದಿನ
ಚಂದ್ರಯಾನ-3
ಹರೀಶ್ ಜಿ.ಆರ್​.
| Edited By: |

Updated on: Aug 17, 2023 | 7:26 AM

Share

ಬೆಂಗಳೂರು, (ಆಗಸ್ಟ್ 17): ಕೋಟಿ ಕೋಟಿ ಭಾರತೀಯರ ಕನಸು ನನಸಾಗುವ ಕ್ಷಣ ಬಂದಿದೆ. ಭಾರತದ(India) ಮಹತ್ವಾಕಾಂಕ್ಷೆಯ ಇಸ್ರೋದ(ISRO) ಚಂದ್ರಯಾನ-3(Chandrayaan 3:), ಐದನೇ ಹಾಗೂ ಅಂತಿಮ ಕಕ್ಷೆಯನ್ನ ಯಶಸ್ವಿಯಾಗಿ ತಲುಪಿದೆ. ಚಂದ್ರನನ್ನ ಚುಂಬಿಸಲು ನೌಕೆ ಮತ್ತಷ್ಟು ಹತ್ತಿರವಾಗಿದೆ. ಚಂದ್ರನ ದಕ್ಷಿಣ ಧ್ರುವದಿಂದ ಜಸ್ಟ್ 163 ಕಿಲೋಮೀಟರ್ ದೂರದಲ್ಲಿ ನೌಕೆ ಸಾಗುತ್ತಿದೆ. ಆಗಸ್ಟ್ 5ರಿಂದ ಹಂತ ಹಂತವಾಗಿ ಕಕ್ಷೆಯಿಂದ ಕಕ್ಷೆಗೆ ನೌಕೆಯನ್ನ ದಾಟಿಸುವಲ್ಲಿ ಇಸ್ರೋ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ನಿನ್ನೆ (ಆಗಸ್ಟ್ 16) ಬೆಳಗಿನ ಜಾವ 8.30ಕ್ಕೆ ಸರಿಯಾಗಿ ಅಂತಿಮ ಕಕ್ಷೆ ಸೇರಿದೆ. ನೌಕೆಯ ಪ್ರೊಪಲ್ಷನ್ ಮತ್ತು ಲ್ಯಾಂಡರ್ ಮಾಡ್ಯೂಲ್‌ ಪ್ರತ್ಯೇಕಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು ಇಂದು (ಆಗಸ್ಟ್ 17) ಪ್ರತ್ಯೇಕಗೊಳ್ಳಲಿವೆ. ಹೀಗಾಗಿ ಕೋಟಿ ಕೋಟಿ ಭಾರತೀಯರು ಕಾಯುತ್ತಿರುವ ಕ್ಷಣ ಹತ್ತಿರವಾಗುತ್ತಿದ್ದು, ಆಗಸ್ಟ್ 23ರಂದು ನೌಕೆ ಚಂದ್ರನ ದಕ್ಷಿಣ ಧ್ರುವದ ಮೇಲೆ ಸ್ಮೂತ್ ಲ್ಯಾಂಡ್ ಆಗಲಿದೆ.

ಈವರೆಗೂ ಇಸ್ರೋ ಅಂದುಕೊಂಡಂತೆ ಎಲ್ಲವೂ ನಡೆಯುತ್ತಿದೆ. ಸ್ಮೂತ್ ಲ್ಯಾಂಡಿಂಗ್ ಬಳಿಕ ಚಂದ್ರನ ಮೇಲೆ ನೀರು ಸೇರಿದಂತೆ ಹಲವು ರೀತಿ ಅಧ್ಯಯನ ನಡೆಸಲು ಇಸ್ರೋದ ವಿಜ್ಞಾನಿಗಳು ಸಿದ್ಧತೆ ನಡೆಸಿದ್ದಾರೆ. ರೋವರ್ ಚಂದ್ರನ ಮೇಲೆ ಲ್ಯಾಂಡ್ ಆದ ನಂತರವೇ ಮುಂದಿನ ಹಂತ ಶುರುವಾಗಲಿದ್ದು, ಅಲ್ಲಿಂದ ಭಾರತ ಬಾಹ್ಯಾಕಾಶ ಲೋಕದಲ್ಲಿ ಹೊಸ ಇತಿಹಾಸ ಬರೆಯಲಿದೆ.

ಇದನ್ನೂ ಓದಿ: ಚಂದ್ರಯಾನ 3 ರ ಐದನೇ ಮತ್ತು ಅಂತಿಮ ಚಂದ್ರನ ಕಕ್ಷೆಯ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ!

ಚಂದ್ರಯಾನ-3 ಮಿಷನ್ ಆಗಸ್ಟ್ 23, ಸಂಜೆ 5:47 ಕ್ಕೆ ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿಯಲಿದೆ. ಇದು ಯಶಸ್ವಿಯಾದರೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಐತಿಹಾಸಿಕ ಸಾಧನೆಯಾಗಲಿದೆ. ಅಲ್ಲದೇ ಚಂದ್ರನ ಬಗ್ಗೆ ಮತ್ತಷ್ಟು ತಿಳಿದುಕೊಳ್ಳಲು ಸಹಾಯಕವಾಗಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!