AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ-3 ಗೇಮ್ ಚೇಂಜರ್ ಆಗಲಿದೆ: ಇಸ್ರೋ ಮಾಜಿ ವಿಜ್ಞಾನಿ ನಂಬಿ ನಾರಾಯಣನ್

Chandrayaan-3: 'ಚಂದ್ರಯಾನ-3 ಭಾರತಕ್ಕೆ ಖಂಡಿತವಾಗಿಯೂ ಗೇಮ್ ಚೇಂಜರ್,  ಅದು ಯಶಸ್ವಿಯಾಗಲಿದೆ ಎಂದು ನಾನು ಭಾವಿಸುತ್ತೇನೆ. ಭಾರತ ಇಡೀ ವಿಶ್ವಕ್ಕೆ ಸ್ಪೂರ್ತಿಯಾಗಲಿದೆ. ಉಡಾವಣೆಗಾಗಿ ಕಾಯೋಣ ಮತ್ತು ಉತ್ತಮವಾದುದ್ದಕ್ಕಾಗಿ ಪ್ರಾರ್ಥಿಸೋಣ ಎಂದಿದ್ದಾರೆ ನಂಬಿ ನಾರಾಯಣ್

ಚಂದ್ರಯಾನ-3 ಗೇಮ್ ಚೇಂಜರ್ ಆಗಲಿದೆ: ಇಸ್ರೋ ಮಾಜಿ ವಿಜ್ಞಾನಿ ನಂಬಿ ನಾರಾಯಣನ್
ನಂಬಿ ನಾರಾಯಣ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 13, 2023 | 9:00 PM

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಾಜಿ ವಿಜ್ಞಾನಿ ನಂಬಿ ನಾರಾಯಣನ್ (Nambi Narayanan) ಗುರುವಾರ ಚಂದ್ರಯಾನ-3 (Chandrayaan-3) ಅನ್ನು ಸಂಭಾವ್ಯ ಗೇಮ್ ಚೇಂಜರ್ ಎಂದು ಶ್ಲಾಘಿಸಿದ್ದು,ಇದು ಇಡೀ ಜಗತ್ತಿಗೆ ಸ್ಫೂರ್ತಿಯಾಗಿದೆ ಎಂದು ಹೇಳಿದ್ದಾರೆ. ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನಾಳೆ ಉಡಾವಣೆಯಾಗಲಿದೆ. ಪಿಟಿಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು ಮೂರನೇ ಚಂದ್ರಯಾನ ಪರಿಶೋಧನಾ ಕಾರ್ಯಾಚರಣೆಯು ಚಂದ್ರಯಾನ -2 ನಲ್ಲಿ ಸಂಭವಿಸಿದ ಸಮಸ್ಯೆಗಳನ್ನು ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

‘ಚಂದ್ರಯಾನ-3 ಭಾರತಕ್ಕೆ ಖಂಡಿತವಾಗಿಯೂ ಗೇಮ್ ಚೇಂಜರ್,  ಅದು ಯಶಸ್ವಿಯಾಗಲಿದೆ ಎಂದು ನಾನು ಭಾವಿಸುತ್ತೇನೆ. ಭಾರತ ಇಡೀ ವಿಶ್ವಕ್ಕೆ ಸ್ಪೂರ್ತಿಯಾಗಲಿದೆ. ಉಡಾವಣೆಗಾಗಿ ಕಾಯೋಣ ಮತ್ತು ಉತ್ತಮವಾದುದ್ದಕ್ಕಾಗಿ ಪ್ರಾರ್ಥಿಸೋಣ ಎಂದಿದ್ದಾರೆ ಅವರು. ಯಶಸ್ವಿ ಲ್ಯಾಂಡಿಂಗ್ ಭಾರತವನ್ನು ನಾಲ್ಕನೇ ರಾಷ್ಟ್ರವನ್ನಾಗಿ ಮಾಡುತ್ತದೆ. ಈ ಹಿಂದೆ ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟ ಈ ಸಾಧನೆ ಮಾಡಿತ್ತು. ಬಾಹ್ಯಾಕಾಶ ಕ್ಷೇತ್ರದಲ್ಲಿ ಆರ್ಥಿಕತೆ ಮತ್ತು ಅಭಿವೃದ್ಧಿಯನ್ನು ಹೆಚ್ಚಿಸುವುದರ ಜೊತೆಗೆ, ಇದು 600 ಶತಕೋಟಿ ಡಾಲರ್ ಉದ್ಯಮದಲ್ಲಿ ಪ್ರಸ್ತುತ 2 ಪ್ರತಿಶತದಿಂದ ಭಾರತದ ಪಾಲನ್ನು ಸುಧಾರಿಸುತ್ತದೆ.

ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಖಾಸಗಿ ಪಾಲುದಾರರನ್ನು ಶ್ಲಾಘಿಸಿದ ಏರೋಸ್ಪೇಸ್ ವಿಜ್ಞಾನಿ, ಇದು ಸ್ಟಾರ್ಟಪ್‌ಗಳಿಗೆ ವ್ಯಾಪ್ತಿಯನ್ನು ಹೆಚ್ಚಿಸುವ ಜತೆ ಕ್ಷೇತ್ರವನ್ನು ಪ್ರವೇಶಿಸಲು ಹೆಚ್ಚಿನ ಹಣವನ್ನು ನೀಡುತ್ತದೆ ಎಂದು ಹೇಳಿದರು. “ಅನೇಕ ವಿದೇಶಗಳು ತಮ್ಮ ಸ್ಟಾರ್ಟ್‌ಅಪ್‌ಗಳೊಂದಿಗೆ ಇಲ್ಲಿಗೆ ಇಳಿಯಬಹುದು ಅಥವಾ ಅಸ್ತಿತ್ವದಲ್ಲಿರುವ ಸ್ಟಾರ್ಟ್‌ಅಪ್‌ಗೆ ಸೇರಿಸಬಹುದು” ಎಂದು ನಾರಾಯಣನ್ ಹೇಳಿದ್ದಾರೆ.

ದೇಶ ಉಳಿಯಲು ದೇಶೀಯವಾಗಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನ ಅತ್ಯಗತ್ಯ. ಇತರ ರಾಷ್ಟ್ರಗಳಿಗೆ ಹೋಲಿಸಿದರೆ, ಅಂತಹ ಕಾರ್ಯಾಚರಣೆಗಳಿಗಾಗಿ ನಮ್ಮ ಖರ್ಚು ಅತ್ಯಲ್ಪವಾಗಿದೆ. ಆ ದಿನಾಂಕಗಳಲ್ಲಿ ಲ್ಯಾಂಡಿಂಗ್ ನಡೆಯುವುದರಿಂದ ಮಿಷನ್‌ನ ಯಶಸ್ಸನ್ನು ತಿಳಿಯಲು ನಾವು ಆಗಸ್ಟ್ 23 ಅಥವಾ 24 ರವರೆಗೆ ಕಾಯಬೇಕಾಗಿದೆ ಎಂದು ನಾರಾಯಣನ್ ಹೇಳಿದರು.

ದೊಡ್ಡ ಬಾಹ್ಯಾಕಾಶ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಚೀನಾದೊಂದಿಗೆ ಅಥವಾ ಇಲ್ಲದೆ ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ (ESA) ಯಂತೆಯೇ ಏಷ್ಯನ್ ಬಾಹ್ಯಾಕಾಶ ಸಂಸ್ಥೆ (ASA) ಅನ್ನು ಸ್ಥಾಪಿಸುವ ಅವಶ್ಯಕತೆ ಬಗ್ಗೆಯೂ ಅವರು ಮಾತನಾಡಿದ್ದಾರೆ.

ಇದನ್ನೂ ಓದಿChandrayaan-3 Mission: ಚಂದ್ರಯಾನ-3: ಚಂದ್ರನ ಮೇಲೆ ಇಳಿಯುವುದು ಯಾಕೆ ಅಷ್ಟು ಕಷ್ಟ?

ಚಂದ್ರಯಾನ-2 ಚಂದ್ರನ ಮೇಲೆ ಇಳಿಯುವಲ್ಲಿ ಯಶಸ್ವಿಯಾಯಿತು ಆದರೆ ಸಾಫ್ಟ್‌ವೇರ್ ಮತ್ತು ಯಾಂತ್ರಿಕ ಸಮಸ್ಯೆಗಳಿಂದಾಗಿ ಸಾಫ್ಟ್ ಲ್ಯಾಂಡಿಂಗ್ ಮಾಡಲು ವಿಫಲವಾಗಿದೆ.

ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಲಾಂಚ್ ವೆಹಿಕಲ್ ಮಾರ್ಕ್-3 ರಾಕೆಟ್‌ನಲ್ಲಿ ಉಡಾವಣೆಯಾಗಲಿದೆ. ಉಡಾವಣೆಗೆ ಒಂದು ದಿನ ಮೊದಲು, ಇಸ್ರೋ ವಿಜ್ಞಾನಿಗಳ ತಂಡವು ಚಂದ್ರಯಾನ-3 ರ ಮಾದರಿಯೊಂದಿಗೆ ತಿರುಪತಿ ವೆಂಕಟಾಚಲಪತಿ ದೇವಸ್ಥಾನಕ್ಕೆ ಭೇಟಿ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Thu, 13 July 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ