ಸ್ವಾಗತ ಗೆಳೆಯ..ಚಂದ್ರಯಾನ-2 ಆರ್ಬಿಟರ್​​ ಜತೆ ಸಂಪರ್ಕ ಸಾಧಿಸಿದ ಚಂದ್ರಯಾನ-3 ಲ್ಯಾಂಡರ್

ಈ ಬಗ್ಗೆ ಟ್ವೀಟ್ ಮಾಡಿದ ಇಸ್ರೋ, ಚಂದ್ರನ ದೂರದ ಭಾಗದಲ್ಲಿ ಇಳಿಯಲು ಪ್ರಯತ್ನಿಸುತ್ತಿರುವ ಲ್ಯಾಂಡರ್ ವಿಕ್ರಮ್‌ಗೆ ಆರ್ಬಿಟರ್ ಸ್ವಾಗತ ಸಂದೇಶವನ್ನು ಕಳುಹಿಸಿದೆ. 'ಸ್ವಾಗತ, ಗೆಳೆಯ' Ch-2 ಆರ್ಬಿಟರ್ ಔಪಚಾರಿಕವಾಗಿ Ch-3 LM ಅನ್ನು ಸ್ವಾಗತಿಸಿತು. ಎರಡರ ನಡುವೆ ದ್ವಿಮುಖ ಸಂವಹನವನ್ನು ಸ್ಥಾಪಿಸಲಾಗಿದೆ. MOX ಈಗ LM ಅನ್ನು ತಲುಪಲು ಹೆಚ್ಚಿನ ಮಾರ್ಗಗಳನ್ನು ಹೊಂದಿದೆ ಎಂದು ಬಾಹ್ಯಾಕಾಶ ಸಂಸ್ಥೆ ತನ್ನ ಪೋಸ್ಟ್‌ನಲ್ಲಿ ತಿಳಿಸಿದೆ.

ಸ್ವಾಗತ ಗೆಳೆಯ..ಚಂದ್ರಯಾನ-2 ಆರ್ಬಿಟರ್​​ ಜತೆ ಸಂಪರ್ಕ ಸಾಧಿಸಿದ ಚಂದ್ರಯಾನ-3 ಲ್ಯಾಂಡರ್
ಚಂದ್ರಯಾನ -3
Follow us
|

Updated on: Aug 21, 2023 | 6:57 PM

ಬೆಂಗಳೂರು ಆಗಸ್ಟ್ 21: ಚಂದ್ರಯಾನ-3ರ (Chandrayaan-3) ಲ್ಯಾಂಡರ್ ವಿಕ್ರಮ್ ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸಲು ಕೆಲವೇ ಗಂಟೆ ಬಾಕಿ ಇರುವಾಗ ಇದು ಚಂದ್ರಯಾನ-2 (Chandrayaan-2) ಮಿಷನ್‌ನ ಆರ್ಬಿಟರ್ ಜತೆ ದ್ವಿಮುಖ ಸಂವಹನವನ್ನು ಸ್ಥಾಪಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಹೇಳಿದೆ. ಕಳೆದು ಹೋಗಿದ್ದ ಚಂದ್ರಯಾನ-2 ಮಿಷನ್‌ನ  ಪ್ರದಾನ್ ಎಂಬ ಆರ್ಬಿಟರ್, ಪ್ರಸ್ತುತ ಚಂದ್ರನ ಸುತ್ತ 100 ಕಿಮೀ x 100 ಕಿಮೀ ಕಕ್ಷೆಯಲ್ಲಿದೆ. ಈ ಬಗ್ಗೆ ಟ್ವೀಟ್ ಮಾಡಿದ ಇಸ್ರೋ, ಚಂದ್ರನ ದೂರದ ಭಾಗದಲ್ಲಿ ಇಳಿಯಲು ಪ್ರಯತ್ನಿಸುತ್ತಿರುವ ಲ್ಯಾಂಡರ್ ವಿಕ್ರಮ್‌ಗೆ ಆರ್ಬಿಟರ್ ಸ್ವಾಗತ ಸಂದೇಶವನ್ನು ಕಳುಹಿಸಿದೆ ಎಂದು ಹೇಳಿದೆ.

‘ಸ್ವಾಗತ, ಗೆಳೆಯ’ Ch-2 ಆರ್ಬಿಟರ್ ಔಪಚಾರಿಕವಾಗಿ Ch-3 LM ಅನ್ನು ಸ್ವಾಗತಿಸಿತು. ಎರಡರ ನಡುವೆ ದ್ವಿಮುಖ ಸಂವಹನವನ್ನು ಸ್ಥಾಪಿಸಲಾಗಿದೆ. MOX ಈಗ LM ಅನ್ನು ತಲುಪಲು ಹೆಚ್ಚಿನ ಮಾರ್ಗಗಳನ್ನು ಹೊಂದಿದೆ ಎಂದು ಬಾಹ್ಯಾಕಾಶ ಸಂಸ್ಥೆ ತನ್ನ ಪೋಸ್ಟ್‌ನಲ್ಲಿ ತಿಳಿಸಿದೆ.

ಆಗಸ್ಟ್ 23 ರಂದು (ಬುಧವಾರ) ಸಂಜೆ 5.20 ಕ್ಕೆ ಇಳಿಯುವಿಕೆಯ ನೇರ ಪ್ರಸಾರ ಪ್ರಾರಂಭವಾಗಲಿದೆ ಎಂದು ಅದು ತಿಳಿಸಿದೆ. ಲ್ಯಾಂಡಿಂಗ್ ಗೆ ಮುಂಚಿತವಾಗಿ, ವಿಕ್ರಮ್ ಚಂದ್ರನ ಕುಳಿಗಳ ಚಿತ್ರಗಳನ್ನು ಅನ್ವೇಷಿಸದ ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಮೇಲೆ ಕ್ಲಿಕ್ ಮಾಡಿ ಕಳುಹಿಸಿದೆ

ಕಳೆದ ಶನಿವಾರ ಸೆರೆಹಿಡಿಯಲಾದ ಚಿತ್ರಗಳು ಹೇನ್, ಬಾಸ್ ಎಲ್, ಮೇರ್ ಹಂಬೋಲ್ಟಿಯಾನಮ್ ಮತ್ತು ಬೆಲ್ಕೊವಿಚ್ ಕುಳಿಗಳನ್ನು ಗುರುತಿಸಿವೆ. ಈ ಚಿತ್ರಗಳನ್ನು ಇಸ್ರೋ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಂಚಿಕೊಂಡಿದೆ.

ಇಸ್ರೋ ಮಾಜಿ ಮುಖ್ಯಸ್ಥ ಮತ್ತು ಹಿಂದಿನ ಚಂದ್ರಯಾನ-2 ರ ಉಸ್ತುವಾರಿ ಕೆ ಶಿವನ್ ಸೋಮವಾರ ಈ ಮಿಷನ್ ಅದ್ಭುತ ಯಶಸ್ಸು” ಎಂದು ಹೇಳಿದ್ದಾರೆ. ಇದು ತುಂಬಾ ಆತಂಕದ ಕ್ಷಣವಾಗಿದೆ..ಈ ಬಾರಿ ಅದು ದೊಡ್ಡ ಯಶಸ್ಸನ್ನು ಪಡೆಯುತ್ತದೆ ಎಂದು ನನಗೆ ಖಾತ್ರಿಯಿದೆ ಎಂದು ಎಎನ್ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಶಿವನ್ ಹೇಳಿದ್ದಾರೆ.

ಇದನ್ನೂ ಓದಿ: ಚಂದ್ರಯಾನದ ಬಗ್ಗೆ ವ್ಯಂಗ್ಯವಾಡಿದ ನಟ ಪ್ರಕಾಶ್ ರಾಜ್; ಖಡಕ್ ಆಗಿ ಪ್ರತಿಕ್ರಿಯಿಸಿದ ನೆಟ್ಟಿಗರು

ಲ್ಯಾಂಡಿಂಗ್ ಅನ್ನು ಇಸ್ರೋ ವೆಬ್‌ಸೈಟ್, ಅದರ ಯೂಟ್ಯೂಬ್ ಚಾನೆಲ್, ಫೇಸ್‌ಬುಕ್ ಮತ್ತು ಸಾರ್ವಜನಿಕ ಪ್ರಸಾರಕ ದೂರದರ್ಶನದಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಬಾಹ್ಯಾಕಾಶ ನೌಕೆಯ ಲ್ಯಾಂಡರ್ ಮಾಡ್ಯೂಲ್ ಗುರುವಾರ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಯಶಸ್ವಿಯಾಗಿ ಬೇರ್ಪಟ್ಟಿತು. ಇದಾದ ನಂತರ ನಿರ್ಣಾಯಕ “ಡೀಬೂಸ್ಟಿಂಗ್” ಆಗಿ ಹತ್ತಿರ ಕಕ್ಷೆಗೆ ಇಳಿಯಿತು. ಚಂದ್ರಯಾನ-3 ಮಿಷನ್‌ನ ಲ್ಯಾಂಡರ್‌ಗೆ ವಿಕ್ರಮ್ ಸಾರಾಭಾಯ್ (1919-1971) ಅವರ ಹೆಸರನ್ನು ಇಡಲಾಗಿದೆ. ಅವರು ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಎಂದು ಪರಿಗಣಿಸಲ್ಪಡುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?