AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ-3 ಚಂದ್ರನ ಅಂಗಳದಲ್ಲಿ ಲ್ಯಾಂಡಿಂಗ್ ಕ್ಷಣವನ್ನು ಜಗತ್ತಿಗೆ ತೋರಿಸಲು LIVE ವ್ಯವಸ್ಥೆ: ಯಾವಾಗ, ಎಲ್ಲಿ? ಹೇಗೆ? ಇಲ್ಲಿದೆ ವಿವರ

ಬಹುನಿರೀಕ್ಷಿತ ಭಾರತದ ಚಂದ್ರಯಾನ-3ರ ವಿಕ್ರಮ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಹೊಸ ಚರಿತ್ರೆ ನಿರ್ಮಿಸಲು ಕ್ಷಣಗಣನೆ ಆರಂಭವಾಗಿದೆ. ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಇದ್ದಾರೆ . ಹೀಗಾಗಿ ಇಸ್ರೋ ಆ ಕ್ಷಣವನ್ನು ಇಡೀ ಜಗತ್ತಿಗೆ ತೋರಿಸಲು ಲೈವ್​ ವ್ಯವಸ್ಥೆ ಮಾಡಿದೆ. ಹಾಗಾದ್ರೆ, ಯಾವಾಗ? ಹೇಗೆ? ಎಲ್ಲಿ ನೋಡಬೇಕು ಎನ್ನುವ ವಿವರ ಈ ಕೆಳಗಿನಂತಿದೆ.

ಚಂದ್ರಯಾನ-3 ಚಂದ್ರನ ಅಂಗಳದಲ್ಲಿ ಲ್ಯಾಂಡಿಂಗ್ ಕ್ಷಣವನ್ನು ಜಗತ್ತಿಗೆ ತೋರಿಸಲು LIVE ವ್ಯವಸ್ಥೆ:  ಯಾವಾಗ, ಎಲ್ಲಿ? ಹೇಗೆ? ಇಲ್ಲಿದೆ ವಿವರ
ಚಂದ್ರಯಾನ
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Aug 22, 2023 | 7:21 AM

Share

ಬೆಂಗಳೂರು, (ಆಗಸ್ಟ್ 22): ಭಾರತದ ಮಹತ್ವದ ಯೋಜನೆಯಾದ ಚಂದ್ರಯಾನ 3(Chandrayana 3) ತನ್ನ ಗುರಿಯನ್ನ ಭಾಗಶಃ ತಲುಪಿದೆ. ಚಂದ್ರಯಾನ-3 ಮತ್ತು ಚಂದ್ರಯಾನ-2 ಆರ್ಬಿಟರ್ ಮಧ್ಯೆ ಸಂವಹನ ಕಾರ್ಯ ಜೋಡಿಸುವ ಕೆಲಸ ಯಶಸ್ವಿಯಾಗಿದೆ. ಚಂದ್ರಯಾನ-2 ಆರ್ಬಿಟರ್ ವಾಹನವು ಚಂದ್ರಯಾನ 3 ಸ್ವಾಗತಿಸಿದೆ. ಇಬ್ಬರ ದ್ವಿಮುಖ ಸಂವಹನ ಯಶಸ್ವಿಯಾಗಿ ನಡೆದಿದೆ ಎಂದು ಇಸ್ರೋ ಬಿಗ್ ಅಪ್‌ಡೇಟ್ ಕೊಟ್ಟಿದೆ. ನಾಳೆ(ಆಗಸ್ಟ್ 23) ಚಂದ್ರಯಾನ 3ನ ವಿಕ್ರಮ್ ಲ್ಯಾಂಡರ್‌ ಚಂದ್ರನ ದಕ್ಷಿನ ಧ್ರುವದ ಭಾಗದಲ್ಲಿ ಇಳಿಯಲಿದೆ. ಸರಿಯಾಗಿ ನಾಳೆ ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರ ಮೇಲೆ ಲ್ಯಾಂಡ್ ಆಗಲಿದೆ. ಲ್ಯಾಂಡಿಂಗ್ ಕ್ಷಣವನ್ನ ಇಡೀ ಜಗತ್ತಿಗೆ ತಿಳಿಸಲು ಇಸ್ರೋ ಲೈವ್ ವ್ಯವಸ್ಥೆ ಕೂಡ ಮಾಡಿದೆ. ಈ ಮೂಲಕ ಇತಿಹಾಸ ಬರೆಯಲು ಭಾರತದ ಇಸ್ರೋ ಎಲ್ಲಾ ರೀತಿ ಸಿದ್ಧತೆ ನಡೆಸಿದೆ. ಇದು ಯಶಸ್ವಿಯಾದರೆ ಚಂದ್ರನ ಮೇಲೆ ಲ್ಯಾಂಡರ್‌ ಇಳಿಸಿದ ಜಗತ್ತಿನ ನಾಲ್ಕನೇ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ. ಈಗಾಗಲೇ ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳು ಈ ಕೀರ್ತಿಗೆ ಪಾತ್ರವಾಗಿವೆ.

ಎಲ್ಲಿ ಲೈವ್​ ಇರುತ್ತೆ?

ನಾಳೆ ಚಂದ್ರಯಾನ 3ನ ವಿಕ್ರಮ್ ಲ್ಯಾಂಡರ್‌ ಚಂದ್ರನ ದಕ್ಷಿನ ಧ್ರುವದ ಭಾಗದಲ್ಲಿ ಇಳಿಯುವ ದೃಶ್ಯವನ್ನು ನೀವು ಸಹ ಇದ್ದಲ್ಲೇ ನೋಡಬಹುದು. ಹಾಗಾದ್ರೆ ಎಲ್ಲೆಲ್ಲಿ ಲೈವ್​ ನೋಡಬಹುದು ಎನ್ನುವುದು ಈ ಕೆಳಗಿನಂತಿದೆ ನೋಡಿ.

  • ಇಸ್ರೋ ವೆಬ್​ಸೈಟ್​ : https://isro.gov.in
  •  ಇಸ್ರೋ ಯುಟೂಬ್​ : https://youtube.com/watch?v=DLA_64yz8Ss
  •  ಇಸ್ರೋ ಅಧಿಕೃತ ಫೇಸ್​ಬುಕ್​ನಲ್ಲೂ (https://www.facebook.com/ISRO) ಸಹ ನೀವು ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವುದನ್ನು ಕಣ್ತುಂಬಿಕೊಳ್ಳಬಹುದು.
  • ಲ್ಯಾಂಡರ್​ ಚಂದ್ರನ ಮೇಲೆ ಲ್ಯಾಂಡ್​ ಆಗುವ ಕ್ಷಣ ಕ್ಷಣದ ಮಾಹಿತಿಗಾಗಿ ನಿಮ್ಮ ಟಿವಿ9 ಕನ್ನಡದಲ್ಲೂ ಸಹ  ನೋಡಬಹುದು.

ಇದನ್ನೂ ಓದಿ: ಆಗಸ್ಟ್ 23ರಂದು ಚಂದ್ರಯಾನ-3 ಲ್ಯಾಂಡಿಂಗ್ ಆಗದಿದ್ದರೆ ಆಗಸ್ಟ್ 27ಕ್ಕೆ ಮತ್ತೊಮ್ಮೆ ಪ್ರಯತ್ನ

ಲೋಪವಾಗದಂತೆ ಎಚ್ಚರಿಕೆ

ವಿಜ್ಞಾನಿಗಳಿಗೆ ಕುತೂಹಲ ಕೆರಳಿಸಿರುವ ಚಂದ್ರನ ಭಾಗವೆಂದರೆ ಅದು ದಕ್ಷಿಣ ಧ್ರುವ ಮಾತ್ರ. ಏಕೆಂದರೆ ಚಂದ್ರನ ದಕ್ಷಿಣ ಧ್ರುವ ವಿಸ್ಮಯಗಳ ಖಜಾನೆ ಇದ್ದಂತೆ. ಈ ಭಾಗದಲ್ಲಿ ಉಷ್ಣಾಂಶ ಮೈನಸ್ 230 ಡಿಗ್ರಿಗಿಂತ ಕಡಿಮೆ ಇದೆ. ಬೆಳಕನ್ನೇ ಕಾಣದ ಎಷ್ಟೊಂದು ಪ್ರದೇಶಗಳು ಇಲ್ಲಿವೆ. ಇದೀಗ ಭಾರತ ಕೂಡ ದಕ್ಷಿಣ ಧ್ರುವದಲ್ಲೇ ವಿಕ್ರಮ್ ಲ್ಯಾಂಡರ್ ಇಳಿಸಲು ತೀರ್ಮಾನಿಸಿದೆ.. ಕಳೆದ ಬಾರಿ ಚಂದ್ರಯಾನ2ನಲ್ಲಿ ಚಂದ್ರನ ಮೇಲೆ ಲ್ಯಾಂಡರ್ ಇಳಿಸುವಾಗ ಸ್ವಲ್ಪ ಎಡವಟ್ಟಾಗಿತ್ತು. ಇದೇ ಕಾರಣಕ್ಕೆ ಈ ಬಾರಿ ಎಚ್ಚರಿಕೆ ವಹಿಸಲಾಗಿದೆ. ಲ್ಯಾಂಡರ್ ಇಳಿಸುವ ಪ್ರತಿಕ್ಷಣ ಇಸ್ರೋಗೆ ಗೊತ್ತಾಗಲಿದೆ. ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ ವಿಕ್ರಮ್‌ಗೆ ಸರಿಯಾದ ಲ್ಯಾಂಡಿಂಗ್ ಸ್ಥಳ ತೋರಿಸುತ್ತೆ. ಹಾಗೂ ಲ್ಯಾಂಡರ್‌ನ ಅಪಾಯ ಪತ್ತೆ ಮತ್ತು ಅಪಾಯ ತಪ್ಪಿಸುವ ಕ್ಯಾಮರಾ ಕೂಡ ಇದರಲ್ಲಿದೆ. ಜೊತೆಗೆ ಲೇಸರ್ ಆಲ್ಟಿಮೀಟರ್ (LASA), ಲೇಸರ್ ಡಾಪ್ಲರ್ ವೆಲಾಸಿಟಿಮೀಟರ್ (LDV) & ಲ್ಯಾಂಡರ್ ಹಾರಿಜಾಂಟಲ್ ವೆಲಾಸಿಟಿ ಕ್ಯಾಮೆರಾ (LHVC) ಈ ಪೇಲೋಡ್‌ ಒಟ್ಟಿಗೆ ಕೆಲಸ ಮಾಡುತ್ತದೆ.

ಲ್ಯಾಂಡಿಂಗ್‌ಗೂ ಮುನ್ನವೇ ಚಂದ್ರನ ಸನಿಹದ ಫೋಟೋ ರವಾನೆ

ಚಂದ್ರಯಾನ-3 ಗಗನನೌಕೆಯು ಚಂದ್ರನ ಸನಿಹದಿಂದ ಫೋಟೋಗಳನ್ನು ಕ್ಲಿಕ್ಕಿಸಿದೆ. ವಿಕ್ರಮ್ ಲ್ಯಾಂಡರ್ ಕ್ಲಿಕ್ಕಿಸಿದ ಈ ಫೋಟೋಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಭೂಮಿಗೆ ಕಾಣಿಸದ ಚಂದ್ರನ ಮತ್ತೊಂದು ಮುಖ ಕಾಣಿಸಿದೆ. ಚಂದ್ರನ ಮಗ್ಗಲಿನಲ್ಲಿ ಸಾಕಷ್ಟು ಕುಳಿಗಳು ಇರುವುದು ಫೋಟೋದಲ್ಲಿ ಕಂಡು ಬಂದಿದೆ. ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಆಂಡ್‌ ಅವಾಯಿಡೆನ್ಸ್ ಕ್ಯಾಮೆರಾ ಮೂಲಕ ಈ ಚಿತ್ರಗಳನ್ನು ಸೆರೆಹಿಡಿಯಲಾಗಿದೆ.

ಒಟ್ಟಾರೆ ಭಾರತ ಮಾತ್ರವಲ್ಲ ಇಡೀ ಜಗತ್ತನ್ನೇ ಚಂದ್ರಯಾನ 3ವಿಕ್ರಮ್ ಲ್ಯಾಂಡರ್‌ ಚಂದ್ರನ ಮೇಲೆ ಇಳಿಯುವುದನ್ನು ಕಣ್ಣರಳಿಸಿ ಕಾಯುತ್ತಿದೆ.

ಇನ್ನಷ್ಟು ಕ್ಷಣ ಕ್ಷಣದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:15 am, Tue, 22 August 23

ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
VIDEO: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಹಾವು... ಆಮೇಲೇನಾಯ್ತು?
VIDEO: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಹಾವು... ಆಮೇಲೇನಾಯ್ತು?
ಡಿಕೆಶಿ ಸಿಎಂ ಆಗಬೇಕು ಎಂಬ ಆಸೆ ಇದೆ, ಆದರೆ: ರಂಗನಾಥ್ ಹೇಳಿದ್ದೇನು ನೋಡಿ
ಡಿಕೆಶಿ ಸಿಎಂ ಆಗಬೇಕು ಎಂಬ ಆಸೆ ಇದೆ, ಆದರೆ: ರಂಗನಾಥ್ ಹೇಳಿದ್ದೇನು ನೋಡಿ