AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan-3 Mission Launch: ಇಂದು ಚಂದ್ರಯಾನ-3 ಉಡಾವಣೆ, ಚಂದ್ರನ ಅಂಗಳದಲ್ಲಿ ಭಾರತ ಹೆಜ್ಜೆಗೆ ಕ್ಷಣಗಣನೆ

ಇಂದು ಚಂದ್ರಯಾನ 3 ಶ್ರೀಹರಿಕೋದಿಂದ ರಾಕೆಟ್ ಉಡಾವಣೆಗೊಳ್ಳಲಿದ್ದು, ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಭಾರತೀಯರು ಕಾತರದಿಂದ ಕಾಯುತ್ತಿದ್ದಾರೆ.

Chandrayaan-3 Mission Launch: ಇಂದು ಚಂದ್ರಯಾನ-3 ಉಡಾವಣೆ, ಚಂದ್ರನ ಅಂಗಳದಲ್ಲಿ ಭಾರತ ಹೆಜ್ಜೆಗೆ ಕ್ಷಣಗಣನೆ
ಪ್ರಾತಿನಿಧಿಕ ಚಿತ್ರ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ರಮೇಶ್ ಬಿ. ಜವಳಗೇರಾ

Updated on:Jul 14, 2023 | 6:27 AM

 ಚಂದ್ರಯಾ-3 ಉಡಾವಣೆಗೆ (Chandrayaan-3 Mission Launch)ಇಡೀ ಜಗತ್ತು ಕಾತರದಿಂದ ಕಾಯುತ್ತಿದೆ. ಇಸ್ರೋದ ಚಂದ್ರಯಾನ-3 ನೌಕೆ  ಇಂದು(ಜುಲೈ 14) ನಭಕ್ಕೆ ಚಿಮ್ಮಲಿದೆ. ಚಂದ್ರನ ಕಕ್ಷೆಯನ್ನ ಲ್ಯಾಂಡರ್ ಸೇರಲಿದೆ. ಲ್ಯಾಂಡರ್‌ ರೋವರ್‌ಗಳನ್ನು ಹೊತ್ತುಕೊಂಡು ಎಲ್‌ವಿಎಂ-3 ರಾಕೆಟ್‌ ಶ್ರೀಹರಿಕೋಟಾದ ಉಡಾವಣಾ ಪ್ಯಾಡ್‌ನ ಮೇಲೆ ನಿಂತಿದೆ.  ಇಂದು ಮಧ್ಯಾಹ್ನ 2:35ಕ್ಕೆ ಶ್ರೀಹರಿಕೋಟಾದಿಂದ ರಾಕೆಟ್ ಉಡಾವಣೆ ಆಗಲಿದೆ. ಈ ಐತಿಹಾಸಿಕ ಕ್ಷಣವನ್ನ ಕಣ್ತುಂಬಿಕೊಳ್ಳಲು ಭಾರತೀಯರು ಕಾತರದಿಂದ ಕಾಯುತ್ತಿದ್ದಾರೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಲಾಂಚ್ ವೆಹಿಕಲ್ ಮಾರ್ಕ್-111 ಮೂಲಕ ಉಡಾವಣೆ ಮಾಡಲು ತಯಾರಿ ಪೂರ್ಣಗೊಂಡಿದೆ.
ಅಂದಹಾಗೇ 2008ರಲ್ಲಿ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ 1 ನಭಕ್ಕೆ ಚಿಮ್ಮಿತ್ತು. ನೌಕೆಯು 2008ರ ನ.8ರಂದು ಚಂದ್ರನನ್ನ ಚುಂಬಿಸಿತ್ತು. ಚಂದ್ರನಲ್ಲಿ ನೀರು ಪತ್ತೆ ಹಚ್ಚಿದ ಖ್ಯಾತಿಯೂ  ಆ ನೌಕೆಯ ಪಾಲಾಗಿತ್ತು. ಅದೇ ಉತ್ಸಾಹದಲ್ಲಿದ್ದ ಭಾರತೀಯ ವಿಜ್ಞಾನಿಗಳು ಮತ್ತೊಂದು ಚಮತ್ಕಾರಕ್ಕೆ ಕೈ ಹಾಕಿದ್ದರು. 2019ರಲ್ಲಿ ಚಂದ್ರಯಾನ 2 ಹೆಸರಿನಲ್ಲಿ ಮತ್ತೊಂದು ಪ್ರಯೋಗ ಮಾಡಲಾಯ್ತು. ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಬೇಕಿದ್ದ ‘ಚಂದ್ರಯಾನ-2’ರ ವಿಕ್ರಮ್‌ ಲ್ಯಾಂಡರ್‌ ಸಾಫ್ಟ್‌ ಲ್ಯಾಂಡಿಂಗ್‌ ಸಾಧ್ಯವಾಗದೇ ಅಪ್ಪಳಿಸಿ, ವೈಫಲ್ಯ ಕಂಡಿತ್ತು.
ಚಂದ್ರಯಾನ‌-2 ವೈಫಲ್ಯ ಕಂಡ್ರೂ ಧೃತಿಗೆಡದ ಭಾರತೀಯ ವಿಜ್ಞಾನಿಗಳು ಮರಳಿ ಯತ್ನ ಮಾಡುತ್ತಿದ್ದಾರೆ. ಚಂದ್ರಯಾನ 2 ನಿಂದಾದ ಅಪೂರ್ಣ ಕೆಲಸವನ್ನ ಪೂರ್ಣಗೊಳಿಸಲು, ಈಗ 4 ವರ್ಷಗಳ ಬಳಿಕ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನವು ತನ್ನ ಮೂರನೇ ದಂಡಯಾತ್ರೆಯಲ್ಲಿ ಚಂದ್ರನ ಕಡೆಗೆ ಹಾರಲು ಸಿದ್ಧವಾಗಿದೆ. ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಮಾದರಿ ಜೊತೆ ಇಸ್ರೋ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿವೆ. ಚಂದ್ರನ ಮೇಲೆ ಸಾಫ್ಟ್‌ ಲ್ಯಾಂಡಿಂಗ್‌ ಯಶಸ್ವಿಯಾದ್ರೆ ಅಮೆರಿಕ, ರಷ್ಯಾ, ಚೀನಾ ನಂತರ ಭಾರತ 4ನೇ ರಾಷ್ಟ್ರ ಆಗಲಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:27 am, Fri, 14 July 23

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು