AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಚಂದ್ರಯಾನ-3 ಉಡಾವಣೆ 4 ಸೆಕೆಂಡು ವಿಳಂಬವಾಗಿತ್ತು, ಸ್ವಲ್ಪ ಮೈಮರೆತಿದ್ರೂ ಭಾರತ ಈ ಸಾಧನೆ ಮಾಡುತ್ತಿರಲಿಲ್ಲ

ಭಾರತ ಚಂದ್ರನ ಭಾಗವನ್ನು ಸಂಶೋಧನೆ ಮಾಡುವ ಭಾಗವಾಗಿ ಚಂದ್ರಯಾನ-3ಯನ್ನು ಜುಲೈ 14, 2023 ರಂದು ಉಡಾವಣೆ ಮಾಡಲು ನಿರ್ಧರಿಸಲಾಗಿತ್ತು. ಈ ಪ್ರಕಾರವೇ ಉಡಾವಣೆ ಮಾಡಲಾಗಿದೆ. ಆದರೆ ಇದಕ್ಕೂ ಮುನ್ನ ಇಸ್ರೋ ಇದರಲ್ಲಿ ಕಂಡು ಬಂದ ಸಮಸ್ಯೆಯನ್ನು ಪತ್ತೆ ಮಾಡಿದ್ದಾರೆ. ಒಂದು ವೇಳೆ ವಿಜ್ಞಾನಿಗಳು ಸ್ವಲ್ಪ ಮೈಮರೆತಿದ್ರೂ ಭಾರತ ಈ ಸಾಧನೆ ಮಾಡುತ್ತಿರಲಿಲ್ಲ, ಆ ಸಮಸ್ಯೆ ಯಾವುದು, ಇದೀಗ ಈ ಬಗ್ಗೆ ಭಾರೀ ಚರ್ಚೆಯಾಗಿತ್ತು.

ಅಂದು ಚಂದ್ರಯಾನ-3 ಉಡಾವಣೆ 4 ಸೆಕೆಂಡು ವಿಳಂಬವಾಗಿತ್ತು, ಸ್ವಲ್ಪ ಮೈಮರೆತಿದ್ರೂ ಭಾರತ ಈ ಸಾಧನೆ ಮಾಡುತ್ತಿರಲಿಲ್ಲ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 30, 2024 | 1:02 PM

ಭಾರತಕ್ಕೆ ಜುಲೈ 14, 2023 ಒಂದು ಐತಿಹಾಸಿಕ ದಿನ, ಅದನ್ನು ಯಾವ ಭಾರತೀಯರು ಮರೆಯುವಂತಿಲ್ಲ. ಇಡೀ ವಿಶ್ವವೇ ಭಾರತವನ್ನು ಕೊಂಡಾಡಿದ ಕ್ಷಣ, ಶುತ್ರ ರಾಷ್ಟ್ರಗಳು ಕೂಡ ಭಾರತವನ್ನು ಪ್ರಶಂಸಿದ ದಿನ ಅದು. ಭಾರತದ ವಿಜ್ಞಾನಿಗಳ ಪರಿಶ್ರಮದಿಂದ ಜುಲೈ 14, 2023ರಂದು ಇಸ್ರೋ (ISRO) ಬಾಹ್ಯಕಾಶ ಕೇಂದ್ರದಿಂದ ಚಂದ್ರಯಾನ -3 (Chandrayaan 3) ಉಡಾವಣೆಗೊಳಿಸಲಾಗಿತ್ತು. ಇಂದಿಗೂ, ಮುಂದಿಗೂ ಈ ದಿನವನ್ನು ಮರೆಯುವಂತಿಲ್ಲ. ಆದರೆ ಇದರ ನಡುವೆ ಈ ಸಾಧನೆಗೆ ಅಂದು ಒಂದು ಕಂಟಕ ಎದುರಾಗಿತ್ತು. ಈ ಸಮಸ್ಯೆಯನ್ನು ಸೂಕ್ತ ಸಮಯದಲ್ಲಿ ನಿಭಾಯಿಸಿತ್ತು ಇಸ್ರೋ, ಅಂದು ಉಡಾವಣೆ ಸಮಯ 4 ಸೆಕೆಂಡ್​​​ ತಡವಾಗಿತ್ತು. ಏಕೆಂದರೆ ಚಂದ್ರಯಾನ -3 ಮಿಷನ್​​​ನಲ್ಲಿ ಒಂದು ಸಮಸ್ಯೆ ಕಂಡು ಬಂದಿತ್ತು. ಬಾಹ್ಯಾಕಾಶ ಅವಶೇಷಗಳ ನಡುವೆ ಘರ್ಷಣೆ ನಡೆಯುವ ಸಾಧ್ಯತೆ ಇತ್ತು. ಈ ದೊಡ್ಡ ಅನಾಹುತವನ್ನು ಇಸ್ರೋ ವಿಜ್ಞಾನಿಗಳು ತಪ್ಪಿಸಿದ್ದಾರೆ.

ಭಾರತ ಚಂದ್ರನ ಭಾಗವನ್ನು ಸಂಶೋಧನೆ ಮಾಡುವ ಭಾಗವಾಗಿ ಚಂದ್ರಯಾನ-3ಯನ್ನು ಜುಲೈ 14, 2023 ರಂದು ಉಡಾವಣೆ ಮಾಡಲು ನಿರ್ಧರಿಸಲಾಗಿತ್ತು. ಈ ಪ್ರಕಾರವೇ ಉಡಾವಣೆ ಮಾಡಲಾಗಿದೆ. ಆದರೆ ಇದಕ್ಕೂ ಮುನ್ನ ಇಸ್ರೋ ಇದರಲ್ಲಿ ಕಂಡು ಬಂದ ಸಮಸ್ಯೆಯನ್ನು ಪತ್ತೆ ಮಾಡಿದ್ದಾರೆ. ಬಾಹ್ಯಾಕಾಶ ಅವಶೇಷಗಳು ಮತ್ತು ಬಾಹ್ಯಾಕಾಶಕ್ಕೆ ವೇಗವಾಗಿ ಚಲಿಸುವ ಮಿಷನ್​​​ಗಳಲ್ಲಿ ಅಪಾಯವನ್ನುಂಟು ಮಾಡಿತ್ತು. ಇದನ್ನು ಪತ್ತೆ ಮಾಡಿ, ಸರಿ ಮಾಡಲು ಇಸ್ರೋ ವಿಜ್ಞಾನಿಗಳು ನಾಲ್ಕು ಸೆಕೆಂಡು ತೆಗೆದುಕೊಂಡಿದರು. ಅದಕ್ಕಾಗಿ ಉಡಾವಣೆ ತಡವಾಗಿದೆ ಎಂದು ಇಸ್ರೋ ತನ್ನ ವರದಿಯಲ್ಲಿ ಹೇಳಿದೆ.

ಈ ಸಮಸ್ಯೆಯನ್ನು ಪತ್ತೆ ಮಾಡಿದ ನಂತರ ಅದನ್ನು ಸರಿ ಮಾಡಲಾಗಿತ್ತು. ಆ ನಂತರವೇ ಇದನ್ನು ಉಡಾವಣೆ ಮಾಡಬಹುದು ಎಂಬ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿತ್ತು. ಬಾಹ್ಯಾಕಾಶದಲ್ಲಿ ಕಂಡು ಬಂದ ದೊಡ್ಡ ಸಮಸ್ಯೆ ಎಂದರೆ, ಶಿಲಾಖಂಡರಾಶಿಗಳು ಚಂದ್ರಯಾನ -3 ಮಿಷನ್​​ಗೆ ಒತ್ತಡವನ್ನು ಉಂಟು ಮಾಡಿತ್ತು. ಆದರೆ ಈ ಸವಾಲುಗಳನ್ನು ಎದುರಿಸಲು ಇಸ್ರೋ, ಚಂದ್ರಯಾನ-3 ಮಿಷನ್​​​ನ್ನು ತಯಾರಿ ಮಾಡಿಕೊಂಡಿತ್ತು ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಸೂಪರ್​​​ ಪವರ್​​ ಆಗುತ್ತಿದೆ, ನಾವು ಭಿಕ್ಷೆ ಬೇಡುತ್ತಿದ್ದೇವೆ, ಸಂಸತ್ತಿನಲ್ಲಿ ಗುಡುಗಿದ ಪಾಕ್​​​ ನಾಯಕ

ಇಸ್ರೋ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿರುವ ಪ್ರಕಾರ, ಉಪಗ್ರಹಗಳನ್ನು 23 ಘರ್ಷಣೆಗಳಿಂದ ರಕ್ಷಣೆ ಮಾಡಲು ಹೊಸ ತಂತ್ರಗಳನ್ನು ರೂಪಿಸಿತ್ತು. ಚಂದ್ರಯಾನ-3 ಮತ್ತು ಆದಿತ್ಯ-L1 ನಂತಹ ಉನ್ನತ-ಪ್ರೊಫೈಲ್ ಮಿಷನ್‌ಗಳು ಬಾಹ್ಯಾಕಾಶದಲ್ಲಿದ್ದಾಗ ಯಾವುದೇ ರೀತಿಯ ಇತರ ರಕ್ಷಣಾ ಮಿಷನ್​​​ಗಳ ಅವಶ್ಯಕತೆ ಇರಲಿಲ್ಲ ಎಂದು ಹೇಳಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:43 pm, Tue, 30 April 24

ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ