AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan 3: ನಿಯಂತ್ರಣ ಕಳೆದುಕೊಂಡು ಮತ್ತೆ ಭೂಮಿಗೆ ಮರಳಿದ ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಒಂದು ಭಾಗ

ಚಂದ್ರಯಾನ-3 ಮಿಷನ್‌ನ ಯಶಸ್ಸಿನ ಕುರಿತು ದೇಶದ ಜನತೆಗೆ ಹೆಮ್ಮೆ ಇದೆ. ಚಂದ್ರಯಾನ 3 ಬಾಹ್ಯಾಕಾಶ ನೌಕೆಯಯನ್ನು ಯಶಸ್ವಿಯಾಗಿ ನಿಗದಿತ ಕಕ್ಷೆಯಲ್ಲಿ ಇರಿಸಿದ್ದ ಎಲ್​ವಿಎಂ ಎಂ4 ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಭಾಗವು ಅನಿಯಂತ್ರಿತವಾಗಿ ಭೂಮಿಯ ಕಡೆ ಮರಳಿದೆ. ಈ ಕುರಿತು ಇಸ್ರೋ ಮಾಹಿತಿ ನೀಡಿದೆ.

Chandrayaan 3: ನಿಯಂತ್ರಣ ಕಳೆದುಕೊಂಡು ಮತ್ತೆ ಭೂಮಿಗೆ ಮರಳಿದ ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಒಂದು ಭಾಗ
ಚಂದ್ರಯಾನ
Follow us
ನಯನಾ ರಾಜೀವ್
|

Updated on: Nov 16, 2023 | 9:42 AM

ಚಂದ್ರಯಾನ-3(Chandrayaan 3) ಮಿಷನ್‌ನ ಯಶಸ್ಸಿನ ಕುರಿತು ದೇಶದ ಜನತೆಗೆ ಹೆಮ್ಮೆ ಇದೆ. ಚಂದ್ರಯಾನ 3 ಬಾಹ್ಯಾಕಾಶ ನೌಕೆಯಯನ್ನು ಯಶಸ್ವಿಯಾಗಿ ನಿಗದಿತ ಕಕ್ಷೆಯಲ್ಲಿ ಇರಿಸಿದ್ದ ಎಲ್​ವಿಎಂ ಎಂ4 ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಭಾಗವು ಅನಿಯಂತ್ರಿತವಾಗಿ ಭೂಮಿಯ ಕಡೆ ಮರಳಿದೆ. ಈ ಕುರಿತು ಇಸ್ರೋ ಮಾಹಿತಿ ನೀಡಿದೆ.

ಸೆಪ್ಟೆಂಬರ್​ನಲ್ಲಿ ಸ್ಲೀಪ್​ ಮೋಡ್​ಗೆ ಹೋಗಿದ್ದ ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಗ್ಯಾನ್ ಇನ್ನೂ ಆಕ್ಟೀವ್ ಆಗಿಲ್ಲ. ಈ ರಾಕೆಟ್​ನ ಭಾಗವು ಉತ್ತರ ಪೆಸಿಫಿಕ್ ಮಹಾಸಾಗಾರದ ಮೇಲೆ ಬೀಳಬಹುದು ಎನ್ನಲಾಗಿದೆ.

ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಚಂದ್ರಯಾನ 3 ಉಡಾವಣೆಯಾಗಿತ್ತು, ಆಗಸ್ಟ್ 23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯಿತು. ಭಾರತವು ಚಂದ್ರನನ್ನು ತಲುಪಿದ ವಿಶ್ವದ ನಾಲ್ಕನೇ ದೇಶ ಮತ್ತು ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶವಾಗಿದೆ.

ಇಳಿದ ನಂತರ ಸುಮಾರು 14 ದಿನಗಳಲ್ಲಿ ಅನೇಕ ಪ್ರಮುಖ ಮಾಹಿತಿಯನ್ನು ಸಂಗ್ರಹಿಸಲಾಯಿತು. ಸೆಪ್ಟೆಂಬರ್ 2ರಂದು ಸ್ಲೀಪ್​ ಮೋಡ್​ಗೆ ಹೋದ ವಿಕ್ರಮ್ ಲ್ಯಾಂಡರ್ ಇನ್ನೂ ದೀರ್ಘ ನಿದ್ರೆಯಲ್ಲಿದೆ, ಇಸ್ರೋ ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದರೂ, ಲ್ಯಾಂಡರ್ ಮತ್ತು ರೋವರ್​ ಅನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ.

ಮತ್ತಷ್ಟು ಓದಿ: ಆಗಸ್ಟ್ 23 ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ವೆಂದು ಘೋಷಿಸಿದ ಕೇಂದ್ರ ಸರ್ಕಾರ

ಚಂದ್ರಯಾನ 3 ಯೋಜನೆಯ ಒಟ್ಟು ವೆಚ್ಚ ರೂ.615 ಕೋಟಿ ಎಂದು ಅಂದಾಜಿಸಲಾಗಿದೆ. ಇಸ್ರೊ ಮಾಜಿ ಅಧ್ಯಕ್ಷ ಕೆ ಶಿವನ್ ಈ ವೆಚ್ಚವನ್ನು ಅಂದಾಜಿಸಿದ್ದರು. ಡಿಸೆಂಬರ್ 2019ರಲ್ಲಿ ಇಸ್ರೊ 75 ಕೋಟಿ ರೂಗಳನ್ನು ಆರಂಭಿಕವಾಗಿಯೇ ವಿನಂತಿಸಿತ್ತು. ಸುಮಾರು 60 ಕೋಟಿಗೂ ಹೆಚ್ಚು ಕೇವಲ ಯಂತ್ರೋಪಕರಣಗಳು, ಉಪಕರಣಗಳಿಗೆ ವೆಚ್ಚವಾಗಿದೆ ಎನ್ನಲಾಗಿದೆ.

ನೌಕೆಯು ಪೇಲೋಡ್‌ಗಳನ್ನು ಹೊಂದಿದ್ದು, ಇದು ಚಂದ್ರನ ಮೇಲ್ಮೈ ಪ್ಲಾಸ್ಮಾ ಆಯಾನುಗಳು ಮತ್ತು ಇಲೆಕ್ಟ್ರಾನ್‌ಗಳ ಸಾಂದ್ರತೆ, ಅದರ ಬದಲಾವಣೆಗಳನ್ನು ಅಳೆಯಲು ನೆರವಾಗುತ್ತದೆ.

ಭೌತಿಕ ಪ್ರಯೋಗಗಳು, ಅಧ್ಯಯನಗಳು, ಅಲ್ಲಿನ ಧ್ರುವ ಪ್ರದೇಶದ ಬಳಿ ಚಂದ್ರನ ಮೇಲ್ಮೈಯ ಉಷ್ಣ ಗುಣಲಕ್ಷಣಗಳ ಮಾಪನ, ಚಂದ್ರನ ಭೂಕಂಪನ ಚಟುವಟಿಕೆ, ಅಲ್ಲಿನ ಖನಿಜ ಸಂಯೋಜನೆ, ಹೊರಪದರ ರಚನೆ, ಮಣ್ಣು, ಬಂಡೆಗಳು, ರಸಾಯನಿಕ ಗುಣಗಳು, ಇತರೆ ಹಲವು ಅಂಶಗಳ ಅಧ್ಯಯನವನ್ನು ಚಂದ್ರಯಾನ ನಡೆಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ