AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan-3 Mission: ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದ ಚಂದ್ರಯಾನ-3

ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜುಲೈ 14ರಂದು ಚಂದ್ರಯಾನ-3 ನೌಕೆ ಉಡ್ಡಯನ ಮಾಡಲಾಗಿತ್ತು. ಇದೀಗ ನೌಕೆಯು ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ ಎಂದು ಇಸ್ರೋ ತಿಳಿಸಿದೆ.

Chandrayaan-3 Mission: ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದ ಚಂದ್ರಯಾನ-3
ಚಂದ್ರಯಾನ-3
Rakesh Nayak Manchi
|

Updated on:Aug 05, 2023 | 9:08 PM

Share

ನವದೆಹಲಿ, ಆಗಸ್ಟ್ 5: ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ (ISRO) ಮಹತ್ವಾಕಾಂಕ್ಷಿ ಚಂದ್ರಯಾನ-3 (Chandrayaan-3) ನೌಕೆ ಇಂದು (ಆಗಸ್ಟ್ 5) ಸಂಜೆ 7.15ಕ್ಕೆ ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ. ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ನೌಕೆಯನ್ನು ಉಡ್ಡಯನ ಮಾಡಲಾಗಿತ್ತು.

ಈ ವಾರದ ಆರಂಭದಲ್ಲಿ ಭೂಮಿಯಿಂದ ನಿರ್ಗಮಿಸಿದ ನಂತರ, ಚಂದ್ರಯಾನ-3 ಚಂದ್ರನ ಪ್ರಭಾವದ ಗೋಳವನ್ನು ಪ್ರವೇಶಿಸಿತ್ತು. ನಂತರ ಸುರಕ್ಷಿತವಾಗಿ ಚಂದ್ರನ ಸುತ್ತ ಸುತ್ತುತ್ತಿದೆ ಎಂದು ಇಸ್ರೋ ಖಚಿತಪಡಿಸಿತ್ತು. ನಿರೀಕ್ಷಿಸಿದಂತೆ, ಚಂದ್ರಯಾನ-3 ಈಗ ದೀರ್ಘವೃತ್ತದ ಮಾರ್ಗವನ್ನು ಅನುಸರಿಸುತ್ತಿದೆ, ಭೂಮಿಗೆ ಅದರ ಹತ್ತಿರದ ಬಿಂದು (ಪೆರಿಜಿ) ಮತ್ತು ಅತ್ಯಂತ ದೂರದ ಬಿಂದು (ಅಪೋಜಿ) ನಡುವೆ ಚಲಿಸುತ್ತಿದೆ ಎಂದು ಇಸ್ರೋ ಈ ಹಿಂದೆ ತಿಳಿಸಿತ್ತು.

ಇದನ್ನೂ ಓದಿ: ಹೆಚ್ಚಿನ ಭೂ ವೀಕ್ಷಣೆಗಾಗಿ ಡಿಎಸ್-ಎಸ್ಎಆರ್ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಒಯ್ಯಲಿದೆ ಪಿಎಸ್ಎಲ್‌ವಿ-ಸಿ56 ಯೋಜನೆ

ಚಂದ್ರಯಾನ 3, ಚಂದ್ರಯಾನ 2 ರಂತೆ ಯಾವುದೇ ಆರ್ಬಿಟರ್ ಹೊಂದಿಲ್ಲ. ಒಂದು ಲ್ಯಾಂಡರ್ ಮತ್ತು ಒಂದು ರೋವರ್ ಅನ್ನು ಹೊಂದಿದೆ. ಇವೆರಡು ಚಂದ್ರನ ಮೇಲ್ಮೈಯಲ್ಲಿ ಒಂದು ಲೂನಾರ್ ದಿನ (ಚಂದ್ರನ ದಿನ) ಅಂದರೆ, ಭೂಮಿಯ ಲೆಕ್ಕಾಚಾರದಲ್ಲಿ 14 ದಿನಗಳು ಕಾರ್ಯಾಚರಿಸಲಿವೆ. ಒಂದು ಬಾರಿ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಬಳಿಕ, ರೋವರ್ ಅದರಿಂದ ಬಿಡುಗಡೆಯಾಗಿ ಚಂದ್ರನ ಮೇಲ್ಮೈಯನ್ನು ಅನ್ವೇಷಿಸಿ, ಪ್ರಯೋಗಗಳನ್ನು ನಡೆಸಿ, ಮಾಹಿತಿ ಕಲೆಹಾಕಲಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Sat, 5 August 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?