AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan 3: 2022ರ ಆಗಸ್ಟ್​ ವೇಳೆಗೆ ಇಸ್ರೋದಿಂದ ಚಂದ್ರಯಾನ-3 ಉಡಾವಣೆ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ

ISRO Chandrayaan-3 | ಚಂದ್ರಯಾನ-3 ಗಗನಯಾನಕ್ಕೆ 2022ರ ಮೂರನೇ ತ್ರೈಮಾಸಿಕದ ವೇಳೆಗೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇಂದು ಹೇಳಿದ್ದಾರೆ.

Chandrayaan 3: 2022ರ ಆಗಸ್ಟ್​ ವೇಳೆಗೆ ಇಸ್ರೋದಿಂದ ಚಂದ್ರಯಾನ-3 ಉಡಾವಣೆ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ
ಚಂದ್ರಯಾನ
TV9 Web
| Edited By: |

Updated on:Jul 28, 2021 | 5:09 PM

Share

ನವದೆಹಲಿ: ಕೋವಿಡ್ ಅಟ್ಟಹಾಸದಿಂದ ಮುಂದೂಡಲ್ಪಟ್ಟಿದ್ದ ಚಂದ್ರಯಾನ-3 ಮಿಷನ್​ಗೆ 2022ರ ಅಂತ್ಯದ ವೇಳೆಗೆ ಇಸ್ರೋ (ISRO) ಚಾಲನೆ ನೀಡುವ ಸಾಧ್ಯತೆಯಿದೆ. ಎಲ್ಲ ಸರಿಯಾಗಿದ್ದರೆ 2021ರ ಡಿಸೆಂಬರ್​ನಲ್ಲಿ ಇಸ್ರೋದ ಬಹುನಿರೀಕ್ಷಿತ ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನ ಉಡಾವಣೆಗೊಳ್ಳಬೇಕಿತ್ತು. ಆದರೆ, ಕೊರೋನಾದಿಂದಾಗಿ ಆ ಯೋಜನೆ ಮುಂದೂಡಲ್ಪಟ್ಟಿದ್ದು, 2022ರ ಜುಲೈ-ಆಗಸ್ಟ್​ ಒಳಗೆ ಚಂದ್ರಯಾನ-3 ಚಾಲನೆಗೊಳ್ಳಲಿದೆ.

ಚಂದ್ರಯಾನ-3 ಗಗನಯಾನಕ್ಕೆ 2022ರ ಮೂರನೇ ತ್ರೈಮಾಸಿಕದ ವೇಳೆಗೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇಂದು ಹೇಳಿದ್ದಾರೆ. ಇಂದು ಲೋಕಸಭಾ ಕಲಾಪದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಜಿತೇಂದ್ರ ಸಿಂಗ್, ಕೊರೋನಾದಿಂದಾಗಿ ಚಂದ್ರಯಾನ-3ರ ಯೋಜನೆ ಮುಂದೂಡಲ್ಪಟ್ಟಿದೆ. ಅದಕ್ಕಾಗಿ ಇಸ್ರೋದ ವಿಜ್ಞಾನಿಗಳು ಈಗಾಗಲೇ ಸಿದ್ಧತೆ ನಡೆಸಿದ್ದಾರೆ. ಮುಂದಿನ ವರ್ಷ ಆಗಸ್ಟ್​ ವೇಳೆಗೆ ಚಂದ್ರಯಾನ-3 ಉಡಾವಣೆಯಾಗಲಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಚಂದ್ರನ ಮೇಲ್ಭಾಗದಲ್ಲಿ ಲ್ಯಾಂಡರ್ ಅನ್ನು ಇಳಿಸುವ ಇಸ್ರೋದ ಚಂದ್ರಯಾನ-2ಗೆ 2019ರ ಜುಲೈ ತಿಂಗಳಲ್ಲಿ ಚಾಲನೆ ನೀಡಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಇಸ್ರೋದ ಪ್ರಯತ್ನ ವಿಫಲವಾಗಿತ್ತು. ಆದರೂ ಆಗಸ್ಟ್ ತಿಂಗಳಲ್ಲಿ ಆರ್ಬಿಟರ್ ಅನ್ನು ಚಂದ್ರನ ಕಕ್ಷೆಯಲ್ಲಿ ಇಳಿಸುವಲ್ಲಿ ಇಸ್ರೋ ಯಶಸ್ವಿಯಾಗಿತ್ತು.

ಚಂದ್ರಯಾನ-3 ಗಗನಯಾನಕ್ಕೆ ಈ ವರ್ಷದ ಡಿಸೆಂಬರ್​ನಲ್ಲಿ ಮುಹೂರ್ತ ಫಿಕ್ಸ್ ಆಗಿತ್ತು. ಆದರೆ, ಕೊರೋನಾದಿಂದಾಗಿ ಅದು ಮುಂದೂಡಿಕೆಯಾಗಿತ್ತು. ಈ ಗಗನಯಾನಕ್ಕೆ 10,000 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. 2022ರ ಆಗಸ್ಟ್​ 15ರಂದು ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳಾಗುತ್ತವೆ. ಈ ನೆನಪಿನಲ್ಲಿ ಭಾರತದ ಬಹು ನಿರೀಕ್ಷಿತ ಚಂದ್ರಯಾನವೂ ಉಡಾವಣೆಯಾಗಲಿದೆ.

ಇದನ್ನೂ ಓದಿ: Chandrayaan 2 ಜುಲೈ 22 ಇಸ್ರೊಗೆ ಐತಿಹಾಸಿಕ ದಿನ; ಚಂದ್ರಯಾನ-2 ಬಗ್ಗೆ ಇಲ್ಲಿದೆ ಆಸಕ್ತಿಕರ ಸಂಗತಿ

(Chandrayaan 3 to be launched by ISRO in third quarter of 2022 Union Minister Jitendra Singh Announces)

Published On - 5:06 pm, Wed, 28 July 21

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು