AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan 3: 2022ರ ಆಗಸ್ಟ್​ ವೇಳೆಗೆ ಇಸ್ರೋದಿಂದ ಚಂದ್ರಯಾನ-3 ಉಡಾವಣೆ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ

ISRO Chandrayaan-3 | ಚಂದ್ರಯಾನ-3 ಗಗನಯಾನಕ್ಕೆ 2022ರ ಮೂರನೇ ತ್ರೈಮಾಸಿಕದ ವೇಳೆಗೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇಂದು ಹೇಳಿದ್ದಾರೆ.

Chandrayaan 3: 2022ರ ಆಗಸ್ಟ್​ ವೇಳೆಗೆ ಇಸ್ರೋದಿಂದ ಚಂದ್ರಯಾನ-3 ಉಡಾವಣೆ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ
ಚಂದ್ರಯಾನ
TV9 Web
| Updated By: ಸುಷ್ಮಾ ಚಕ್ರೆ|

Updated on:Jul 28, 2021 | 5:09 PM

Share

ನವದೆಹಲಿ: ಕೋವಿಡ್ ಅಟ್ಟಹಾಸದಿಂದ ಮುಂದೂಡಲ್ಪಟ್ಟಿದ್ದ ಚಂದ್ರಯಾನ-3 ಮಿಷನ್​ಗೆ 2022ರ ಅಂತ್ಯದ ವೇಳೆಗೆ ಇಸ್ರೋ (ISRO) ಚಾಲನೆ ನೀಡುವ ಸಾಧ್ಯತೆಯಿದೆ. ಎಲ್ಲ ಸರಿಯಾಗಿದ್ದರೆ 2021ರ ಡಿಸೆಂಬರ್​ನಲ್ಲಿ ಇಸ್ರೋದ ಬಹುನಿರೀಕ್ಷಿತ ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನ ಉಡಾವಣೆಗೊಳ್ಳಬೇಕಿತ್ತು. ಆದರೆ, ಕೊರೋನಾದಿಂದಾಗಿ ಆ ಯೋಜನೆ ಮುಂದೂಡಲ್ಪಟ್ಟಿದ್ದು, 2022ರ ಜುಲೈ-ಆಗಸ್ಟ್​ ಒಳಗೆ ಚಂದ್ರಯಾನ-3 ಚಾಲನೆಗೊಳ್ಳಲಿದೆ.

ಚಂದ್ರಯಾನ-3 ಗಗನಯಾನಕ್ಕೆ 2022ರ ಮೂರನೇ ತ್ರೈಮಾಸಿಕದ ವೇಳೆಗೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇಂದು ಹೇಳಿದ್ದಾರೆ. ಇಂದು ಲೋಕಸಭಾ ಕಲಾಪದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಜಿತೇಂದ್ರ ಸಿಂಗ್, ಕೊರೋನಾದಿಂದಾಗಿ ಚಂದ್ರಯಾನ-3ರ ಯೋಜನೆ ಮುಂದೂಡಲ್ಪಟ್ಟಿದೆ. ಅದಕ್ಕಾಗಿ ಇಸ್ರೋದ ವಿಜ್ಞಾನಿಗಳು ಈಗಾಗಲೇ ಸಿದ್ಧತೆ ನಡೆಸಿದ್ದಾರೆ. ಮುಂದಿನ ವರ್ಷ ಆಗಸ್ಟ್​ ವೇಳೆಗೆ ಚಂದ್ರಯಾನ-3 ಉಡಾವಣೆಯಾಗಲಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಚಂದ್ರನ ಮೇಲ್ಭಾಗದಲ್ಲಿ ಲ್ಯಾಂಡರ್ ಅನ್ನು ಇಳಿಸುವ ಇಸ್ರೋದ ಚಂದ್ರಯಾನ-2ಗೆ 2019ರ ಜುಲೈ ತಿಂಗಳಲ್ಲಿ ಚಾಲನೆ ನೀಡಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಇಸ್ರೋದ ಪ್ರಯತ್ನ ವಿಫಲವಾಗಿತ್ತು. ಆದರೂ ಆಗಸ್ಟ್ ತಿಂಗಳಲ್ಲಿ ಆರ್ಬಿಟರ್ ಅನ್ನು ಚಂದ್ರನ ಕಕ್ಷೆಯಲ್ಲಿ ಇಳಿಸುವಲ್ಲಿ ಇಸ್ರೋ ಯಶಸ್ವಿಯಾಗಿತ್ತು.

ಚಂದ್ರಯಾನ-3 ಗಗನಯಾನಕ್ಕೆ ಈ ವರ್ಷದ ಡಿಸೆಂಬರ್​ನಲ್ಲಿ ಮುಹೂರ್ತ ಫಿಕ್ಸ್ ಆಗಿತ್ತು. ಆದರೆ, ಕೊರೋನಾದಿಂದಾಗಿ ಅದು ಮುಂದೂಡಿಕೆಯಾಗಿತ್ತು. ಈ ಗಗನಯಾನಕ್ಕೆ 10,000 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. 2022ರ ಆಗಸ್ಟ್​ 15ರಂದು ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳಾಗುತ್ತವೆ. ಈ ನೆನಪಿನಲ್ಲಿ ಭಾರತದ ಬಹು ನಿರೀಕ್ಷಿತ ಚಂದ್ರಯಾನವೂ ಉಡಾವಣೆಯಾಗಲಿದೆ.

ಇದನ್ನೂ ಓದಿ: Chandrayaan 2 ಜುಲೈ 22 ಇಸ್ರೊಗೆ ಐತಿಹಾಸಿಕ ದಿನ; ಚಂದ್ರಯಾನ-2 ಬಗ್ಗೆ ಇಲ್ಲಿದೆ ಆಸಕ್ತಿಕರ ಸಂಗತಿ

(Chandrayaan 3 to be launched by ISRO in third quarter of 2022 Union Minister Jitendra Singh Announces)

Published On - 5:06 pm, Wed, 28 July 21

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು