AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan 3: 2022ರ ಆಗಸ್ಟ್​ ವೇಳೆಗೆ ಇಸ್ರೋದಿಂದ ಚಂದ್ರಯಾನ-3 ಉಡಾವಣೆ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ

ISRO Chandrayaan-3 | ಚಂದ್ರಯಾನ-3 ಗಗನಯಾನಕ್ಕೆ 2022ರ ಮೂರನೇ ತ್ರೈಮಾಸಿಕದ ವೇಳೆಗೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇಂದು ಹೇಳಿದ್ದಾರೆ.

Chandrayaan 3: 2022ರ ಆಗಸ್ಟ್​ ವೇಳೆಗೆ ಇಸ್ರೋದಿಂದ ಚಂದ್ರಯಾನ-3 ಉಡಾವಣೆ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ
ಚಂದ್ರಯಾನ
TV9 Web
| Updated By: ಸುಷ್ಮಾ ಚಕ್ರೆ|

Updated on:Jul 28, 2021 | 5:09 PM

Share

ನವದೆಹಲಿ: ಕೋವಿಡ್ ಅಟ್ಟಹಾಸದಿಂದ ಮುಂದೂಡಲ್ಪಟ್ಟಿದ್ದ ಚಂದ್ರಯಾನ-3 ಮಿಷನ್​ಗೆ 2022ರ ಅಂತ್ಯದ ವೇಳೆಗೆ ಇಸ್ರೋ (ISRO) ಚಾಲನೆ ನೀಡುವ ಸಾಧ್ಯತೆಯಿದೆ. ಎಲ್ಲ ಸರಿಯಾಗಿದ್ದರೆ 2021ರ ಡಿಸೆಂಬರ್​ನಲ್ಲಿ ಇಸ್ರೋದ ಬಹುನಿರೀಕ್ಷಿತ ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನ ಉಡಾವಣೆಗೊಳ್ಳಬೇಕಿತ್ತು. ಆದರೆ, ಕೊರೋನಾದಿಂದಾಗಿ ಆ ಯೋಜನೆ ಮುಂದೂಡಲ್ಪಟ್ಟಿದ್ದು, 2022ರ ಜುಲೈ-ಆಗಸ್ಟ್​ ಒಳಗೆ ಚಂದ್ರಯಾನ-3 ಚಾಲನೆಗೊಳ್ಳಲಿದೆ.

ಚಂದ್ರಯಾನ-3 ಗಗನಯಾನಕ್ಕೆ 2022ರ ಮೂರನೇ ತ್ರೈಮಾಸಿಕದ ವೇಳೆಗೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇಂದು ಹೇಳಿದ್ದಾರೆ. ಇಂದು ಲೋಕಸಭಾ ಕಲಾಪದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಜಿತೇಂದ್ರ ಸಿಂಗ್, ಕೊರೋನಾದಿಂದಾಗಿ ಚಂದ್ರಯಾನ-3ರ ಯೋಜನೆ ಮುಂದೂಡಲ್ಪಟ್ಟಿದೆ. ಅದಕ್ಕಾಗಿ ಇಸ್ರೋದ ವಿಜ್ಞಾನಿಗಳು ಈಗಾಗಲೇ ಸಿದ್ಧತೆ ನಡೆಸಿದ್ದಾರೆ. ಮುಂದಿನ ವರ್ಷ ಆಗಸ್ಟ್​ ವೇಳೆಗೆ ಚಂದ್ರಯಾನ-3 ಉಡಾವಣೆಯಾಗಲಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಚಂದ್ರನ ಮೇಲ್ಭಾಗದಲ್ಲಿ ಲ್ಯಾಂಡರ್ ಅನ್ನು ಇಳಿಸುವ ಇಸ್ರೋದ ಚಂದ್ರಯಾನ-2ಗೆ 2019ರ ಜುಲೈ ತಿಂಗಳಲ್ಲಿ ಚಾಲನೆ ನೀಡಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಇಸ್ರೋದ ಪ್ರಯತ್ನ ವಿಫಲವಾಗಿತ್ತು. ಆದರೂ ಆಗಸ್ಟ್ ತಿಂಗಳಲ್ಲಿ ಆರ್ಬಿಟರ್ ಅನ್ನು ಚಂದ್ರನ ಕಕ್ಷೆಯಲ್ಲಿ ಇಳಿಸುವಲ್ಲಿ ಇಸ್ರೋ ಯಶಸ್ವಿಯಾಗಿತ್ತು.

ಚಂದ್ರಯಾನ-3 ಗಗನಯಾನಕ್ಕೆ ಈ ವರ್ಷದ ಡಿಸೆಂಬರ್​ನಲ್ಲಿ ಮುಹೂರ್ತ ಫಿಕ್ಸ್ ಆಗಿತ್ತು. ಆದರೆ, ಕೊರೋನಾದಿಂದಾಗಿ ಅದು ಮುಂದೂಡಿಕೆಯಾಗಿತ್ತು. ಈ ಗಗನಯಾನಕ್ಕೆ 10,000 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. 2022ರ ಆಗಸ್ಟ್​ 15ರಂದು ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳಾಗುತ್ತವೆ. ಈ ನೆನಪಿನಲ್ಲಿ ಭಾರತದ ಬಹು ನಿರೀಕ್ಷಿತ ಚಂದ್ರಯಾನವೂ ಉಡಾವಣೆಯಾಗಲಿದೆ.

ಇದನ್ನೂ ಓದಿ: Chandrayaan 2 ಜುಲೈ 22 ಇಸ್ರೊಗೆ ಐತಿಹಾಸಿಕ ದಿನ; ಚಂದ್ರಯಾನ-2 ಬಗ್ಗೆ ಇಲ್ಲಿದೆ ಆಸಕ್ತಿಕರ ಸಂಗತಿ

(Chandrayaan 3 to be launched by ISRO in third quarter of 2022 Union Minister Jitendra Singh Announces)

Published On - 5:06 pm, Wed, 28 July 21

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು