AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ-5 ಯೋಜನೆಗೆ ಕೇಂದ್ರ ಅನುಮೋದನೆ: ಇಸ್ರೋ ಅಧ್ಯಕ್ಷ ನಾರಾಯಣನ್

Chandrayaan-5: ಕೇಂದ್ರ ಸರ್ಕಾರವು ಇಸ್ರೋದ ಮಹತ್ವದ ಯೋಜನೆಗಳಲ್ಲಿ ಒಂದಾದ ಚಂದ್ರಯಾನ-5 ಯೋಜನೆಗೆ ಅನುಮೋದನೆ ನೀಡಿದೆ. ಈ ಕುರಿತು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಮಾಹಿತಿ ನೀಡಿದ್ದಾರೆ. 25 ಕೆಜಿ ತೂಕದ ರೋವರ್ ‘ಪ್ರಯಾಗ್ಯಾನ್' ಅನ್ನು ಹೊತ್ತ ಚಂದ್ರಯಾನ-3 ಮಿಷನ್‌ಗಿಂತ ಭಿನ್ನವಾಗಿರಲಿದೆ ಎಂದು ಹೇಳಿದ್ದಾರೆ.

ಚಂದ್ರಯಾನ-5 ಯೋಜನೆಗೆ ಕೇಂದ್ರ ಅನುಮೋದನೆ: ಇಸ್ರೋ ಅಧ್ಯಕ್ಷ ನಾರಾಯಣನ್
ಚಂದ್ರಯಾನImage Credit source: The Hindu
ನಯನಾ ರಾಜೀವ್
|

Updated on: Mar 17, 2025 | 7:52 AM

Share

ಇಸ್ರೋದ ಮಹತ್ವದ ಯೋಜನೆಗಳಲ್ಲಿ ಒಂದಾದ ಚಂದ್ರಯಾನ-5(Chandrayaan-5) ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಕುರಿತು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಮಾಹಿತಿ ನೀಡಿದ್ದಾರೆ. 25 ಕೆಜಿ ತೂಕದ ರೋವರ್ ‘ಪ್ರಯಾಗ್ಯಾನ್’ ಅನ್ನು ಹೊತ್ತ ಚಂದ್ರಯಾನ-3 ಮಿಷನ್‌ಗಿಂತ ಭಿನ್ನವಾಗಿ, ಚಂದ್ರಯಾನ-5 ಮಿಷನ್ ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡಲು 250 ಕೆಜಿ ತೂಕದ ರೋವರ್ ಅನ್ನು ಹೊತ್ತೊಯ್ಯಲಿದೆ ಎಂದು ನಾರಾಯಣನ್ ಹೇಳಿದರು.

ಚಂದ್ರಯಾನ ಮಿಷನ್ ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡುವುದನ್ನು ಒಳಗೊಂಡಿದೆ. 2008 ರಲ್ಲಿ ಯಶಸ್ವಿಯಾಗಿ ಉಡಾವಣೆಯಾದ ಚಂದ್ರಯಾನ-1 ಚಂದ್ರನ ರಾಸಾಯನಿಕ, ಖನಿಜ ಮತ್ತು ಛಾಯಾಗ್ರಹಣ-ಭೂವೈಜ್ಞಾನಿಕ ನಕ್ಷೆಯನ್ನು ತೆಗೆದುಕೊಂಡಿತು. ಚಂದ್ರಯಾನ-2 ಮಿಷನ್ (2019) ಶೇಕಡಾ 98 ರಷ್ಟು ಯಶಸ್ಸನ್ನು ಕಂಡಿತು ಆದರೆ ಅಂತಿಮ ಹಂತಗಳಲ್ಲಿ ಕೇವಲ ಎರಡು ಪ್ರತಿಶತದಷ್ಟು ಮಾತ್ರ ಸಾಧಿಸಲು ಸಾಧ್ಯವಾಗಲಿಲ್ಲ.

ಚಂದ್ರಯಾನ-2 ರಲ್ಲಿರುವ ಹೈ ರೆಸಲ್ಯೂಷನ್ ಕ್ಯಾಮೆರಾ ನೂರಾರು ಚಿತ್ರಗಳನ್ನು ಕಳುಹಿಸಿದೆ. ಚಂದ್ರಯಾನ-3 ಮಿಷನ್ ಚಂದ್ರಯಾನ-2 ರ ನಂತರದ ಕಾರ್ಯಾಚರಣೆಯಾಗಿದ್ದು, ಚಂದ್ರನ ಮೇಲ್ಮೈಯಲ್ಲಿ ಸುರಕ್ಷಿತ ಇಳಿಯುವಿಕೆ ಮತ್ತು ಸಂಚಾರದಲ್ಲಿ ಸಂಪೂರ್ಣ ಸಾಮರ್ಥ್ಯವನ್ನು ಪ್ರದರ್ಶಿಸುತ್ತದೆ.

ಮತ್ತಷ್ಟು ಓದಿ: Chandrayaan 3 Scientists: ಈ ಮೂನ್ ಮಿಷನ್‌ನ ಹಿಂದಿನ ಅದ್ಭುತ ವಿಜ್ಞಾನಿಗಳ ಪರಿಚಯ ಇಲ್ಲಿದೆ

ಆಗಸ್ಟ್ 23, 2023 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್ ವಿಕ್ರಮ್ ಯಶಸ್ವಿಯಾಗಿ ‘ಸಾಫ್ಟ್-ಲ್ಯಾಂಡಿಂಗ್’ ಮಾಡುವ ಮೂಲಕ ಇಸ್ರೋ ಚಂದ್ರಯಾನ-3 ಮಿಷನ್ ಅನ್ನು ಯಶಸ್ವಿಯಾಗಿ ಪ್ರಾರಂಭಿಸಿತು. “ಮೂರು ದಿನಗಳ ಹಿಂದೆಯಷ್ಟೇ ನಮಗೆ ಚಂದ್ರಯಾನ-5 ಮಿಷನ್‌ಗೆ ಅನುಮೋದನೆ ಸಿಕ್ಕಿತು. ನಾವು ಅದನ್ನು ಜಪಾನ್ ಸಹಯೋಗದೊಂದಿಗೆ ಮಾಡುತ್ತೇವೆ” ಎಂದು ನಾರಾಯಣನ್ ತಿಳಿಸಿದ್ದಾರೆ.

2027ರಲ್ಲಿ ಉಡಾವಣೆಯಾಗುವ ನಿರೀಕ್ಷೆಯಲ್ಲಿರುವ ಚಂದ್ರಯಾನ-4 ಮಿಷನ್ ಚಂದ್ರನಿಂದ ಸಂಗ್ರಹಿಸಿದ ಮಾದರಿಗಳನ್ನು ತರುವ ಗುರಿ ಹೊಂದಿದೆ. ಗಗನಯಾನದ ಜತೆಗೆ ಬಾಹ್ಯಾಕಾಶದಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣವನ್ನು ಸ್ಥಾಪಿಸುವ ಯೋಜನೆಯೂ ಕೂಡ ನಡೆಯುತ್ತಿದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು