AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಕ್ಷೇತ್ರದಲ್ಲಿ ಬದಲಾಗುತ್ತಿದೆ ಜಮ್ಮು-ಕಾಶ್ಮೀರ, ಅಲೆಕ್ಸಾಂಡರ್ ಕೆಡವಿದ ಸೂರ್ಯ ದೇವಾಲಯ ಪುನರ್​​ ನಿರ್ಮಾಣ

ಜಮ್ಮು-ಕಾಶ್ಮೀರ ಅನೇಕ ವಿಚಾರಗಳಲ್ಲಿ ಬದಲಾಗುತ್ತಿದೆ. ಧಾರ್ಮಿಕ ಕ್ಷೇತ್ರದಲ್ಲೂ ಕೂಡ ದೊಡ್ಡ ಮಟ್ಟದ ಬದಲಾವಣೆಯನ್ನು ಮಾಡುತ್ತಿದೆ. ಇದಕ್ಕೆ ಸಾಕ್ಷಿ ಇಲ್ಲಿದೆ ನೋಡಿ. ಅನಂತನಾಗ್‌ನಲ್ಲಿ ಕ್ರಿ.ಶ.750 ರಲ್ಲಿ ರಾಜ ಲಾಲಿದಾದಿತ್ಯ ನಿರ್ಮಿಸಿದ್ದ ಸೂರ್ಯ ದೇವಾಲಯವನ್ನು ಅಲೆಕ್ಸಾಂಡರ್ ಕೆಡವಿದ, ಇದೀಗ ಈ ದೇವಾಲಯವನ್ನು ಅಲ್ಲಿನ ಜನರು ಪುನರ್​​ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

ಧಾರ್ಮಿಕ ಕ್ಷೇತ್ರದಲ್ಲಿ ಬದಲಾಗುತ್ತಿದೆ ಜಮ್ಮು-ಕಾಶ್ಮೀರ, ಅಲೆಕ್ಸಾಂಡರ್ ಕೆಡವಿದ ಸೂರ್ಯ ದೇವಾಲಯ ಪುನರ್​​ ನಿರ್ಮಾಣ
ಸೂರ್ಯ ದೇವಾಲಯImage Credit source: Google
ಅಕ್ಷಯ್​ ಪಲ್ಲಮಜಲು​​
|

Updated on: Apr 27, 2024 | 10:20 AM

Share

ಜಮ್ಮು-ಕಾಶ್ಮೀರದಲ್ಲಿ ಅನೇಕ ಬದಲಾವಣೆಗಳು ಆಗುತ್ತಿದೆ. ಹಿಂಸೆಗಳನ್ನು ಕಾಣುತ್ತಿದ್ದ ಈ ರಾಜ್ಯದಲ್ಲಿ ಶಾಂತಿ, ಧಾರ್ಮಿಕ ಬದಲಾವಣೆಗಳು ಆಗುತ್ತಿದೆ. ಇದೀಗ ಇಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ಮಾಡಲು ಇಲ್ಲಿನ ಜನ ಮುಂದಾಗಿದ್ದಾರೆ. ಹೌದು ಜಮ್ಮು ಮತ್ತು ಕಾಶ್ಮೀರದಲ್ಲಿರುವ ದೇಶದ ಅತ್ಯಂತ ಪುರಾತನ ಸೂರ್ಯ ದೇವಾಲಯವನ್ನು ಪುನರ್​​​ನಿರ್ಮಾಣ ಮಾಡಲಾಗುತ್ತಿದೆ. ಅನಂತನಾಗ್‌ನಲ್ಲಿ ನಿರ್ಮಿಸಲಾದ ಈ ಸೂರ್ಯ ದೇವಾಲಯವನ್ನು ಶೀಘ್ರದಲ್ಲೇ ನವೀಕರಿಸಲಾಗುವುದು ಎಂದು ಹೇಳಲಾಗಿದೆ. ಇನ್ನು ದೇವಾಲಯಕ್ಕಾಗಿ ಒಂದು ಸಮಿತಿಯನ್ನು ರಚನೆ ಮಾಡಲಾಗಿದೆ. ಇದರ ಮೊದಲ ಸಭೆಯಲ್ಲಿ ದೇವಾಲಯ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸುವ ತಿರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಮಾರ್ತಾಂಡ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಬಹುದಿನಗಳಿಂದ ಬೇಡಿಕೆ ಇತ್ತು. ಇದಕ್ಕಾಗಿ ಹಿಂದೂ ಮತ್ತು ಮುಸ್ಲಿಂ ಎರಡೂ ಧರ್ಮಗಳ ಜನರು ದೇವಾಲಯದ ಪುನರ್​​​ ನಿರ್ಮಾಣಕ್ಕೆ ಅಭಿಯಾನ ಕೂಡ ನಡೆಸಿದರು ಎಂದು ಹೇಳಲಾಗಿದೆ. ಈ ದೇವಾಲಯವು ಶ್ರೀನಗರದಿಂದ ಸುಮಾರು 63 ಕಿಲೋಮೀಟರ್ ದೂರದಲ್ಲಿದೆ. ಈ ದೇವಾಲಯವನ್ನು ಕ್ರಿ.ಶ.750 ರಲ್ಲಿ ರಾಜ ಲಾಲಿದಾದಿತ್ಯ ನಿರ್ಮಿಸಿದ್ದ, ಇದು ದೇಶದ ಹಳೆಯ ಪರಂಪರೆಗಳಲ್ಲಿ ಇದೂ ಒಂದಾಗಿದ್ದು, ಇದೀಗ ಇದನ್ನು ಪುನರ್​​​ ನಿರ್ಮಾಣ ಮಾಡಲಾಗುತ್ತಿದೆ.

ದೇವಾಲಯವನ್ನು ಯಾವ ಶೈಲಿಯಲ್ಲಿ ನಿರ್ಮಿಸಲಾಗಿದೆ?

ಈ ಸೂರ್ಯ ದೇವಾಲಯವು ಕಾಶ್ಮೀರಿ ವಾಸ್ತುಶಿಲ್ಪದ ಸೌಂದರ್ಯವನ್ನು ಒಳಗೊಂಡಿದೆ. ಈ ದೇವಾಲಯದ ನಿರ್ಮಾಣದಲ್ಲಿ ಕಂಧಾರ, ಚೈನೀಸ್ ಮತ್ತು ಗುಪ್ತ ರೋಮನ್ ಶೈಲಿಗಳನ್ನು ಬಳಸಲಾಗಿದೆ. ದೇವಾಲಯವು 270 ಅಡಿ ವಿಸ್ತೀರ್ಣವನ್ನು ಹೊಂದಿದ್ದು, ಅಗಲ 180 ಅಡಿ ಇದೆ. ಇದರ ಜತೆಗೆ ಇನ್ನು ಆಶ್ಚರ್ಯಕರ ಸಂಗತಿಯೆಂದರೆ, ಮಾರ್ತಾಂಡ ದೇವಾಲಯವು ಎಎಸ್‌ಐ (Archaeological Survey of India) ಸಂರಕ್ಷಿತ ತಾಣಗಳಲ್ಲಿ ಒಂದಾಗಿದೆ. ಆದರೆ ಇಲ್ಲಿ ಸೂರ್ಯನಿಗೆ ಇಂದು ಪೂಜೆ ನಡೆಯುತ್ತಿಲ್ಲ ಎಂದು ಸಮಿತಿ ಹೇಳಿದೆ. ಗುಜರಾತ್ ಮತ್ತು ಒಡಿಶಾದಲ್ಲೂ ಸೂರ್ಯ ದೇವಾಲಯಗಳು ಸಹ ಎಎಸ್‌ಐ ಸಂರಕ್ಷಿತ ದೇವಾಲಯಗಳಾಗಿವೆ ಹಾಗೂ ಇಲ್ಲಿನ ಸೂರ್ಯ ದೇವಾಲಯಗಳಲ್ಲಿ ಪೂಜೆ ಮಾಡಲಾಗುತ್ತದೆ.

ಇದನ್ನೂ ಓದಿ:  ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ, ಅಂಕ ನೀಡಿದ ಪ್ರಾಧ್ಯಾಪಕರು ಅಮಾನತು

ಅಲೆಕ್ಸಾಂಡರ್ ಮಾರ್ತಾಂಡ ದೇವಾಲಯವನ್ನು ಕೆಡವಿದ್ದ

ಅಲೆಕ್ಸಾಂಡರ್ 15ನೇ ಶತಮಾನದಲ್ಲಿ ಭಾರತದ 1600 ವರ್ಷಗಳಷ್ಟು ಹಳೆಯ ಸಂಪತ್ತನ್ನು ಸಂಪೂರ್ಣವಾಗಿ ನಾಶ ಮಾಡಲು ಮುಂದಾಗಿದ್ದ, ಇದರಲ್ಲಿ ಜಮ್ಮು – ಕಾಶ್ಮೀರದಲ್ಲಿರು ಈ ಸೂರ್ಯದೇವಾಲವು ಒಂದಾಗಿತ್ತು. ಆದರೆ ಇದನ್ನು ನಾಶಮಾಡಲು ಬಹಳ ಕಷ್ಟಪಟ್ಟಿದ್ದ, ಇದನ್ನು ಕೆಡವಲು ಸುಮಾರು ಎರಡು ವರ್ಷಗಳ ಕಾಲ ಪ್ರಯತ್ನ ಪಟ್ಟಿದ್ದ, ಕೊನೆಗೂ ಇದನ್ನು ಕೆಡವಿದ್ದಾನೆ. ಆದರೆ 500 ವರ್ಷಗಳ ನಂತರವೂ ಈ ದೇವಾಲಯದ ಕೆತ್ತನೆಗಳು ಮತ್ತು ವಿಭಿನ್ನ ಶೈಲಿಗಳ ಸೌಂದರ್ಯವು ಗೋಚರಿಸುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ