AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Char Dham Yatra 2021: ಚಾರ್​ಧಾಮ್​ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ ಉತ್ತರಾಖಂಡ ಸರ್ಕಾರ; ಹೈಕೋರ್ಟ್ ಆದೇಶ ಪಾಲನೆ

ಹೈಕೋರ್ಟ್​ ತಡೆ ನೀಡಿದ್ದರೂ ಸರ್ಕಾರ ತಲೆ ಕೆಡಿಸಿಕೊಳ್ಳದೆ, ಮೂರು ಜಿಲ್ಲೆಗಳ ಚಾರ್​ಧಾಮ್​ ಯಾತ್ರಿಕರಿಗಾಗಿ ಹೊಸ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿತ್ತು. ಈ ಜಿಲ್ಲೆಗಳಿಂದ ಬರುವ ಯಾತ್ರಿಕರು ಮೊದಲೇ ನೋಂದಣಿ ಮಾಡಿಕೊಳ್ಳಬೇಕು ಎಂದು ಹೇಳಿತ್ತು.

Char Dham Yatra 2021: ಚಾರ್​ಧಾಮ್​ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ ಉತ್ತರಾಖಂಡ ಸರ್ಕಾರ; ಹೈಕೋರ್ಟ್ ಆದೇಶ ಪಾಲನೆ
ಬದ್ರಿನಾಥ ದೇಗುಲ
Follow us
TV9 Web
| Updated By: Lakshmi Hegde

Updated on: Jun 29, 2021 | 4:16 PM

ಚಾರ್​ಧಾಮ್​ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಉತ್ತರಾಖಂಡ ಸರ್ಕಾರ ಆದೇಶ ನೀಡಿದೆ. ಮುಂದಿನ ಸೂಚನೆಯವರೂ ಚಾರ್​ ಧಾಮ್​ ಯಾತ್ರೆ ರದ್ದಾಗಿರಲಿದೆ ಎಂದು ಹೇಳಿದೆ. ಕೊವಿಡ್​ 19 ಕಾರಣದಿಂದ ಚಾರ್​ ಧಾಮ್​ ಯಾತ್ರೆಗೆ ಅವಕಾಶ ಕೊಡುವುದಿಲ್ಲ ಎಂದು ಹಿಂದೆಯೇ ಹೇಳಿದ್ದ ಉತ್ತರಾಖಂಡ ಸರ್ಕಾರ ಬಳಿಕ ಸ್ಥಳೀಯ ಮೂರು ಜಿಲ್ಲೆಗಳಾದ ಚಮೋಲಿ, ರುದ್ರಪ್ರಯಾಗ ಮತ್ತು ಉತ್ತರಕಾಶಿ ಜನರಿಗಾಗಿ ಜುಲೈ 1ರಿಂದ ಚಾರ್​ ಧಾಮ್ ಯಾತ್ರೆಗೆ ಅವಕಾಶ ಮಾಡಿಕೊಡಲು, ಜೂನ್​ 25ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿತ್ತು. ಆದರೆ ಸರ್ಕಾರ ಈ ನಿರ್ಧಾರಕ್ಕೆ ಉತ್ತಾರಖಂಡ ಹೈಕೋರ್ಟ್​ ನಾಲ್ಕು ವಾರಗಳ ತಾತ್ಕಾಲಿಕ ತಡೆ ನೀಡಿತ್ತು. ಈ ನಾಲ್ಕೂ ದೇವಸ್ಥಾನಗಳ ಗರ್ಭಗುಡಿಯೊಳಗೆ ನಡೆಯುವ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರಿಗೆ ನೇರಪ್ರಸಾರದ ಮೂಲಕ ವೀಕ್ಷಣೆಗೆ ಅವಕಾಶ ಮಾಡಿಕೊಡುವಂತೆ ನಿರ್ದೇಶನ ನೀಡಿತ್ತು.

ಆದರೆ ಹೈಕೋರ್ಟ್​ ತಡೆ ನೀಡಿದ್ದರೂ ಸರ್ಕಾರ ತಲೆ ಕೆಡಿಸಿಕೊಳ್ಳದೆ, ಮೂರು ಜಿಲ್ಲೆಗಳ ಚಾರ್​ಧಾಮ್​ ಯಾತ್ರಿಕರಿಗಾಗಿ ಹೊಸ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿತ್ತು. ಈ ಜಿಲ್ಲೆಗಳಿಂದ ಬರುವ ಯಾತ್ರಿಕರು ಮೊದಲೇ ನೋಂದಣಿ ಮಾಡಿಕೊಳ್ಳಬೇಕು. ಆರ್​ಟಿಪಿಸಿಆರ್​/ಟ್ರ್ಯೂನ್ಯಾಟ್​/ರ್ಯಾಪಿಡ್​ ಟೆಸ್ಟ್​ ನೆಗೆಟಿವ್​ ರಿಪೋಟ್​​ನ್ನು ಕಡ್ಡಾಯವಾಗಿ ತರಬೇಕು. ಮೊದಲ ಹಂತದ ಯಾತ್ರೆ ಜುಲೈ 1ರಿಂದ ಮತ್ತು 2ನೇ ಹಂತದ ಯಾತ್ರೆ ಜುಲೈ 11ರಿಂದ ಪ್ರಾರಂಭವಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳಿತ್ತು.

ಅದಕ್ಕೆ ಪ್ರತಿಕ್ರಿಯಿಸಿದ್ದ ಉತ್ತರಾಖಂಡ ಸರ್ಕಾರದ ವಕ್ತಾರ ಸುಬೋಧ್​ ಉನಿಯಲ್​, ಹೈಕೋರ್ಟ್ ಆದೇಶವನ್ನು ಒಮ್ಮೆ ನಾವೂ ಪರಾಮರ್ಶಿಸುತ್ತೇವೆ. ಅಗತ್ಯ ಬಿದ್ದರೆ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಹೇಳಿದ್ದರು. ಕೇದಾರನಾಥ, ಬದ್ರಿನಾಥ, ಯಮುನೋತ್ರಿ ಮತ್ತು ಗಂಗೋತ್ರಿ ಪವಿತ್ರ ಕ್ಷೇತ್ರಗಳ ಭೇಟಿಗೆ ಚಾರ್​ಧಾಮ್​ ಯಾತ್ರೆ ಎಂದು ಹೆಸರು ಬಂದಿದೆ. ಈ ನಾಲ್ಕೂ ದೇವಸ್ಥಾನಗಳು ಚಮೋಲಿ, ರುದ್ರಪ್ರಯಾಗ, ಉತ್ತರಕಾಶಿ ಜಿಲ್ಲೆಗಳಲ್ಲಿ ಇದ್ದು, ಅಲ್ಲಿನ ನಿವಾಸಿಗಳಿಗೆ ಮಾತ್ರ ಅವಕಾಶ ನೀಡಲೆಂದು ಸರ್ಕಾರ ಪ್ರಯತ್ನ ಮಾಡಿತ್ತು.

ಇದನ್ನೂ ಓದಿ: ಸಂಸತ್ ಮುಂಗಾರು ಅಧಿವೇಶನ ಜುಲೈ 19ರಿಂದ ನಡೆಸುವಂತೆ ಸಂಸದೀಯ ವ್ಯವಹಾರಗಳ ಸಮಿತಿ ಶಿಫಾರಸು

(Char Dham Yatra 2021 suspends by Uttarakhand Government)

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ