Char Dham Yatra 2022: ಚಾರ್​ಧಾಮ್ ಯಾತ್ರೆ ವೇಳೆ ಈ ಬಾರಿ 201 ಭಕ್ತರು ಸಾವು

ಈ ಚಾರ್​ ಧಾಮ ಯಾತ್ರೆಯು ಮೇ 3ರಂದು ಪ್ರಾರಂಭವಾಯಿತು. ಅಕ್ಟೋಬರ್ ಅಂತ್ಯದಲ್ಲಿ ಈ ಯಾತ್ರೆ ಮುಕ್ತಾಯಗೊಳ್ಳಲಿದೆ. ಇಲ್ಲಿಯವರೆಗೆ, ಚಾರ್​ ಧಾಮ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳ ಸಂಖ್ಯೆ 2,50,000 ದಾಟಿದೆ.

Char Dham Yatra 2022: ಚಾರ್​ಧಾಮ್ ಯಾತ್ರೆ ವೇಳೆ ಈ ಬಾರಿ 201 ಭಕ್ತರು ಸಾವು
ಚಾರ್​​ ಧಾಮ್ ಯಾತ್ರೆಯ ಭಕ್ತರುImage Credit source: Hindustan Times
Follow us
| Updated By: ಸುಷ್ಮಾ ಚಕ್ರೆ

Updated on: Jun 27, 2022 | 8:01 AM

ಉತ್ತರಾಖಂಡ: ಉತ್ತರಾಖಂಡದಲ್ಲಿ ನಡೆಯುತ್ತಿರುವ ಚಾರ್ ಧಾಮ್ ಯಾತ್ರೆಯಲ್ಲಿ (Char Dham Yatra) ಇದುವರೆಗೆ 200ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿದ್ದಾರೆ ಎಂದು ಉತ್ತರಾಖಂಡ ಸರ್ಕಾರ (Uttarakhand Government) ಬಿಡುಗಡೆ ಮಾಡಿದ ಅಂಕಿ-ಅಂಶಗಳು ತಿಳಿಸಿವೆ. ಅನಾರೋಗ್ಯವೇ ಈ ಯಾತ್ರೆಯ ವಯಸ್ಸಾದ ಭಕ್ತರ ಸಾವಿಗೆ ಪ್ರಮುಖ ಕಾರಣವಾಗಿದೆ ಎಂದು ತಿಳಿಸಲಾಗಿದೆ.

ಭಾರೀ ಮಳೆಯಿಂದ ಭೂಕುಸಿತಗಳು ಸಂಭವಿಸುತ್ತಿರುವುದರಿಂದ ಚಾರ್​ ಧಾಮ ಯಾತ್ರೆಯನ್ನು ಸುಗಮವಾಗಿ ನಡೆಸುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಈ ಚಾರ್​ ಧಾಮ ಯಾತ್ರೆಯು ಮೇ 3ರಂದು ಪ್ರಾರಂಭವಾಯಿತು. ಅಕ್ಟೋಬರ್ ಅಂತ್ಯದಲ್ಲಿ ಈ ಯಾತ್ರೆ ಮುಕ್ತಾಯಗೊಳ್ಳಲಿದೆ. ಇಲ್ಲಿಯವರೆಗೆ, ಚಾರ್​ ಧಾಮ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳ ಸಂಖ್ಯೆ 2,50,000 ದಾಟಿದೆ. ಆದರೆ ಕಳೆದ ಒಂದು ವಾರದಿಂದ ಭಕ್ತರ ಸಂಖ್ಯೆ ಇಳಿಮುಖವಾಗಿದೆ.

ಡೆಹ್ರಾಡೂನ್‌ನ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ, ಕೇದಾರನಾಥ ಯಾತ್ರೆಯ ಮಾರ್ಗದಲ್ಲಿ 95, ಬದರಿನಾಥ ಧಾಮದಲ್ಲಿ 51, ಗಂಗೋತ್ರಿಯಲ್ಲಿ 13 ಮತ್ತು ಯಮುನೋತ್ರಿಯಲ್ಲಿ 42 ಭಕ್ತರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Char Dham Yatra 2021: ಚಾರ್​ಧಾಮ್​ ಯಾತ್ರೆಯ ಮೇಲಿನ ನಿಷೇಧ ತೆರವುಗೊಳಿಸಿದ ಉತ್ತರಾಖಂಡ್ ಹೈಕೋರ್ಟ್​; ಈ ಷರತ್ತುಗಳ ಪಾಲನೆ ಕಡ್ಡಾಯ

ಉತ್ತರಾಖಂಡದ ಮಹಾನಿರ್ದೇಶಕಿ (ಆರೋಗ್ಯ) ಶೈಲಜಾ ಭಟ್ ಈ ಬಗ್ಗೆ ಮಾತನಾಡಿ, ಇಲಾಖೆಯು ಮೊದಲ ಬಾರಿಗೆ 9 ಸ್ಥಳಗಳಲ್ಲಿ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದೆ. ಕರಪತ್ರಗಳು ಮತ್ತು ಇತರ ವಿಧಾನಗಳ ಮೂಲಕ ನಿಯಮಿತವಾಗಿ ಆರೋಗ್ಯ ಸಲಹೆಗಳನ್ನು ನೀಡಲಾಗುತ್ತಿದೆ. ಯಾತ್ರಾರ್ಥಿಗಳಿಗೆ, ವಿಶೇಷವಾಗಿ ವೃದ್ಧರಿಗೆ ಯಾತ್ರೆಯಲ್ಲಿನ ಅಪಾಯಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.

ಚಾರ್ ಧಾಮ್ ಮಾರ್ಗಗಳಲ್ಲಿ 12 ವೈದ್ಯರನ್ನು ನಿಯೋಜಿಸಲಾಗಿದೆ. ಅಸ್ವಸ್ಥ ಯಾತ್ರಾರ್ಥಿಗಳನ್ನು ತುರ್ತು ಸಂದರ್ಭದಲ್ಲಿ ಸಕಾಲಿಕ ಚಿಕಿತ್ಸೆಗಾಗಿ ಹೆಲಿ- ಆ್ಯಂಬುಲೆನ್ಸ್ ಮೂಲಕ ಉನ್ನತ ವೈದ್ಯಕೀಯ ಕೇಂದ್ರಗಳಿಗೆ ಧಾವಿಸಲಾಗುತ್ತಿದೆ. ಇಲ್ಲಿಯವರೆಗೆ ಸಾವಿಗೆ ಪ್ರಮುಖವಾಗಿ ಹೃದಯ ಸಂಬಂಧಿ ಕಾಯಿಲೆಗಳು ಕಾರಣ. ವೈದ್ಯಕೀಯ ಇತಿಹಾಸ ಹೊಂದಿರುವ ಯಾತ್ರಾರ್ಥಿಗಳಿಗೆ ಮುಂದಿನ ಪ್ರಯಾಣವನ್ನು ಕೈಗೊಳ್ಳದಂತೆ ಮನವೊಲಿಸಲಾಗುತ್ತಿದೆ. ಅವರು ತಮ್ಮ ಪ್ರಯಾಣವನ್ನು ಮುಂದುವರಿಸಲು ಅಚಲವಾಗಿದ್ದರೆ ಅವರಿಂದ ತೀರ್ಮಾನ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಶೈಲಜಾ ಭಟ್ ಅವರ ಪ್ರಕಾರ, ಚಾರ್​ ಧಾಮ ಯಾತ್ರೆಯ ಮಾರ್ಗಗಳಲ್ಲಿ 20 ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಲ್ಲಿ 178 ಹೆಚ್ಚಿನ ವೈದ್ಯರನ್ನು ನಿಯೋಜಿಸಲಾಗಿದೆ.

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ