AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಚಾರ್ ಧಾಮ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಉತ್ತರಾಖಂಡ ರಾಜ್ಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಭೂಕುಸಿತ ಸಂಭವಿಸುತ್ತಿದೆ. ಇದರಿಂದಾಗಿ ರಸ್ತೆಗಳು ಅತ್ಯಂತ ಅಪಾಯಕಾರಿ ಸ್ಥಿತಿ ತಲುಪಿವೆ. ಈ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ವಾರ್ಷಿಕ ತೀರ್ಥಯಾತ್ರೆಗಳಲ್ಲಿ ಒಂದಾದ 'ಚಾರ್ ಧಾಮ್ ಯಾತ್ರೆ'ಯ ಭಕ್ತರ ಸುರಕ್ಷತೆಯ ಹಿತದೃಷ್ಟಿಯಿಂದ ಉತ್ತರಾಖಂಡ ಸರ್ಕಾರವು ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ಯಾತ್ರಾ ಮಾರ್ಗಗಳು ಸುರಕ್ಷಿತ ಎಂದು ಘೋಷಿಸುವವರೆಗೆ ಕೇದಾರ್‌ನಾಥ, ಬದರಿನಾಥ, ಗಂಗೋತ್ರಿ ಮತ್ತು ಯಮುನೋತ್ರಿ ಕಡೆಗೆ ಭಕ್ತರು ತೆರಳದಂತೆ ಅಧಿಕಾರಿಗಳು ನಿರ್ಬಂಧಿಸಿದ್ದಾರೆ.

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಚಾರ್ ಧಾಮ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ
Char Dham YatraImage Credit source: x
ಸುಷ್ಮಾ ಚಕ್ರೆ
|

Updated on: Jul 20, 2026 | 10:49 PM

Share

ಡೆಹ್ರಾಡೂನ್, ಜುಲೈ 20: ಉತ್ತರಾಖಂಡ (Uttarakhand Rains) ರಾಜ್ಯಾದ್ಯಂತ ಮುಂದುವರಿದಿರುವ ನಿರಂತರ ಮಳೆ, ಭೀಕರ ಭೂಕುಸಿತ ಮತ್ತು ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇಂದಿನಿಂದ (ಸೋಮವಾರ) ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ‘ಚಾರ್ ಧಾಮ್ ಯಾತ್ರೆ’ಯನ್ನು(Char Dham Yatra) ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದ ಬೆನ್ನಲ್ಲೇ, ಯಾತ್ರಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿರುವ ಉತ್ತರಾಖಂಡ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಈಗಾಗಲೇ ಪ್ರಯಾಣ ಬೆಳೆಸಿರುವ ಯಾತ್ರಿಕರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಹಾನಿಗೊಳಗಾದ ರಸ್ತೆಗಳನ್ನು ಸಂಪೂರ್ಣವಾಗಿ ದುರಸ್ತಿ ಮಾಡಿ, ಅವು ಸಂಚಾರಕ್ಕೆ ಸುರಕ್ಷಿತ ಎಂದು ಪ್ರಮಾಣೀಕರಿಸುವವರೆಗೆ ಭಕ್ತರನ್ನು ಮುಂದೆ ಸಾಗಲು ಬಿಡಬಾರದು ಎಂದು ಆದೇಶಿಸಲಾಗಿದೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಟ್ರೆಕಿಂಗ್ ಹೋಗಿದ್ದ ಎಂಬಿಎ ವಿದ್ಯಾರ್ಥಿನಿ ನಾಪತ್ತೆ; ಆಗಿದ್ದೇನು?

ಚಾರ್ ಧಾಮ ಯಾತ್ರಾ ಮಾರ್ಗಗಳಲ್ಲಿ ಸರಣಿ ಭೂಕುಸಿತ ಸಂಭವಿಸುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಆಡಳಿತ ತಿಳಿಸಿದೆ. ಪರಿಸ್ಥಿತಿ ಮತ್ತು ರಸ್ತೆಗಳು ಸಂಪೂರ್ಣವಾಗಿ ಯಥಾಸ್ಥಿತಿಗೆ ಮರಳಿದೆ ಎಂದು ಅಧಿಕಾರಿಗಳು ಖಚಿತಪಡಿಸಿಕೊಂಡ ನಂತರವಷ್ಟೇ ಚಾರ್ ಧಾಮ್ ಯಾತ್ರೆಯನ್ನು ಪುನರಾರಂಭಿಸಲಾಗುವುದು.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಅಲಕನಂದಾ, ಮಂದಾಕಿನಿ:

ರುದ್ರಪ್ರಯಾಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಲಕನಂದಾ ಮತ್ತು ಮಂದಾಕಿನಿ ನದಿಗಳ ನೀರಿನ ಮಟ್ಟ ಅಪಾಯದ ಮುನ್ಸೂಚನೆಯ ಮಟ್ಟಕ್ಕೆ ಬಂದು ತಲುಪಿದೆ. ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ನಮಾಮಿ ಗಂಗೆ ಯೋಜನೆಯಡಿ ನಿರ್ಮಿಸಲಾಗಿದ್ದ ಪ್ರಸಿದ್ಧ ನದಿ ತೀರದ ಘಾಟ್‌ಗಳು ನೀರಿನಲ್ಲಿ ಮುಳುಗಿವೆ. ಪ್ರಸ್ತುತ ಅಲಕನಂದಾ ನದಿಯು 625 ಮೀಟರ್ ಮತ್ತು ಮಂದಾಕಿನಿ ನದಿಯು 624 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದು, ಗಂಗಾನಗರ ಮತ್ತು ಗೌರಿಕುಂಡ್ ಭಾಗಗಳಲ್ಲೂ ನೀರಿನ ಮಟ್ಟವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಸೇತುವೆ ಸರಳು ಕಟ್: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌
ಸೇತುವೆ ಸರಳು ಕಟ್: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌